Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರ ಸಮುದ್ರದ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರ ಸಮುದ್ರದ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ!

Districts

ಕಾರವಾರ ಸಮುದ್ರದ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ!

Public TV
Last updated: November 20, 2020 9:14 am
Public TV
Share
2 Min Read
KWR copy
SHARE

– ಏನು ಹೇಳುತ್ತೆ ವಿಜ್ಞಾನ..?

ಕಾರವಾರ: ರಾತ್ರಿಯಿಂದ ಮುಂಜಾನೆವರೆಗೆ ಕಡಲ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ ಕಾರವಾರದ ತಿಳಮಾತಿ ಬೀಚಿನಿಂದ ಕಾಳಿ ಸಂಗಮದವರೆಗೂ ಕಾಣುತ್ತಿದ್ದು, ಸಮುದ್ರ ತೀರದಲ್ಲಿ ಮುಂಜಾನೆ ಹೆಜ್ಜೆ ಹಾಕುವ ವಾಯು ವಿಹಾರಿಗಳಿಗೆ ಈ ನೀಲಿ ಬೆಳಕಿನ ವಿಸ್ಮಯ ಗೋಚರಿಸಿದೆ.

ಹೌದು. ತಿಳಮಾತಿ ಬೀಜಿನಿಂದ ಕಾರವಾರದ ಕಾಳಿ ಸಂಗಮದ ಸಮುದ್ರ ತೀರದಲ್ಲಿ ಪಾಚಿಗಳು ಹೇರಳವಾಗಿ ಬಂದು ಸೇರುತ್ತಿದೆ. ಈ ಪಾಚಿಗಳು ಸಮುದ್ರದ ಅಲೆಗೆ ತೇಲಿ ಬರುತ್ತಿದ್ದು ಕೆಲತೀರವನ್ನು ಆವರಿಸಿದೆ. ಹೀಗಾಗಿ ಮುಂಜಾನೆ ವಾಯು ವಿಹಾರಕ್ಕೆ ತೆರಳಿದವರ ಹೆಜ್ಜೆ ಗುರುತುಗಳಲ್ಲಿ ನೀಲಿ ಬಣ್ಣಗಳ ಬೆಳಕು ಮೂಡಿ ನೋಡುಗರನ್ನು ಮೂಕ ವಿಸ್ಮಿತರನ್ನಾಗಿಸಿದೆ.

KWR 1 copy

ನೀಲಿ ಬೆಳಕಿನ ವಿಸ್ಮಯಕ್ಕೆ ವೈಜ್ಞಾನಿಕ ಕಾರಣವೇನು?:
ವೈಜ್ಞಾನಿಕವಾಗಿ ‘ಡೈನೋಫ್ಲಾಗೆಲೆಟ್ ನಾಕ್ಟಿಲುಕ ಸಿಂಟಿಲನ್ಸ್’ (Dinoflagellate Noctiluca scintillans) ಎಂಬ ಸೂಕ್ಷ್ಮಜೀವಿಗಳು ದೇಹದಿಂದ ರಾಸಾಯನಿಕವನ್ನು ಸ್ರವಿಸಿದಾಗಿ ನೀಲಿ ಬಣ್ಣದ ಬೆಳಕು ಮೂಡುತ್ತದೆ. ಮಿಂಚುಹುಳುವಿನ ಮಾದರಿಯಲ್ಲಿ ಹೊಳೆಯುತ್ತವೆ. ಒಂದೇ ಜೀವಕೋಶ ಹೊಂದಿರುವ ಈ ಸೂಕ್ಷ್ಮಜೀವಿಗಳು, ಲಕ್ಷಾಂತರ ಸಂಖ್ಯೆಯಲ್ಲಿ ಒಂದೆಡೆ ಸೇರಿದಾಗ ಇಂತಹ ವಿದ್ಯಮಾನ ಗೋಚರಿಸುತ್ತದೆ ಎಂದು ವಿಜ್ಞಾನ ಜಗತ್ತು ಹೇಳುತ್ತದೆ.

ಈ ಕುರಿತು ಮಾಹಿತಿ ನೀಡಿದ ಕಾರವಾರದ ಕಡಲಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ್ ಹರಗಿ, ಕಳೆದ ಬಾರಿ ಭಟ್ಕಳದವರೆಗೂ ಕಡಲತೀರದಲ್ಲಿ ಕಾಣಿಸಿಕೊಂಡಿದ್ದವು. ಈ ಬಾರಿ ಗೋಕರ್ಣದವರೆಗೂ ಗೋಚರಿಸಿದ್ದಾಗಿ ತಿಳಿದುಬಂದಿದೆ. ಸಮುದ್ರದಲ್ಲಿ ಅವುಗಳಿಗೆ ಪೂರಕವಾದ ವಾತಾವರಣ ಕಂಡುಬಂದಾಗ ಹುಲುಸಾಗಿ ಬೆಳೆಯುತ್ತವೆ ಎಂದರು.

KWR FLASH SEA AV 10

ನದಿಯಲ್ಲಿರುವ ಪೋಷಕಾಂಶಗಳು ಮಳೆಗಾಲದಲ್ಲಿ ಸಮುದ್ರಕ್ಕೆ ಸೇರುತ್ತವೆ. ಜೊತೆಗೆ ಅದೆಷ್ಟೋ ಚರಂಡಿಗಳ ನೀರು ಕೂಡ ಸಮುದ್ರದಲ್ಲಿ ವಿಲೀನವಾಗುತ್ತದೆ. ಇದರಿಂದ ಆಲ್ಗೆಗಳ ಬೆಳವಣಿಗೆಗೆ ಬೇಕಾದ ಪೋಷಕಾಂಶ ಸಿಗುತ್ತದೆ. ಜೊತೆಗೆ ಬಿಸಿಲು ಕೂಡ ಇರುವುದು ಅವುಗಳಿಗೆ ಅನುಕೂಲಕರ ವಾತಾವರಣ ಉಂಟುಮಾಡುತ್ತದೆ. ಸಮುದ್ರದಾಳದಲ್ಲಿ ಹೂಳೆತ್ತುವಂಥ ಕಾರ್ಯಗಳ ಮೂಲಕ ಮನುಷ್ಯನ ಹಸ್ತಕ್ಷೇಪ ಹೆಚ್ಚಾಗುವುದೂ ಇದಕ್ಕೆ ಕಾರಣಗಳಲ್ಲಿ ಒಂದು ಎಂದು ಅವರು ವಿವರಿಸಿದರು. ಇದನ್ನೂ ಓದಿ: ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

ಕೆಲವು ವರ್ಷಗಳ ಹಿಂದಿನವರೆಗೆ ಬಾಂಗ್ಡೆ, ತಾರ್ಲಿ ಮೀನುಗಳು ಹೆಚ್ಚಿರುತ್ತಿದ್ದವು. ಅವುಗಳು ಆಲ್ಗೆಗಳನ್ನು ತಿನ್ನುತ್ತಿದ್ದ ಕಾರಣ ನಿಯಂತ್ರಣದಲ್ಲಿ ಇರುತ್ತಿದ್ದವು. ಆದರೆ ಈಚೆಗೆ ಈ ಮೀನುಗಳ ಸಂತತಿ ಕಡಿಮೆಯಾಗಿದೆ. ಈ ಪ್ರಭೇದದ ಆಲ್ಗೆಯೊಂದೇ ಸಮುದ್ರದಲ್ಲಿ ಬೆಳೆಯುತ್ತಿದ್ದು, ಇತರ ಜಾತಿಯವು ಹೆಚ್ಚಾಗಲು ಅವಕಾಶವಿಲ್ಲದಂತಾಗಿದೆ. ಇದು ಒಂದು ರೀತಿಯಲ್ಲಿ ಮೀನುಗಳಿಗೆ ಆಹಾರದ ಕೊರತೆಯಾಗಲೂ ಕಾರಣವಾಗಿದೆ. ಹೀಗಾಗಿ ಮೀನುಗಳು ಸೊರಗಿ ಮೀನುಗಾರಿಕೆಯೂ ಕುಂಠಿತವಾಗುತ್ತದೆ ಎಂದು ತಿಳಿಸಿದರು.

KWR 3 copy

ಕಳೆದ ವರ್ಷವೂ ಗೋಚರಿಸಿತ್ತು..!:
ನೀಲಿ ಬೆಳಕು ಸೂಸುವ ಪಾಚಿಗಳು ಕಳೆದ ವರ್ಷ ಕಾರವಾರದ ತಿಳಮಾತಿ ತೀರದಲ್ಲಿ ಗೋಚರಿಸಿತ್ತು. ಕಳೆದಬಾರಿ ದೊಡ್ಡ ಪ್ರಮಾಣದಲ್ಲಿ ಇಲ್ಲದಿದ್ದರೂ ಒಂದು ವಾರಕ್ಕೊ ಹೆಚ್ಚು ಸಮಯ ಈ ಪಾಚಿಗಳು ಗೋಚರಿಸುವ ಮೂಲಕ ನೀಲಿ ಬಣ್ಣದ ಬೆಳಕನ್ನ ಮೂಡಿಸಿ ವಿಸ್ಮಯ ಸೃಷ್ಟಿಸಿದ್ದವು.

ನೀಲಿ ಬೆಳಕು ಸೂಸುವ ಪಾಚಿ ಮಾದರಿಯ ಅಧ್ಯಯನ:
ಬೆಳಕು ಸೂಸುವ ಆಲ್ಗೆಗಳು 1949ರಲ್ಲಿ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಕಾಣಿಸಿಕೊಂಡವು. ಕಾರವಾರದಲ್ಲಿ 2017ರಲ್ಲಿ ಮೊದಲ ಬಾರಿಗೆ ದಾಖಲಾಯಿತು. ಮೂರು ವರ್ಷಗಳಿಂದ ಗೋಚರಿಸಲು ಕಾರಣವೇನು ಎಂಬ ಬಗ್ಗೆ ವೈಜ್ಞಾನಿಕ ಅಧ್ಯಯನ ಮಾಡಲಾಗುತ್ತದೆ ಎಂದು ಡಾ.ಶಿವಕುಮಾರ್ ಹರಗಿ ಪಬ್ಲಿಕ್ ಟಿವಿಗೆ ತಿಳಿಸಿದರು.

KWR FLASH SEA AV 2 copy

TAGGED:bluekarwarPublic TVseawaterಕಾರವಾರನೀರುನೀಲಿಪಬ್ಲಿಕ್ ಟಿವಿಸಮುದ್ರ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
3 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
44 minutes ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
1 hour ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
1 hour ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?