ದಾವಣಗೆರೆ: ಕಸದ ಗಾಡಿ ಚಲಾಯಿಸುವ ಮೂಲಕ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಹನಕ್ಕೆ ಚಾಲನೆ ನೀಡಿದರು.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹೊಸ ಕಸದ ಗಾಡಿಗೆ ಚಾಲನೆ ನೀಡಿದ್ದು, ಇದೇ ವೇಳೆ ಕಸದ ಆಟೋವನ್ನು ಚಲಾಯಿಸಿದ್ದಾರೆ. ಇದೇ ವೇಳೆ ‘ನಮ್ಮ ನಡಿಗೆ ತ್ಯಾಜ್ಯ ಮುಕ್ತದ ಕಡೆಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಾಸಕರು ವಾಹನ ಚಾಲನೆ ಮಾಡಿದ್ದಕ್ಕೆ ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ನೆರೆದಿದ್ದ ಜನತೆ ಕೇಕೆ, ಹಾಕಿ ಶಿಳ್ಳೆ ಹೊಡೆದು ಖುಷಿ ಪಟ್ಟರು.
ಹೊಸದಾಗಿ ಖರೀದಿಸಿದ್ದ ಕಸ ಸಂಗ್ರಹಿಸುವ ಆಟೋ ಚಲಾಯಿಸುವ ಮೂಲಕ ವಾಹನಗಳಿಗೆ ಚಾಲನೆ ನೀಡಿದರು. ನಂತರ ತ್ಯಾಜ್ಯ ವಿಲೇವಾರಿ ಘಟಕವನ್ನು ಸಹ ಲೋಕಾರ್ಪಣೆಗೊಳಿಸಿ, ವೀಕ್ಷಿಸಿದರು. ಇದೇ ವೇಳೆ ತ್ಯಾಜ್ಯ ವಿಲೇವಾರಿ ಘಟಕದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುರು.