ಚಿಕ್ಕಬಳ್ಳಾಪುರ: ಹಾಡಹಗಲೇ ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭಂದಿತರನ್ನು ಕಲಂದರ್, ಅಮಿತ್, ರಾಘವೇಂದ್ರ, ಶ್ರೀನಾಥ್ ಹಾಗೂ ಅಕ್ಷಯ್ ಎಂದು ಗುರುತಿಸಲಾಗಿದೆ. ಇವರನ್ನು ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ.
ಶಿಡ್ಲಘಟ್ಟ ಪಟ್ಟಣದ ಪೊಲೀಸ್ ಠಾಣೆ ಬಳಿ ನಿನ್ನೆ ಅಮ್ಜದ್ (43)ನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿತ್ತು. ಆರೋಪಿಗಳು ಓಮ್ನಿ ಕಾರಿನಲ್ಲಿ ಅಮ್ಜದ್ ಬೈಕಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.