ಕಾಫಿ ವ್ಯಾಪಾರದಲ್ಲಿ ನಷ್ಟ – ಚಿಕ್ಕಮಗಳೂರು ಮೂಲದ ಉದ್ಯಮಿ ಆತ್ಮಹತ್ಯೆ

Public TV
1 Min Read
NML SUICIDE

ಬೆಂಗಳೂರು: ವ್ಯಾಪಾರದಲ್ಲಿ ನಷ್ಟವಾದ ಪರಿಣಾಮ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ನಡೆದಿದೆ.

ಶಾಕೀರ್ ಅಹ್ಮದ್ ಆತ್ಮಹತ್ಯೆಗೆ ಶರಣಾದ ಉದ್ಯಮಿ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13 ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

nelamangala town police station

ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿಯ ವಜ್ರೇಶ್ವರಿ ಲಾಡ್ಜ್ ನಲ್ಲಿ ತಂಗಿದ್ದ ಶಾಕೀರ್, ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ಶಾಕೀರ್ ಅಹ್ಮದ್ ಮೃತದೇಹ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಕೆಲವು ಅನುಮಾನಗಳು ಇದು ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

 

Share This Article
Leave a Comment

Leave a Reply

Your email address will not be published. Required fields are marked *