Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಿ – ಬೊಮ್ಮಾಯಿ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಿ – ಬೊಮ್ಮಾಯಿ ಸೂಚನೆ

Bengaluru City

ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಿ – ಬೊಮ್ಮಾಯಿ ಸೂಚನೆ

Public TV
Last updated: April 29, 2021 9:16 pm
Public TV
Share
2 Min Read
FotoJet 6 36
SHARE

-ಕೋವಿಡ್ ಸೋಂಕು ಹಿನ್ನೆಲೆ ಪರಪ್ಪನ ಅಗ್ರಹಾರಕ್ಕೆ ಭೇಟಿ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ರಾಜ್ಯದ ಕಾರಾಗೃಹಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಬೆನ್ನ ಹಿಂದೆಯೇ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳು ಕುರಿತು ಪರಿಶೀಲನೆ ನಡೆಸಿದರು. ಸೋಂಕು ಹರಡುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

FotoJet 8 37

ಕಾರಾಗೃಹಕ್ಕೆ ಭೇಟಿ ನೀಡಿದ ತಕ್ಷಣವೇ ಸಚಿವರು ಕಾರಾಗೃಹದ ಆಸ್ಪತ್ರೆಗೆ ಭೇಟಿ ನೀಡಿದರು. 100 ಹಾಸಿಗೆಯ ಆಸ್ಪತ್ರೆಯಲ್ಲಿನ ವೈದ್ಯಕೀಯ ವ್ಯವಸ್ಥೆಗಳನ್ನು ಅವಲೋಕಿಸಿದರು. ಕಾರಾಗೃಹದ ವೈದ್ಯಾಧಿಕಾರಿಗಳಿಂದ ಅಲ್ಲಿನ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಗಳ ಕುರಿತು ಮಾಹಿತಿ ಪಡೆದರು. ಸೋಂಕು ಕಾರಾಗೃಹದಲ್ಲಿನ ಇತರ ಕೈದಿಗಳಿಗೆ ಹರಡದಂತೆ ಕಟ್ಟೆಚ್ಚರವಹಿಸುವಂತೆ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ನಂತರ ಕಾರಾಗೃಹದಲ್ಲಿನ ಬಾನುಲಿ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಾನೂಲಿ ಮೂಲಕ ಕಾರಾಗೃಹದ ಎಲ್ಲ ಕೈದಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ ಎರಡನೆಯ ಅಲೆಯ ವಿರುದ್ಧ ನಮ್ಮ ಹೋರಾಟ ಸಾಗುತ್ತಿದೆ. ಈ ಸೋಂಕು ತಗುಲದಂತೆ ಮುನ್ನೆಚ್ವರಿಕೆ ವಹಿಸಿ ಎಂದು ಅವರು ಕೈದಿಗಳಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೈದಿಗಳ ಜತೆ ಸಮಾಲೋಚನೆ ನಡೆಸಿದರು. ಅವರ ಅಹವಾಲುಗಳನ್ನು ಆಲಿಸಿದರು. ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡುತ್ತಿರುವ ಕುರಿತು ಕೈದಿಗಳಿಗೆ ಸಚಿವರು ಮಾಹಿತಿ ನೀಡಿದರು. ಕೈದಿಗಳ ಅಹವಾಲುಗಳನ್ನು ಆಲಿಸಿ ಅವುಗಳನ್ನು ಬಗೆಹರಿಸುವ ಸಂಬಂಧ ಮಂಡಳಿಯೊಂದನ್ನು ರಚಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

FotoJet 9 28

ಕಾರಾಗೃಹ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು 49 ಕಾರಾಗೃಹಗಳಿವೆ. ಅವುಗಳಲ್ಲಿ 240 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಕೋವಿಡ್ ರೋಗ ಲಕ್ಷಣಗಳು ಕಂಡುಬಂದ ಕೈದಿಗಳನ್ನು ತಕ್ಷಣವೇ ತಪಾಸಣೆಗಳ ಪಡಿಸಲಾಗುತ್ತಿದೆ. ಸೋಂಕು ತಗುಲಿರುವ ಕೈದಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೋವಿಡ್ ನಿಂದ ಗುಣಮುಖರಾದ ನಂತರವೇ ಅವರನ್ನು ಕೇಂದ್ರ ಕಾರಾಗ್ರಹಕ್ಕೆ ಕರೆಸಿಕೊಡಲಾಗುತ್ತಿದೆ.

ಹೊಸ ಕೈದಿಗಳು ಕಾರಾಗ್ರಹಕ್ಕೆ ಬಂದರೆ ಅವರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿದೆ. ನಂತರ ಅವರನ್ನು ಆರ್‍ಟಿಪಿಸಿಆರ್ ಟೆಸ್ಟ್‍ಗೆ ಒಳಪಡಿಸಲಾಗುತ್ತದೆ. ಟೆಸ್ಟ್‍ನಲ್ಲಿ ನೆಗೆಟಿವ್ ವರದಿ ಬಂದ ನಂತರವಷ್ಟೇ ಅವರಿಗೆ ಕಾರಾಗೃಹದೊಳಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತಿದೆ. ಈ ರೀತಿ ಎಲ್ಲ ಕಾರಾಗೃಹಗಳಲ್ಲಿ ಕೋವಿಡ್ ವಿಚಾರವಾಗಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು. ಕಾರಾಗೃಹ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

FotoJet 7 39

ಕೋವಿಡ್ ವಿರುದ್ಧ ಹೊರಾಟಕ್ಕೆ 5 ಕೋಟಿ : ರಾಜ್ಯದ ಎಲ್ಲಾ ಕಾರಾಗೃಹಗಳಲ್ಲಿ ಕೋವಿಡ್ ಹೋರಾಟಕ್ಕೆ ಬೇಕಾದ ಅಗತ್ಯ ವೈದ್ಯಕೀಯ ಉಪಕರಣ ಮತ್ತು ಸೋಂಕು ನಿವಾರಕ ಔಷಧೋಪಚಾರ ಗಳಿಗಾಗಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಸಿದ್ದಪಡಿಸಲಾಗುತ್ತಿದೆ. ಎರಡು ಕೋಟಿ ರೂಪಾಯಿ ಮೊತ್ತದ ಯೋಜನೆಯನ್ನು ಐದು ಕೋಟಿಗೆ ಹೆಚ್ಚಿಸಲಾಗಿದೆ. ಎಸ್‍ಡಿಆರ್‍ಎಫ್ ನಿಧಿ ಅಡಿ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

TAGGED:Basavaraj BommaibengaluruCovidPublic TVಕಾರಾಗೃಹಕೋವಿಡ್ಪಬ್ಲಿಕ್ ಟಿವಿ jailಬಸವರಾಜ್ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
5 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
5 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
5 hours ago
dandeli advocate ajit naik murder case
Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
5 hours ago
01 11
Big Bulletin

ಬಿಗ್‌ ಬುಲೆಟಿನ್‌ 13 January 2026 ಭಾಗ-1

Public TV
By Public TV
6 hours ago
02 11
Big Bulletin

ಬಿಗ್‌ ಬುಲೆಟಿನ್‌ 13 January 2026 ಭಾಗ-2

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?