ಕಾನೂನು ವಿವಿಯ ನಿವೃತ್ತ ಪ್ರಾಚಾರ್ಯರ ಕಗ್ಗೊಲೆ

Public TV
1 Min Read
HBL copy 2

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿವೃತ್ತ ಪ್ರಾಂಶುಪಾಲರನ್ನ ಹತೈಗೈದ ಘಟನೆ ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ ಬಳಿಯಿರುವ ನಿವಾಸದಲ್ಲಿ ನಡೆದಿದೆ. ಕೊಲೆ ಮಾಡಿರುವ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

HBL 1 4

ನಿವೃತ್ತ ಪ್ರಾಂಶುಪಾಲರಾಗಿದ್ದ ಎಸ್.ಎಸ್ ಮುಶಣ್ಣನವರ ಕೊಲೆಯಾಗಿದ್ದು, ಕೊಲೆಗೆ ನಿಜವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಆದರೆ ಕೊಲೆಯಾದ ಮುಶಣ್ಣನವರ ಅಳಿಯನೇ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದ್ದು. ಕೊಲೆಗೆ ಕೌಟುಂಬಿಕ ಕಾರಣವಾ ಅನ್ನೋ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

HBL 3 1

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ನಿವೃತ್ತ ಪ್ರಾಂಶುಪಾಲರ ಹತ್ಯೆಯಲ್ಲಿ ಯಾರ ಕೈವಾಡವಿದೆ ಎಂಬುದನ್ನ ಪತ್ತೆ ಮಾಡಲು ಡಿಸಿಪಿ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ತನಿಖೆ ಮುಂದುವರೆಸಿದ್ದಾರೆ.

ಘಟನೆಯ ನಂತರ ಇದೀಗ ಶವವನ್ನ ಕಿಮ್ಸ್ ಗೆ ರವಾನೆ ಮಾಡಲಾಗಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *