ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದ ಕಿಚ್ಚ ಸುದೀಪ್ ಅವರ ಅಭಿಮಾನಿ ಸಂಘದ ಕಾರ್ಯಕರ್ತರಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ಹೊನ್ನಾಕಟ್ಟಿ ಗ್ರಾಮದ ರಸ್ತೆ ಹಾಗೂ ಕಳೆಯಿಂದ ತುಂಬಿದ್ದ ಶಾಲೆಯ ಆವರಣಗಳಲ್ಲಿನ ಕಸ-ಕಡ್ಡಿಗಳನ್ನು ಆರಿಸಿ, ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡುವಂತೆ ತಮ್ಮ ಶ್ರಮದಾನ ಕಾರ್ಯದ ಮೂಲಕ ಸಂದೇಶ ನೀಡಿದರು. ಸ್ವಚ್ಛತೆಯಿಂದ ನಾವು ಸ್ವಾಸ್ಥ್ಯ ಮತ್ತು ಆರೋಗ್ಯಕರ ಜೀವನ ನಡೆಸಬಹುದು. ತಮ್ಮ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ಹೆಸರಿನಲ್ಲಿ ಈ ಕಾರ್ಯವನ್ನು ಮಾಡಿದ ಬಾಲ ಅಭಿಮಾನಿಗಳ ಕೆಲಸ ಶ್ಲಾಘನೀಯವಾದುದು.ಇದನ್ನೂ ಓದಿ: ಮಂಗಳಮುಖಿಯರಿಗೆ ಕಿಚ್ಚನ ನೆರವು
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಮಾತೆಯರಾದ ಲಲಿತಾ ಖೋತ್ ಹಾಗೂ ಸಹಶಿಕ್ಷಕರಾದ ಶಿವಪ್ಪ ದೇವಸಂಗಿ, ಮತ್ತು ಎಸ್.ಆರ್.ಸೂಳಿಭಾವಿಯವರು ಉಪಸ್ಥಿತರಿದ್ದರು. ಮಕ್ಕಳ ಈ ನಿಸ್ವಾರ್ಥ ಸೇವೆ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ 40ಕ್ಕೂ ಹೆಚ್ಚು ಮಕ್ಕಳಿರುವ ಪೃಥ್ವಿ ವಿಶೇಷ ಚೇತನರ ಶಾಲೆಯಲ್ಲಿರುವ ಬುದ್ದಿಮಾಂದ್ಯ ಮಕ್ಕಳು ಲಾಕ್ಡೌನ್ ವೇಳೆ ಆಹಾರಕ್ಕೂ ಪರದಾಡುವ ಸ್ಥಿತಿಯನ್ನು ಮನಗಂಡು ಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವು ನೀಡಿದ್ದರು. ಇದನ್ನೂ ಓದಿ: ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್