Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Haveri

ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್

Public TV
Last updated: March 27, 2021 4:13 pm
Public TV
Share
3 Min Read
basangouda patil yatnal
SHARE

– ಕೆಲವೇ ದಿನಗಳಲ್ಲಿ ಯುವರಾಜನದ್ದೂ ಹೊರ ಬರಲಿದೆ

ಹಾವೇರಿ: ಕಾಂಗ್ರೆಸ್ ನ ಮಹಾನಾಯಕ ಮತ್ತು ಬಿಜೆಪಿಯ ಯುವರಾಜರದ್ದು ಸಿಡಿ ಉತ್ಪನ್ನ ಮಾಡುವ ಎರಡು ಫ್ಯಾಕ್ಟರಿಗಳಿವೆ. ಇದೀಗ ಹೆಸರು ಬಂದಿರುವ ಕಾಂಗ್ರೆಸ್ ನಾಯಕ ಇಂತಹ ಸಿಡಿಗಳನ್ನು ಖರೀದಿ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಮಾತನಾಡಿದ ಅವರು, ಕೆಲ ಹೆಣ್ಣು ಮಕ್ಕಳನ್ನು ಬಿಟ್ಟು ಬ್ಲ್ಯಾಕ್ ಮೇಲ್ ಮಾಡಿ, ಸಿಡಿ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಸಪೋರ್ಟ್ ಮಾಡದಿದ್ದರೆ, ತೊಂದರೆ ಕೊಟ್ಟರೆ ಸಿಡಿ ಬಿಡುತ್ತೇವೆಂದು ಭಯಪಡಿಸುತ್ತಾರೆ. ಎಷ್ಟೋ ಜನ ಶಾಸಕರು ಈ ಭಯದ ವಾತಾವರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿದ್ದಾರೆ. ನಿನ್ನೆ ಸಿಡಿ ಯುವತಿ ಹೆಸರು ಹೇಳಿದವರ ಡ್ರೈವರ್ ಅವರ ಜೊತೆ ಓಡಾಡಿರೋ ಬಗ್ಗೆ ಚರ್ಚೆ ಆಗುತ್ತಿದೆ. ಈ ಬಗ್ಗೆ ನಾನು ಮೊದಲೇ ಭವಿಷ್ಯ ನುಡಿದಿದ್ದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಬಿಜೆಪಿಯಲ್ಲೊಬ್ಬ ಯುವರಾಜ ಮತ್ತು ಕಾಂಗ್ರೆಸ್ ಮಹಾನಾಯಕ ಇಬ್ಬರೂ ಇದ್ದಾರೆಂದು ಹೇಳಿದ್ದೆ. ಈಗ ಕಾಂಗ್ರೆಸ್ ಮಹಾನಾಯಕನದ್ದು ಹೊರಬಂದಿದೆ. ಕೆಲವೇ ದಿನಗಳಲ್ಲಿ ಬಿಜೆಪಿಯ ಯುವರಾಜನದ್ದೂ ಹೊರಬರಲಿದೆ. ಈ ಸಿಡಿ ಯುವರಾಜನ ರಕ್ಷಣೆ ಮಾಡಲು ಸಿಸಿಬಿಗೆ ಕೊಟ್ಟಿದ್ದು, ಸಿಬಿಐಗೆ ಕೊಟ್ಟರೆ ಎಲ್ಲ ಕಳ್ಳರನ್ನು ಒದ್ದು ಒಳಗೆ ಹಾಕುತ್ತಾರೆ. ಇಂತಹ ಬಹಳ ಮಂದಿಯ ಸಿಡಿ ಮಾಡಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳು, ವ್ಯಾಪಾರಸ್ಥರು, ಶಾಸಕರು, ಸಂಸದರ ಸಿಡಿಗಳಿವೆ. ಇವರಿಬ್ಬರೂ ಸಿಡಿ ಖರೀದಿದಾರರು. ಮೆಕ್ಕೆಜೋಳ, ಮೆಣಸಿನಕಾಯಿ ಖರೀದಿ ಮಾಡೋರ ರೀತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲೊಬ್ಬಬ್ಬರು ಸಿಡಿ ಖರೀದಿ ಮಾಡೋರಿದ್ದಾರೆ. ಬಿಜೆಪಿಯ ಉನ್ನತ ನಾಯಕನ ಸಿಡಿ ಕಾಂಗ್ರೆಸ್ ನ ಮಹಾನಾಯಕನ ಬಳಿ ಇದೆ. ಅವನನ್ನ ನೋಡಿದರೆ ಬಿಜೆಪಿ ನಾಯಕರು ಭಯಪಡ್ತಾರೆ. ಹಿಂದೆ ಆ ಮಹಾನಾಯಕನೇ ಸಿಡಿ ಇರೋ ಬಗ್ಗೆ ಹೇಳಿದ್ದಾನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟರದ್ದೊಂದು ಗುಂಪು, ಪ್ರಾಮಾಣಿಕ ರಾಜಕಾರಣಿಗಳದ್ದೊಂದು ಗುಂಪಿದೆ. ಎಲ್ಲ ಪಕ್ಷಗಳಲ್ಲೂ ಈ ಗುಂಪು ಇವೆ. ಸಿಎಂ ಬದಲಾವಣೆ ಆಗಲೇಬೇಕು, ಇದರ ಬಗ್ಗೆ ಬೇರೆ ಅಭಿಪ್ರಾಯವಿಲ್ಲ. ಮೇ 2 ನಂತರ ಪ್ರಧಾನಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ರಾಜ್ಯದಲ್ಲಿನ ಎಲ್ಲ ಬೆಳವಣಿಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಗಮನಿಸುತ್ತಿದ್ದಾರೆ. ಎಲ್ಲ ಮಾಹಿತಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಇದೆ. ದೇಶಕ್ಕೆ, ಧರ್ಮಕ್ಕೆ ಕಷ್ಟ ಬಂದಾಗ ಭಗವಂತ ಹುಟ್ಟಿ ಬಂದಂತೆ ಮೇ 2ರ ನಂತರ ನರೇಂದ್ರ ಮೋದಿಯವರು ಕರ್ನಾಟಕದ ಬೆಳವಣಿಗೆ ನೋಡಿ ಗಟ್ಟಿಯಾದ ನಿರ್ಧಾರ ತಗೋತಾರೆ ಎಂದರು.

ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಜಮೀರ ಅಹ್ಮದ್ ಅವರಿಗೆ ಅನುದಾನ ಕೊಡುತ್ತಾರೆ. ನಾವು ಅನುದಾನ ಕೇಳಿದರೆ ನಮಗೆ ವಿಷ ಕುಡಿಯೋಕೆ ಹಣ ಇಲ್ಲ ಅಂತಾರೆ. ಜಮೀರ್ ಅಹ್ಮದ್ ಹಿಂದೂಗಳನ್ನ ಬೈಯ್ಯುತ್ತಾ ಓಡಾಡ್ತಾರೆ, ಅವರಿಗೆ ಅನುದಾನ ಕೊಡ್ತಾರೆ. ಯಡಿಯೂರಪ್ಪ ಅವರ ಬೀಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರೀಸ್ವಾಮಿಗೆ ಅನುದಾನ ಕೊಡುತ್ತಾರೆ ಎಂದು ಆರೋಪಿಸಿದರು.

BSY 2

ಬಿಜೆಪಿಯ ಕೆಲವು ಶಾಸಕರಿಗೆ ಮಾತ್ರ ಅನುದಾನ ಕೊಡುತ್ತಾರೆ. ಬಿಜೆಪಿಯ ಒಂದೇ ಒಂದು ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ಸಿದ್ದರಾಮಯ್ಯ ಆಗಾಗ ಶಾಸಕಾಂಗ ಪಕ್ಷದ ಸಭೆ ಮಾಡುತ್ತಿದ್ದರು. ನಾವೆಲ್ಲ ಕೈ ಎತ್ತಿದ್ದಕ್ಕೆ ನೀವು ಸಿಎಂ ಆಗಿದ್ದೀರಿ, ಕಾಂಗ್ರೆಸ್, ಜೆಡಿಎಸ್ ನವರು ಕೈ ಎತ್ತಿದ್ದಕ್ಕಲ್ಲ. ಅವರ ಜೊತೆ ಇವರದು ಹೊಂದಾಣಿಕೆ ರಾಜಕಾರಣ ಇದೆ. ಶಾಸಕರು ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ಒಬ್ಬ ಶಾಸಕರೂ ನನ್ನ ವಿರುದ್ಧ ಸಹಿ ಮಾಡಿಲ್ಲ. ಸಭೆಗೆ ತೆರಳಿದ ಒಬ್ಬ ಶಾಸಕರು ನನಗೆ ಹೇಳಿದ್ದಾರೆ. ಯತ್ನಾಳರು ನಮ್ಮ ಪರವಾಗಿದ್ದಾರೆ, ಅವರ ವಿರುದ್ಧ ಸಹಿ ಮಾಡೋದಿಲ್ಲ ಎಂದಿದ್ದಾರೆ. 31ರ ವರೆಗೆ ಅಧಿವೇಶವಿತ್ತು. ಸಿಡಿ ನೆಪದಲ್ಲಿ ಅಧಿವೇಶನ ಮೊಟಕು ಮಾಡಿದರು. ಇದೇನು ಒಂದು ಕುಟುಂಬದ ಸರ್ಕಾರವೇ? ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಮತ್ತು ಅವರ ಹೆಣ್ಣು ಮಕ್ಕಳ ಸರ್ಕಾರವೇ? ಹೀಗಾದರೆ ಪಕ್ಷ ಹೇಗೆ ಉಳಿಯಬೇಕು ಎಂದು ಖಾರವಾಗಿ ಪ್ರಶ್ನಿಸಿದರು.

 

TAGGED:Basangouda Patil YatnalBY VijayendraCD caseDK ShivakumarhaveriPublic TVಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ವೈ.ವಿಜಯೇಂದ್ರಸಿಡಿ ಕೇಸ್ಹಾವೇರಿ
Share This Article
Facebook Whatsapp Whatsapp Telegram

Cinema Updates

sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
46 minutes ago
Shivaraj Tangadagi
ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ
1 hour ago
ileana 1 4
2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಇಲಿಯಾನಾ
2 hours ago
drithi puneeth rajkumar 1 1
ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಣ್ಣಾವ್ರ ಮೊಮ್ಮಕ್ಕಳು
2 hours ago

You Might Also Like

Bagalgunte Bike Showroom
Bengaluru City

ಎಲೆಕ್ಟ್ರಿಕ್‌ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – 4 ಸ್ಕೂಟರ್ ಬೆಂಕಿಗಾಹುತಿ

Public TV
By Public TV
43 minutes ago
Kamal Haasan 2
Bengaluru City

ಕಮಲ್‌ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಇಬ್ಬರ ವಿರುದ್ಧ ಎಫ್‌ಐಆರ್

Public TV
By Public TV
57 minutes ago
Siddaramaiah 13
Bengaluru City

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

Public TV
By Public TV
1 hour ago
Mangaluru UT Khader
Bengaluru City

ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತ, ಪ್ರಾಣಹಾನಿ – ರಕ್ಷಣಾ ಕಾರ್ಯಕ್ಕೆ ಯು.ಟಿ ಖಾದರ್ ಸೂಚನೆ

Public TV
By Public TV
1 hour ago
Salman Khurshid
Latest

ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Public TV
By Public TV
2 hours ago
bengaluru police commissioner b dayanand
Bengaluru City

ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?