ಹುಬ್ಬಳ್ಳಿ: ಕಾಡಾನೆಗಳ ಹಾವಳಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಮೀತಿಮೀರಿದ್ದು, ಕಾಡಾನೆಗಳ ಹಾವಳಿಯಿಂದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಸುತ್ತಮುತ್ತಲಿನ ಹೊಲಗಳಿಗೆ ಲಗ್ಗೆ ಇಟ್ಟಿರುವ 5 ಕಾಡಾನೆಗಳ ಗುಂಪು ರೈತರ ಬೆಳೆಗಳನ್ನೆಲ್ಲಾ ಹಾನಿ ಮಾಡಿದ್ದು, ರೈತರು ಭಯಭೀತರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಅರಣ್ಯದಿಂದ ಆಗಮಿಸುವ ಕಾಡಾನೆಗಳ ಹಿಂಡು ಬೆಳೆ ಹಾನಿ ಮಾಡಿದರೂ ಪರಿಹಾರ ಸಿಗದಿರುವುದರಿಂದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡಬೇಕು. ಕಾಡಾನೆಗಳ ಹಾವಳಿ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.


