ಚಿಕ್ಕೋಡಿ(ಬೆಳಗಾವಿ): ಕಟ್ಟಡ ಕಾರ್ಮಿಕರಿಗೆ ಸರ್ಕಾರ ಅನೇಕ ಯೋಜನೆಗಳನ್ನ ನೀಡಿದ್ದು ಅದರ ಸದುಪಯೋಗವನ್ನ ಕಟ್ಟಡ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.
ಕಾರ್ಮಿಕ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವ ಪರಿಸ್ಥಿತಿಯನ್ನು ಅರಿತು ಸರ್ಕಾರ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ, ಧನ ಸಹಾಯ ಸೇರಿದಂತೆ ಅನೇಕ ಯೋಜನೆಗಳನ್ನ ನೀಡಿದೆ. ಅದರ ಸದುಪಯೋಗವನ್ನ ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಜ್ಞಾನದೀವಿಗೆ – ದೊಡ್ಡಗದ್ದವಳ್ಳಿ ಸರ್ಕಾರಿ ಪ್ರೌಢಶಾಲೆಯ SSLC ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ
ಈ ಸಂದರ್ಭದಲ್ಲಿ 2500 ಕಿಂತ ಹೆಚ್ಚಿನ ಆಹಾರ ಕಿಟ್ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ, ತಾಲೂಕ್ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವೀರಣಗೌಡ ಎಗನಗೌಡರ ಕಾರ್ಮಿಕ ಇಲಾಖೆಯ ಅಧಿಕಾರಿ ಡಿಸೋಜಾ, ಹಿರಿಯ ಮುಖಂಡರಾದ ಸುಭಾಸ ಕಠಾರೆ, ಕಾಗವಾಡ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.