ಕಾರ್ಮಿಕರಿಗೆ ಹೇಳಿದ ಸಮಯಕ್ಕೆ ಇದ್ದಲ್ಲಿಯೇ ಸೀಗುತ್ತೆ ವ್ಯಾಕ್ಸಿನ್

Public TV
1 Min Read
ygr vaccine

– ಮನೆಗೆ ತೆರಳಿ ಕಾರ್ಮಿಕ ಇಲಾಖೆಯಿಂದ ಲಸಿಕೆ

ಯಾದಗಿರಿ: ಜಿಲ್ಲೆ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ, ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆಯಿಂದ ವಿಶೇಷ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೆ ಮನೆಯ ಬಳಿಗೆ ತೆರಳಿ ಲಸಿಕೆ ವಿತರಣೆ ಮಾಡಲಾಗುತ್ತಿದೆ.

WhatsApp Image 2021 06 05 at 1.10.39 PM medium

ಹೊಲಿಗೆ ಯಂತ್ರ ನಡೆಸುವವರು, ಮಡಿವಾಳ, ಸವಿತಾ ಸಮಾಜ ಮತ್ತು ಕಟ್ಟಡ ಕಾರ್ಮಿಕರಿಗೆ ಈ ಸೌಲಭ್ಯ ನೀಡಿದ್ದು, ಕಾರ್ಮಿಕರು ಇದ್ದಲ್ಲಿಗೇ ಹೇಳಿದ ಸಮಯಕ್ಕೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ. ಲಸಿಕೆ ಪಡೆಯಲು ಕಾರ್ಮಿಕರ ವರ್ಗ ಹಿಂದೇಟು ಹಾಕುತ್ತಿರುವ ಹಿನ್ನೆಲೆ ಅವರ ಮನವೊಲಿಸಿ ಅವರು ಇದ್ದ ಸ್ಥಳಕ್ಕೆ ತೆರಳಿ ಲಸಿಕೆ ಹಾಕಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

FotoJet 9 2

ಕಾರ್ಮಿಕ ಇಲಾಖೆ ಉಪ ನಿರ್ದೇಶಕಿ ಕುಮಾರಿ ಶ್ವೇತ ಮತ್ತು ಇನ್‍ಸ್ಪೆಕ್ಟರ್ ಗಂಗಾಧರ್ ಪ್ರತಿ ತಾಲೂಕು ಮತ್ತು ಗ್ರಾಮಗಳಿಗೆ ತೆರಳಿ ಕಾರ್ಮಿಕರ ಮನವೊಲಿಸಿ ಲಸಿಕೆ ಹಾಕಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *