ಕಾಡು ಹಂದಿಯನ್ನು ಕ್ರಿಮಿ ಕೀಟವೆಂದು ಘೋಷಿಸುವ ಪ್ರಕ್ರಿಯೆ ಪ್ರಾರಂಭ: ಗೋವಾ ಸಿಎಂ

Public TV
1 Min Read
Pramod Sawant

ಪಣಜಿ: ಕಾಡುಹಂದಿ ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆ ಪ್ರಾರಭವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿಯಲ್ಲಿ ಕೃಷಿ ಮತ್ತು ಅರಣು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಚಿದಾನಂದ ಸವದಿ ಕಾರು ಚಾಲನೆ ಮಾಡ್ತಿರಲಿಲ್ಲ: ಎಸ್‍ಪಿ ಲೋಕೇಶ್ ಜಗಲಾಸರ್

wild pig 1

ಕಾಡುಹಂದಿಗಳು ರಾಜ್ಯದಲ್ಲಿ ಕೃಷಿ ಕ್ಷೇತ್ರಗಳಿಗೆ ಹಾನಿಯುಂಟು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಗೋವಾ ರಾಜ್ಯ ಸರ್ಕಾರ 2016ರಲ್ಲಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ (ಎನ್‍ಡಬ್ಲ್ಯೂಬಿ) ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಸ್ತಾವ ಬಾಕಿ ಉಳಿದಿದೆ ಎಂದು ಸಿಎಂ ಸಾವಂತ್ ಮಾಹಿತಿ ನೀಡಿದ್ದಾರೆ.

wild pig 2

ಪ್ರಸ್ತುತ, ಕಾಡುಹಂದಿಯನ್ನು ವನ್ಯಜೀವಿ ಕಾಯ್ದೆಯಡಿ ರಕ್ಷಿಸಲಾಗಿದೆ, ಅದರ ಹತ್ಯೆಯನ್ನು ಕಾನೂನುಬಾಹಿರಗೊಳಿಸಿದೆ. ಕಳೆದ ಕೆಲವು ವರ್ಷಗಳಿಂದ ಮನುಷ್ಯ-ಪ್ರಾಣಿಗಳ ಸಂಘರ್ಷ ಮತ್ತು ಬೆಳೆಗಳ ನಾಶದಿಂದಾಗಿ, ರೈತರು ಕೆಲವು ಕಾಡು ಪ್ರಾಣಿಗಳ ಕ್ರಿಮಿಕೀಟಗಳನ್ನು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದರು, ಅವುಗಳಲ್ಲಿ ಒಂದು ಕಾಡುಹಂದಿಯಾಗಿದೆ.

pigs

Share This Article
Leave a Comment

Leave a Reply

Your email address will not be published. Required fields are marked *