ಕಲಬುರಗಿ: ಹಿರಿಯ ಸಾಹಿತಿ ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ(70) ಧಾರವಾಡದಲ್ಲಿ ನಿಧನರಾಗಿದ್ದಾರೆ.
ಧಾರವಾಡದ ಕರ್ನಾಟಕ ವಿವಿಯ ಭಾಷಾ ಶಾಸ್ತ್ರದ ಪ್ರಾಧ್ಯಾಪಕರಾಗಿ ನಿವೃತರಾಗಿದ್ದರು. ನಂತರ ಮೈಸೂರಿನ ಭಾಷಾ ಸಂಸ್ಥಾನದ ನಿರ್ದೇಶಕರಾಗಿದ್ದರು. 2015ರ ಏಪ್ರಿಲ್ 20 ರಿಂದ 2020ರ ನವೆಂಬರ್ 13ರ ರವರೆಗೆ ಕರ್ನಾಟಕ ಕೇಂದ್ರೀಯ ವಿವಿಯ ಕುಪತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸದ್ಯ ಧಾರವಾಡದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಕೋವಿಡ್ನಿಂದ ಚೇತರಿಸಿಕೊಂಡಿದ್ದರು. ಇದನ್ನೂ ಓದಿ:ಬೆಳೆದ ಬೆಳೆ ಮಾರಲು ರೈತನ ಹೊಸ ಐಡಿಯಾ – ಜಾಲತಾಣ ಬಳಸಿಕೊಂಡು ಕಲ್ಲಂಗಡಿ ಮಾರಾಟ
ಪ್ರೊ.ಮಹೇಶ್ವರಯ್ಯ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದಾಗ, ಅಲ್ಲಿ ನಡೆಯುತ್ತಿದ್ದ ಆಂತರಿಕ ಜಗಳಗಳಿಗೆ ಕಡಿವಾಣ ಹಾಕುವ ಮೂಲಕ ಅನ್ಯ ರಾಜ್ಯಗಳಿಂದ ಬಂದಂತಹ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಉತ್ತಮ ವಾತಾವರಣ ನಿರ್ಮಿಸಿದ್ದರು. ಇದೀಗ ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.