Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಕಾಡುಗೊಲ್ಲರಿಗೆ ಎಸ್‍ಟಿ ಮೀಸಲಾತಿ ಆಗ್ರಹಿಸಿ ಉರುಳುಸೇವೆ

Public TV
Last updated: February 15, 2021 4:55 pm
Public TV
Share
2 Min Read
kadugolla
SHARE

ಚಿತ್ರದುರ್ಗ: ಕಾಡುಗೊಲ್ಲ ಜನಾಂಗವನ್ನು ಎಸ್‍ಟಿ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ದಿ ಸಂಘದಿಂದ ಸೋಮವಾರ ನಗರದಲ್ಲಿ ಉರುಳು ಸೇವೆ ಮಾಡಿ ಅಪರ ಜಿಲ್ಲಾಧಿಕಾರಿ ಮೂಲಕ ದೇಶದ ಪ್ರಧಾನಿ ನರೇಂದ್ರಮೋದಿಗೆ ಮನವಿ ಸಲ್ಲಿಸಲಾಯಿತು.

pm modi

ಬೆಂಕಿಯಂತ ಬಿಸಿಲನ್ನು ಲೆಕ್ಕಿಸದೇ ಚಿತ್ರದುರ್ಗದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ಮೂಲಕ ಆಗಮಿಸಿದ ಕಾಡುಗೊಲ್ಲರು ಬಡುಕಟ್ಟು ಸಂಸ್ಕೃತಿಯುಳ್ಳ ನಮ್ಮನ್ನು ಎಸ್.ಟಿ.ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿದರು. ಅಲ್ಲದೇ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಿವುಯಾದವದ ಗೊಲ್ಲರ ಸಾಂಪ್ರದಾಯಿಕ ಉಡುಪಾದ ಶಳ್ಳಾಣ ಹಾಕಿಕೊಂಡು ಉರಳುಸೇವೆ ಮಾಡಿದರೆ, ಇನ್ನು ಕೆಲವರು ಬಿಳಿ ಬಣ್ಣದ ಪ್ಯಾಂಟು, ಶರ್ಟುಗಳನ್ನು ಹಾಕಿಕೊಂಡು ಸಿಮೆಂಟ್ ರಸ್ತೆಯಲ್ಲಿ ಉರುಳು ಸೇವೆ ಮಾಡಿದರು. ಜೊತೆಗೆ ಕೆಲವರು ಪ್ಯಾಂಟ್ ಬನಿಯನ್, ಲುಂಗಿ ಬನಿಯನ್‍ಗಳನ್ನು ತೊಟ್ಟು, ತಲೆಗೆ ಟವಲ್ ಸುತ್ತಿ ಉರುಳು ಸೇವೆ ಮಾಡುತ್ತಿದ್ದರು. ಅವರೊಂದಿಗೆ ನಿಂತು ನೋಡುತ್ತಿದ್ದವರು ಜೈಜುಂಜಪ್ಪ ಎನ್ನುವ ಘೋಷಣೆಗಳನ್ನು ಕೂಗುತ್ತ ಉರುಳು ಸೇವೆಯಲ್ಲಿ ತೊಡಗಿದ್ದವರನ್ನು ಹುರಿದುಂಬಿಸುತ್ತಿದ್ದರು.

kadu golla web 1

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಡುಗೊಲ್ಲರು ಡಿ.ಸಿ.ಕಚೇರಿ ಆವರಣದೊಳಗೆ ಹೋಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ತಡೆದರು. ಆಗ ಕೆಲ ಕಾಲ ಪೊಲೀಸರೊಂದಿಗೆ ಮಾತಿನ ವಾಗ್ವಾದ ನಡೆಸಿ ಬ್ಯಾರಿಕೇಡ್‍ಗಳನ್ನು ತಳ್ಳುವಷ್ಟರಲ್ಲಿ ಮನವಿ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದಾಗ ಯಾವುದೇ ಕಾರಣಕ್ಕೂ ನಿಮಗೆ ಮನವಿ ಕೊಡುವುದಿಲ್ಲ. ಜಿಲ್ಲಾಧಿಕಾರಿಯೇ ಬಂದು ಮನವಿ ಸ್ವೀಕರಿಸಲಿ ಎಂದು ಪಟ್ಟುಹಿಡಿದಾಗ ಅಪರ ಜಿಲ್ಲಾಧಿಕಾರಿ ಹಿಂದಕ್ಕೆ ತೆರಳಿದರು. ನಂತರ ಸುಡುವ ಬಿಸಿಲಿಗೆ ಹೈರಾಣಾದ ಪ್ರತಿಭಟನಾಕಾರರು ಪುನಃ ಅಪರ ಜಿಲ್ಲಾಧಿಕಾರಿಯವರನ್ನೇ ಕರೆಸಿಕೊಂಡು ಮನವಿ ಸಲ್ಲಿಸಿದರು.

ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಡುಗೊಲ್ಲರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಸಿ.ಶಿವು ಯಾದವ್ ಮಾತನಾಡಿ ಆಚಾರ, ವಿಚಾರ, ನಡೆ, ನುಡಿ ಎಲ್ಲವು ಬುಡಕಟ್ಟು ಸಂಸ್ಕೃತಿಯುಳ್ಳವರಾಗಿರುವ ನಾವುಗಳು ಸಮಾಜದ ಮುಖ್ಯ ವಾಹಿನಿಯಿಂದ ತುಂಬಾ ದೂರವಿದ್ದೇವೆ. ರಾಜ್ಯ ಸರ್ಕಾರ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇನ್ನೂ ಕೇಂದ್ರ ಸರ್ಕಾರ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮೀನಾಮೇಷ ಎಣಿಸುತ್ತಿದೆ. ಇದು ನಮ್ಮ ಆರಂಭಿಕ ಹೋರಾಟ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಮೂಲಕ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದರ ಜೊತೆಗೆ ಸಿಎಂ ಯಡಿಯೂರಪ್ಪ ಬದಲಾವಣೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಎಚ್ಚರಿಸಿದರು.

bsy 2

ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿ ಆರೇಳು ವರ್ಷಗಳಾಗಿದ್ದರೂ ಕೇಂದ್ರ ನಮ್ಮ ಕಡತವನ್ನು ಇನ್ನು ಕೈಗೆತ್ತಿಕೊಂಡಿಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸದಿದ್ದರೆ ಸಂಸತ್ ಭವನದ ಮುಂದೆ ಹೋರಾಟ ಮಾಡಲು ಹಿಂಜರಿಯುವುದಿಲ್ಲ. ಕೊಟ್ಟ ಮಾತಿಗೆ ತಪ್ಪುವವರಲ್ಲ ಕಾಡುಗೊಲ್ಲರು ಎಂದು ಕೇಂದ್ರಕ್ಕೆ ಬೆದರಿಕೆ ಹಾಕಿದರು.

ಮುಂದಿನ ದಿನಗಳಲ್ಲಿ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ ಅಗತ್ಯ ಬಿದ್ದರೆ ಸಂಸತ್ ಭವನದ ಮುಂದೆಯೂ ಹೋರಾಡಲು ಸಿದ್ದರಿರಬೇಕೆಂದು ಕಾಡುಗೊಲ್ಲರನ್ನು ಜಾಗೃತಿಗೊಳಿಸಿದರು. ಉರುಳು ಸೇವೆಯಲ್ಲಿ ಸಮುದಾಯದ ಮುಖಂಡರಾದ ಭರಮಸಾಗರದ ರಾಜಪ್ಪ ,ಕೂನಿಕೆರೆ ರಾಮಣ್ಣ, ಸಂಪತ್, ನಾಗಣ್ಣ, ಪ್ರೇಮ, ಹರ್ಷವರ್ಧನ್, ಚಿತ್ತಯ್ಯ, ರಾಜ್‍ಕುಮಾರ್, ಮಹೇಶ್, ವೆಂಕಟೇಶ್‍ಯಾದವ್, ಜಗದೀಶ್, ರಮೇಶ್, ಶಿವಣ್ಣ, ರಾಜಣ್ಣ, ತಿಮ್ಮಯ್ಯ, ನ್ಯಾಯವಾದಿಗಳಾದ ಪಿ.ಆರ್.ವೀರೇಶ್, ಸಿ.ತಿಮ್ಮಣ್ಣ, ಎಸ್.ಪ್ರಕಾಶ್, ನಾಗರಾಜ್ ಮೊದಲಾದವರು ಪಾಲ್ಗೊಂಡಿದ್ದರು.

TAGGED:kadugollaprotestPublic TVST Reservationಎಸ್.ಟಿ ಮೀಸಲಾತಿಕಾಡುಗೊಲ್ಲಚಿತ್ರದುರ್ಗಪಬ್ಲಿಕ್ ಟಿವಿ Chitradurgaಪ್ರತಿಭಟನೆ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
31 minutes ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
4 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
5 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
9 hours ago

You Might Also Like

rcb 4
Cricket

IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
By Public TV
6 minutes ago
Rambhadracharya General Upendra Dwivedi
Latest

ಸೇನಾ ಮುಖ್ಯಸ್ಥರಿಗೆ ಧೀಕ್ಷೆ ನೀಡಿ ಪಿಒಕೆ ಗುರುದಕ್ಷಿಣೆಯಾಗಿ ಕೇಳಿದ ಸ್ವಾಮೀಜಿ

Public TV
By Public TV
37 minutes ago
RCB 5
Cricket

ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

Public TV
By Public TV
42 minutes ago
Rajnath Singh
Latest

ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್

Public TV
By Public TV
1 hour ago
RCB vs PBKS 1
Cricket

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

Public TV
By Public TV
1 hour ago
mangaluru police commissioner and dakshina kannada sp transferred
Dakshina Kannada

ಮಂಗಳೂರಲ್ಲಿ ಸಾಲು ಸಾಲು ಹತ್ಯೆ ಬೆನ್ನಲ್ಲೇ ಇಬ್ಬರು ಐಪಿಎಸ್‌ ಅಧಿಕಾರಿಗಳ ಎತ್ತಂಗಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?