Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್

Districts

ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್

Public TV
Last updated: August 2, 2021 6:54 pm
Public TV
Share
2 Min Read
SIDDU
SHARE

ಕಾರವಾರ: ಕಾಳಿ ನದಿ ಪ್ರವಾಹದಿಂದ ಹಾನಿಗೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪ್ರದೇಶಗಳಿಗೆ ಇಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜನರಿಗೆ ಮಾಹಿತಿ ನೀಡದೇ ಕೆ.ಪಿ.ಸಿ.ಎಲ್ ಅಧಿಕಾರಿಗಳು ನೀರನ್ನು ಬಿಟ್ಟಿರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ನೆರೆ ಸೃಷ್ಟಿಯಾಗಿ ಅನಾಹುತ ಮಾಡಿತ್ತು. ಕಾಳಿ ನದಿ ಉಕ್ಕಿ ಹರಿದ ಪರಿಣಾಮ ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಟ್ಟಿದ್ದರಿಂದ ಕಾರವಾರ ತಾಲೂಕಿನ ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದವು. ಅದರಲ್ಲೂ ಜಲಾಶಯದ ಸಮೀಪದಲ್ಲೇ ಇರುವ ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಗ್ರಾಮಗಳಲ್ಲಿ ಮನೆಗಳೇ ಪ್ರವಾಹದಿಂದ ಕೊಚ್ಚಿ ಹೋಗಿದ್ದವು. ತಾಲೂಕಿನ ಕದ್ರಾ ಜಲಾಶಯದ ಸುತ್ತಮುತ್ತಲಿನ ಗ್ರಾಮಕ್ಕೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸೋಮವಾರ ಭೇಟಿ ನೀಡಿದರು. ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಆದ ಹಾನಿ ಕುರಿತು ವೀಕ್ಷಣೆ ಮಾಡಿದರು.

ಇದಾದ ನಂತರ ಕೆಪಿಸಿ ಅಧಿಕಾರಿಗಳ ಸಭೆಯನ್ನ ನಡೆಸಿದ ಸಿದ್ದರಾಮಯ್ಯ ಯಾವುದೇ ಮುನ್ಸೂಚನೆ ನೀಡದೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟು ಜನರನ್ನ ಸಮಸ್ಯೆಗೆ ಸಿಲುಕಿಸಿದ್ದೀರಿ ಎಂದು ಗರಂ ಆದರು. ಅಲ್ಲದೇ ನಿರಾಶ್ರಿತರಾದವರಿಗೆ ಕೆಪಿಸಿ ಕಾಲೋನಿಯಲ್ಲಿಯೇ ಉಳಿದುಕೊಳ್ಳಲು ಸೂರು ನೀಡುವಂತೆ ವಾರ್ನಿಂಗ್ ನೀಡಿದ್ದು ಕಾಯಂ ಬದಲಿ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

cc5e9dcf faf9 4f0a 98ba 2eafe6f868f1

ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳ ಜನರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನ ಸ್ವೀಕರಿಸಿದರು. ಹಲವು ಗ್ರಾಮಸ್ಥರು ಸಿದ್ದರಾಮಯ್ಯನವರ ಮುಂದೆ ತಮ್ಮ ನೋವನ್ನ ಹೇಳಿಕೊಂಡಿದ್ದು, ತಮಗೆ ಪದೇ ಪದೇ ಪ್ರವಾಹದಿಂದ ಕಷ್ಟಕ್ಕೆ ಸಿಲುಕುವಂತಾಗಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

ಸಿದ್ದರಾಮಯ್ಯ ಕೆಪಿಸಿ ಅಧಿಕಾರಿಗಳ ಜೊತೆ ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೂ ಕ್ಲಾಸ್ ತೆಗೆದುಕೊಂಡರು. ಸಿದ್ದರಾಮಯ್ಯನವರ ಜೊತೆ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳು ವೈದ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಆರ್.ವಿ ದೇಶಪಾಂಡೆ, ಕೆಪಿಸಿ ಅಧಿಕಾರಿಗಳು ನೋಟಿಸ್ ನೀಡದೆ ನೀರು ಬಿಟ್ಟು ಅನಾಹುತಕ್ಕೆ ಕಾರಣವಾಗಿದ್ದಾರೆ. ಸೂಕ್ತ ಪರಿಹಾರ ಹಾನಿಗೊಳಗಾದವರಿಗೆ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು. ಇದಲ್ಲದೇ ವಿಧಾನಸೌದದಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕಾರವಾರ ನಂತರ ಅಂಕೋಲಾ ತಾಲೂಕಿನಲ್ಲಿ ಗಂಗಾವಳಿ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಲ್ಲದೇ ಅಂಕೋಲಾ ಪಟ್ಟಣದಲ್ಲೂ ನಿರಾಶ್ರಿತರ ಅಹವಾಲು ಸಭೆಯನ್ನ ನಡೆಸಿದರು. ಇದಾದ ನಂತರ ಯಲ್ಲಾಪುರಕ್ಕೆ ತೆರಳಿ ಅಲ್ಲೂ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಇದನ್ನೂ ಓದಿ: ನೆಟ್ ಇಲ್ಲದೇ ಮೊಬೈಲಿನಿಂದ ಹಣ ಪಾವತಿಸಿ – ಏನಿದು ಇ-ರುಪೀ?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ಸಾಂತ್ವಾನ ಹೇಳಲು ಮುಂದಾಗಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲೂ ಸಾಕಷ್ಟು ಸಂಚಲನ ಮೂಡಿಸಿದೆ.

TAGGED:floodkadra damKali RiverkarwarPublic TVrainsiddaramaiahಕದ್ರಾ ಜಲಾಶಯಕಾರವಾರಕಾಳಿ ನದಿಪಬ್ಲಿಕ್ ಟಿವಿಪ್ರವಾಹಮಳೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
4 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
23 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
23 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
32 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
55 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?