Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾರವಾರದಲ್ಲಿ ಪ್ರವಾಹ ಹಾನಿ ವೀಕ್ಷಿಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್

Public TV
Last updated: August 2, 2021 6:54 pm
Public TV
Share
2 Min Read
SIDDU
SHARE

ಕಾರವಾರ: ಕಾಳಿ ನದಿ ಪ್ರವಾಹದಿಂದ ಹಾನಿಗೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪ್ರದೇಶಗಳಿಗೆ ಇಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜನರಿಗೆ ಮಾಹಿತಿ ನೀಡದೇ ಕೆ.ಪಿ.ಸಿ.ಎಲ್ ಅಧಿಕಾರಿಗಳು ನೀರನ್ನು ಬಿಟ್ಟಿರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವೆಡೆ ನೆರೆ ಸೃಷ್ಟಿಯಾಗಿ ಅನಾಹುತ ಮಾಡಿತ್ತು. ಕಾಳಿ ನದಿ ಉಕ್ಕಿ ಹರಿದ ಪರಿಣಾಮ ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಟ್ಟಿದ್ದರಿಂದ ಕಾರವಾರ ತಾಲೂಕಿನ ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದವು. ಅದರಲ್ಲೂ ಜಲಾಶಯದ ಸಮೀಪದಲ್ಲೇ ಇರುವ ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಗ್ರಾಮಗಳಲ್ಲಿ ಮನೆಗಳೇ ಪ್ರವಾಹದಿಂದ ಕೊಚ್ಚಿ ಹೋಗಿದ್ದವು. ತಾಲೂಕಿನ ಕದ್ರಾ ಜಲಾಶಯದ ಸುತ್ತಮುತ್ತಲಿನ ಗ್ರಾಮಕ್ಕೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸೋಮವಾರ ಭೇಟಿ ನೀಡಿದರು. ಮಲ್ಲಾಪುರ, ಕುರ್ನಿಪೇಟೆ, ಗಾಂಧಿನಗರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಆದ ಹಾನಿ ಕುರಿತು ವೀಕ್ಷಣೆ ಮಾಡಿದರು.

ಇದಾದ ನಂತರ ಕೆಪಿಸಿ ಅಧಿಕಾರಿಗಳ ಸಭೆಯನ್ನ ನಡೆಸಿದ ಸಿದ್ದರಾಮಯ್ಯ ಯಾವುದೇ ಮುನ್ಸೂಚನೆ ನೀಡದೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟು ಜನರನ್ನ ಸಮಸ್ಯೆಗೆ ಸಿಲುಕಿಸಿದ್ದೀರಿ ಎಂದು ಗರಂ ಆದರು. ಅಲ್ಲದೇ ನಿರಾಶ್ರಿತರಾದವರಿಗೆ ಕೆಪಿಸಿ ಕಾಲೋನಿಯಲ್ಲಿಯೇ ಉಳಿದುಕೊಳ್ಳಲು ಸೂರು ನೀಡುವಂತೆ ವಾರ್ನಿಂಗ್ ನೀಡಿದ್ದು ಕಾಯಂ ಬದಲಿ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

cc5e9dcf faf9 4f0a 98ba 2eafe6f868f1

ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳ ಜನರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನ ಸ್ವೀಕರಿಸಿದರು. ಹಲವು ಗ್ರಾಮಸ್ಥರು ಸಿದ್ದರಾಮಯ್ಯನವರ ಮುಂದೆ ತಮ್ಮ ನೋವನ್ನ ಹೇಳಿಕೊಂಡಿದ್ದು, ತಮಗೆ ಪದೇ ಪದೇ ಪ್ರವಾಹದಿಂದ ಕಷ್ಟಕ್ಕೆ ಸಿಲುಕುವಂತಾಗಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

ಸಿದ್ದರಾಮಯ್ಯ ಕೆಪಿಸಿ ಅಧಿಕಾರಿಗಳ ಜೊತೆ ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೂ ಕ್ಲಾಸ್ ತೆಗೆದುಕೊಂಡರು. ಸಿದ್ದರಾಮಯ್ಯನವರ ಜೊತೆ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳು ವೈದ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಆರ್.ವಿ ದೇಶಪಾಂಡೆ, ಕೆಪಿಸಿ ಅಧಿಕಾರಿಗಳು ನೋಟಿಸ್ ನೀಡದೆ ನೀರು ಬಿಟ್ಟು ಅನಾಹುತಕ್ಕೆ ಕಾರಣವಾಗಿದ್ದಾರೆ. ಸೂಕ್ತ ಪರಿಹಾರ ಹಾನಿಗೊಳಗಾದವರಿಗೆ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು. ಇದಲ್ಲದೇ ವಿಧಾನಸೌದದಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕಾರವಾರ ನಂತರ ಅಂಕೋಲಾ ತಾಲೂಕಿನಲ್ಲಿ ಗಂಗಾವಳಿ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಲ್ಲದೇ ಅಂಕೋಲಾ ಪಟ್ಟಣದಲ್ಲೂ ನಿರಾಶ್ರಿತರ ಅಹವಾಲು ಸಭೆಯನ್ನ ನಡೆಸಿದರು. ಇದಾದ ನಂತರ ಯಲ್ಲಾಪುರಕ್ಕೆ ತೆರಳಿ ಅಲ್ಲೂ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಇದನ್ನೂ ಓದಿ: ನೆಟ್ ಇಲ್ಲದೇ ಮೊಬೈಲಿನಿಂದ ಹಣ ಪಾವತಿಸಿ – ಏನಿದು ಇ-ರುಪೀ?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ಸಾಂತ್ವಾನ ಹೇಳಲು ಮುಂದಾಗಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲೂ ಸಾಕಷ್ಟು ಸಂಚಲನ ಮೂಡಿಸಿದೆ.

TAGGED:floodkadra damKali RiverkarwarPublic TVrainsiddaramaiahಕದ್ರಾ ಜಲಾಶಯಕಾರವಾರಕಾಳಿ ನದಿಪಬ್ಲಿಕ್ ಟಿವಿಪ್ರವಾಹಮಳೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
3 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
16 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
18 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
22 hours ago

You Might Also Like

Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
13 minutes ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
43 minutes ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
57 minutes ago
Meghalaya Honeymoon
Latest

ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು

Public TV
By Public TV
2 hours ago
Kolar Srinivaspur Bandh Mango Price Drop
Districts

Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

Public TV
By Public TV
2 hours ago
Shubhanshu Shukla 3
Latest

ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?