Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ

Districts

ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ

Public TV
Last updated: August 3, 2021 2:23 pm
Public TV
Share
4 Min Read
UDP
SHARE

ಉಡುಪಿ: ಇನ್ನೆರಡು ದಿನಗಳಲ್ಲಿ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಗುರುವಾರ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ಮಾಹಿತಿಯಿದೆ. ಈ ನಡುವೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಮಂತ್ರಿಸ್ಥಾನ ಕೊಡಬೇಕು ಎಂಬ ಕೂಗು ಜೋರಾಗಿದೆ. ಹಾಲಾಡಿ ಅಭಿಮಾನಿಗಳು ಯಡಿಯೂರಪ್ಪನವರಿಗೆ ನೇರ ಪತ್ರ ಬರೆದಿದ್ದಾರೆ.

ನಾಲ್ಕು ಬಾರಿ ಬಿಜೆಪಿಯಲ್ಲಿ ಗೆದ್ದ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಬಿಜೆಪಿಗೆ ಬೆಂಬಲಿಸಿದ ಉಡುಪಿ ಜಿಲ್ಲೆ ಕುಂದಾಪುರ ಶಾಸಕ, ಕುಂದಾಪುರದ ವಾಜಪೇಯಿ ಎಂಬ ಹೆಗ್ಗಳಿಕೆ ಗಳಿಸಿರುವ ಹಾಲಾಡಿಗೆ ಈ ಬಾರಿ ಮೋಸ ಆಗಬಾರದು ಎಂಬ ಅಭಿಯಾನ ಶುರುವಾಗಿದೆ. ಪತ್ರವೊಂದನ್ನು ಅಭಿಮಾನಿಗಳು ಮಾಜಿ ಸಿಎಂ ಯಡಿಯೂರಪ್ಪ ಅವರಿಗೇ ಬರೆದಿದ್ದಾರೆ.

bsy 5

ಯಡಿಯೂರಪ್ಪನವರಿಗೆ ತಲುಪಿಸಿ ಬಿಡಿ ಪ್ಲೀಸ್:
ಇದನ್ನ ಯಡಿಯೂರಪ್ಪನವರಿಗೆ ಮತ್ತು ಪಕ್ಷದ ವರಿಷ್ಠರಿಗೆ ನೀವು ತಲುಪಿಸಬೇಕು. ಆ ಕಾರಣಕ್ಕಾಗಿಯೇ ಬರೆಯುತ್ತಿದ್ದೇನೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಒಬ್ಬ ಮತದಾರನಾಗಿ ಬರೆಯುತ್ತಿರುವ ಪತ್ರವಿದು. ಇದನ್ನೂ ಓದಿ: ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ

ಯಡಿಯೂರಪ್ಪನವರೇ ಕುಂದಾಪುರದಲ್ಲಿ ಹಾಲಾಡಿಯವರ ವಿರುದ್ಧ ಪ್ಲೇ ಕಾರ್ಡ್ ಹಿಡಿದಾಗ ನೀವೇ ಖುರ್ಚಿಯಿಂದ ಎದ್ದು ಬಂದು ಹಾಲಾಡಿ ಶ್ರೀನಿವಾಸ ಶೆಟ್ಟರು ನಮ್ಮ ಶಕ್ತಿ, ಅವರನ್ನ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಅಬ್ಬರಿಸಿದ್ದೀರಿ. ಶೆಟ್ಟರಿಗೆ ಮೊದಲ ಸಲ ಬೆಂಗಳೂರಿಗೆ ಕರೆದು ಕೊನೆಯ ಹಂತದಲ್ಲಿ ಮಂತ್ರಿ ಪದವಿ ತಪ್ಪಿದಾಗ, ಶಾಸಕರ ಭವನದಲ್ಲಿ ಶೆಟ್ಟರ ಅಭಿಮಾನಿಗಳು ಜಮಾಯಿಸಿದಾಗ ಖುದ್ದು ನೀವೇ ಎದ್ದು ಬಂದಿರಿ. ಹಾಲಾಡಿ ಅಭಿಮಾನಿಗಳು ಆಕ್ರೋಶದಲ್ಲಿ ನಿಮಗೂ ಧಿಕ್ಕಾರ ಕೂಗಿದಾಗ ಹಾಲಾಡಿಯೇ ಹೊರಗೆ ಬಂದು ಅಬ್ಬರಿಸಿ ಬಿಟ್ಟಿದ್ದರು. ಅವರೊಂದಿಗೆ ಮಾತುಕತೆ ಮಾಡಿ ಹೊರ ಬಂದ ನೀವು ನಾಳೆಯೊಳಗೆ ಸಿಹಿ ಸುದ್ದಿ ಕೊಡುತ್ತೇವೆ ಎಂದಿದ್ದೀರಿ. ಆ ನಾಳೆ ಇಂದಿಗೂ ಬರಲಿಲ್ಲ, ನೀವು ಮರೆತಿರಿ, ಆದರೆ ನಾವು ಮರೆಯಲಿಲ್ಲ.

Haladi Srinivas Shetty 1

ನೀವು ಕಿಂಗ್ ಮೇಕರ್ ಸಾರ್:
ಸದಾನಂದ ಗೌಡರನ್ನ ಮುಖ್ಯಮಂತ್ರಿ ಮಾಡಿದ್ದು ನೀವು. ಕೊನೆಗೆ ಅವರು ನಿಮ್ಮ ಮಾತು ಕೇಳದೆ ತಿರುಗಿ ಬಿದ್ದಾಗ ಹಠಕ್ಕೆ ಬಿದ್ದು ಜಗದೀಶ್ ಶೆಟ್ಟರನ್ನ ತಂದು ಕೂರಿಸಿದ್ದೀರಿ. ಮೊನ್ನೆ ಬಸವರಾಜ್ ಬೊಮ್ಮಾಯಿಯೂ ನಿಮ್ಮ ಕೃಪೆಯಿಂದಲೇ ಮುಖ್ಯಮಂತ್ರಿಯಾದದ್ದು. ನಿಮ್ಮ ಸಂಪುಟದಲ್ಲಿ ಇದ್ದವರೆಲ್ಲಾ ಸುಭಗರ ಸ್ವಾಮಿ? ಒಮ್ಮೆಯೂ ಹಾಲಾಡಿಯವರನ್ನ ಮಂತ್ರಿಯಾಗಿಸಬೇಕು ಅಂತ ನಿಮಗೆ ಅನ್ನಿಸಲೇ ಇಲ್ಲವಾ? ಯಾಕೆ? ಹಾಲಾಡಿ ಬೇಕು ಎನ್ನುವುದಿಲ್ಲ, ಕೊಡದಿದ್ದರೆ ನಡೆಯೋತ್ತೆ ಎನ್ನುವ ನಿರ್ಲಕ್ಷ್ಯ ಅಲ್ಲವೇ?

ಅವತ್ತು ಹಾಲಾಡಿಗೆ ಅವಕಾಶ ತಪ್ಪಿಸಿದ್ದು ಕಲ್ಲಡ್ಕ ಪ್ರಭಾಕರ ಭಟ್ಟರು ಎಂಬ ಸುದ್ದಿ ಹೊರಬಿತ್ತಲ್ಲಾ? ಅದು ನೀವು ಹಾಲಾಡಿಯವರ ರೂಮಿನಿಂದ ಹೊರಗೆ ಬಂದಮೇಲೇ ಬಿದ್ದ ಸುದ್ದಿ?! ಅದರ ಮೂಲ ಯಾವುದು ಎಂಬುದನ್ನ ನಾನು ಬಲ್ಲೆ, ರಾಜಕಾರಣ ನನಗೆ ಬಹಳ ಸೊಗಸಾಗಿ ಅರ್ಥವಾಗುತ್ತದೆ. ಮಂತ್ರಿ ಮಂಡಲ ರಚನೆಯ ಹಿಂದಿನ ದಿವಸ ಹರತಾಳ ಹಾಲಪ್ಪ ಶಾಸಕರ ಭವನದ ಮುಂದೆ ವಾಕಿಂಗ್ ಮಾಡುತ್ತಿದ್ದರು. ಅವರನ್ನೇ ಕೇಳಿ ಬೇಕಿದ್ದರೆ, ಆಗ ಅವರ ಕೈ ತುಂಡಾಗಿತ್ತು. ಬಹಳ ಗಂಭೀರವಾಗಿ ಚರ್ಚಿಸುತ್ತಿದ್ದರು, ನನಗೆ ಅದೆಲ್ಲವೂ ನಂತರ ಅರ್ಥವಾಗಿತ್ತು.

BSY 11

ನಿಮ್ಮ ವಿರುದ್ಧ ಮತ್ತು ಹಾಲಪ್ಪ ವಿರುದ್ಧ ಸಿಡಿದೆದ್ದಿದ್ದ ಬೇಳೂರು ಗೋಪಾಲ ಕೃಷ್ಣರು ಈಡಿಗ ಕೋಟಾದಡಿ ಮಂತ್ರಿಯಾಗಬೇಕಿತ್ತು. ಹಾಲಪ್ಪ ಗೆಳೆಯನ ಹೆಂಡತಿಯ ಸೆರಗೆಳೆದ ಆರೋಪ ಹೊತ್ತು ಕಳಂಕಿತರಾಗಿದ್ದರು. ಶತಾಯಗತಾಯ ಬೇಳೂರಿಗೆ ಸ್ಥಾನ ಕೊಡಕೂಡದು ಅದಕ್ಕೆ ಪರ್ಯಾಯವಾಗಿ ಬಿಲ್ಲವ ನಾಯಕ ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಎಂದು ಬಲವಾಗಿ ನಿಮ್ಮ ಕಿವಿ ಊದಿದ್ದು ಹರತಾಳು ಎಂಬುದನ್ನು ನಾನು ಬಲ್ಲೆ. ನಿಮಗೂ ಅದೇ ಬೇಕಿತ್ತು. ನಿಮ್ಮ ಕಾರಣದಿಂದಾಗಿಯೇ ಹಾಲಾಡಿಯವರಿಗೆ ಮಂತ್ರಿ ಸ್ಥಾನ ತಪ್ಪಿತ್ತು. ದೇವರ ಮುಂದೆ ನಿಂತು ಇದನ್ನು ನಿರಾಕರಿಸಬಲ್ಲಿರಾ?

ಮುಂದೆ ನೀವೇ ಹಾಲಾಡಿಯವರ ಮನೆಗೆ ಓಡೋಡಿ ಬಂದಿರಿ, ಆಗ ಶೋಭ ಕರಂದ್ಲಾಜೆ ಪರವಾಗಿ ಹಾಲಾಡಿ ಬೆಂಬಲ ಬೇಕಿತ್ತು. ರಾಜ್ಯದ ಪ್ರತೀ ನಾಯಕನೂ ನಿಮ್ಮ ಮನೆಗೇ ಬಂದರೆ ಅವತ್ತು ನೀವೇ ಹಾಲಾಡಿ ಮನೆಗೆ ಹೋಗಿ ವಿನಂತಿಸಿಕೊಂಡು ಬಿಟ್ಟಿರಿ. ಕೊಟ್ಟ ಮಾತು ತಪ್ಪಿಸದ ಹಾಲಾಡಿ ನೀವು ಹೇಳಿದಂತೆ ಕೆಲಸ ಮಾಡಿದರು, ದೊಡ್ಡ ಲೀಡ್ ಕೂಡ ತನ್ನ ಕ್ಷೇತ್ರದಲ್ಲಿ ಕೊಡಿಸಿದರು. ಮೊನ್ನೆ ಏನೇನೋ ಕಸರತ್ತು ಮಾಡಿ ಸರ್ಕಾರ ಮಾಡಿದಾಗ ನೀವು ಹಾಲಾಡಿಯವರನ್ನ ನೆನಪಿಸಿಕೊಳ್ಳುತ್ತೀರಿ ಎಂದು ಭಾವಿಸಿದ್ದೆವು. ನೀವು ಮರೆತಿರಿ, ಎರಡನೆ ಸಲವೂ ಮತ್ತೆ ಅದೇ ನಿಲುವಿಗೆ ಅಂಟಿಕೊಂಡಿರಿ. ಯಡಿಯೂರಪ್ಪನವರೇ ನೀವು ಖಂಡಿತ ತಪ್ಪು ಮಾಡಿದ್ದೀರಿ. ನಿಮಗಿದನ್ನು ವಿವರಿಸಿ ಹೇಳುವವರು ಯಾರು? ನನಗೂ ಗೊತ್ತಿಲ್ಲ.

ಬಿಜೆಪಿ ವರಿಷ್ಠರೆ ಗಮನಿಸಿ:
ಅಂದು ಹಾಲಾಡಿ ಪ್ರತಾಪ ಶೆಟ್ಟರನ್ನ ಸೋಲಿಸದೇ ಇದ್ದಿದ್ದರೆ ಅವರು ಗೆದ್ದು ಮಂತ್ರಿಯಾಗಿರುತ್ತಿದ್ದರು. ಆಗ ಇಡೀ ಉಡುಪಿ ಜಿಲ್ಲೆಯಲ್ಲಿ ಇದ್ದಿದ್ದೇ ಏಕೈಕ ಶಾಸಕ. ತಾನೂ ಗೆದ್ದು ಪಕ್ಷವನ್ನೂ ದೊಡ್ಡ ಎತ್ತರಕ್ಕೆ ಕೊಂಡೊಯ್ದ ಹಾಲಾಡಿಯವರು ನಿರ್ಮಲಾ ಸಿತಾರಾಮನ್ ರಾಜ್ಯಸಭೆಗೆ ಸ್ಪರ್ಧಿಸಿದಾಗ ತನ್ನ ಮತವನ್ನ ಮಾರಿಕೊಂಡಿದ್ದರೆ ಹಲವು ಕೋಟಿ ನಿರಾಯಸವಾಗಿ ಪಡೆಯಬಹುದಿತ್ತು. ಆಗ ಅವರು ಪಕ್ಷೇತರ ಶಾಸಕನಾಗಿದ್ದು, ಅಪವಾದವೂ ಬರುತ್ತಿರಲಿಲ್ಲ! ಲೇಹರ್ ಸಿಂಗ್ ನಿಮ್ಮ ಮನೆಗೇ ಬರುತ್ತೇನೆ ಎಂದಾಗ ಬರಗೊಡಲಿಲ್ಲ. ಆಗಲೂ ಬಾಜಪ ಪರವಾಗಿ ಕೆಲಸ ಮಾಡಿ ಎಲ್ಲಿಯೂ ಪಕ್ಷಕ್ಕೆ ಚ್ಯುತಿ ತರಲಿಲ್ಲ ಹಾಲಾಡಿ.

ನಿಮ್ಮ ಪಕ್ಷದಲ್ಲಿರುವ ಅತ್ಯಂತ ಪ್ರಾಮಾಣಿಕರಲ್ಲೇ ಪ್ರಾಮಾಣಿಕ ರಾಜಕಾರಣಿ ಎಂದರೆ ಹಾಲಾಡಿ. ಇಂತಹ ಸಚ್ಚಾರಿತ್ರ್ಯವಂತನಿಗೆ ಈ ಸಾರಿಯೂ ಗೌರವ ನೀಡದೇ ಇದ್ದರೆ ದೇವರೂ ನಿಮ್ಮನ್ನು ಕ್ಷಮಿಸುವುದಿಲ್ಲ. ಈ ಸಾರಿಯೂ ಹಾಲಾಡಿಗೆ ಅವಮಾನವಾದರೆ ಯಾರೂ ಪ್ರತಿಭಟಿಸುವುದಿಲ್ಲ, ಪಕ್ಷ ಬಿಡುವುದಿಲ್ಲ, ಟಯರ್ ಸುಡುವುದಿಲ್ಲ, ಗಲಾಟೆಯಾಗುವುದಿಲ್ಲ ಆದರೆ ಯಾರೆಲ್ಲ ಇದರ ಹಿಂದಿದ್ದೀರೋ ನಿಮ್ಮೆಲ್ಲರಿಗೂ ಹಾಲಾಡಿ ಅಭಿಮಾನಿಗಳ ಶಾಪ ತಾಕದೇ ಇರುವುದಿಲ್ಲ. ಬಾಕಿ ಉಳಿದ ಒಂದು ವರ್ಷ ಆರು ತಿಂಗಳ ಅವಧಿಯ ಮಂತ್ರಿ ಪದವಿ ಕೊಡದಿದ್ದರೆ ಹಾಲಾಡಿ ಏನು ಅಳುವುದಿಲ್ಲ, ಇಂಥಹ ಮನುಷ್ಯನಿಗೆ ಅವಕಾಶ ನೀಡುವ ಅವಕಾಶವಿದ್ದೂ ಅದನ್ನು ಕಳೆದುಕೊಂಡ ನಿಮ್ಮ ನಿಲುವುಗಳು ಮುಂದೊಂದು ದಿನ ಪಶ್ಚಾತಾಪಕ್ಕೆ ಕಾರಣವಾಗಲಿದೆ.

ಇತಿಹಾಸದ ಪುಟದಲ್ಲಿ ಇದೊಂದು ಕಪ್ಪು ಚುಕ್ಕೆಯಾಗದಿದ್ದರೆ ಕೇಳಿ. ನಮ್ಮದೇನು ಆಗ್ರಹವಿಲ್ಲ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ ಎಂದಾದರೆ ಏನೇನೂ ಅಭ್ಯಂತರವಿಲ್ಲ. ಈ ಸಾರಿ ಹಾಲಾಡಿಗೆ ಅವಕಾಶ ಕೊಟ್ಟರೆ ಕರಾವಳಿ ಮಾತ್ರವಲ್ಲ ರಾಜ್ಯದ ಕೋಟ್ಯಂತರ ಪ್ರಾಮಾಣಿಕ ಮನಸುಗಳು ನಿಮ್ಮನ್ನು ಮೆಚ್ಚಬಹುದು.

ನಮಸ್ಕಾರ
ಈ ಪತ್ರ ವಾಟ್ಸಪ್ ಫೇಸ್ಬುಕ್ ಇನ್ಸ್ಟಾಗ್ರಾಂ ಮೂಲಕ ಎಲ್ಲೆಡೆ ಹರಿದಾಡುತ್ತಿದೆ. ಹಾಲಾಡಿ ಅಭಿಮಾನಿಗಳು ಇದರ ಪ್ರಿಂಟ್ ಔಟ್ ತೆಗೆದು ಯಡಿಯೂರಪ್ಪನವರಿಗೆ ಪೋಸ್ಟ್ ಮಾಡುತ್ತಿದ್ದಾರೆ.

TAGGED:BS YediyurappaHaladi Srinivas ShettyletterPublic TVudupiಉಡುಪಿಪತ್ರಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಹಾಲಾಡಿ ಶ್ರೀನಿವಾಸ ಶೆಟ್ಟಿ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

01 21
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-1

Public TV
By Public TV
5 hours ago
Rajeshwari Gayakwad
Cricket

ಕನ್ನಡತಿ ರಾಜೇಶ್ವರಿ ಮ್ಯಾಜಿಕ್‌, 45 ರನ್‌ಗಳ ಜಯ – ಕೊನೆಯಲ್ಲಿದ್ದ ಗುಜರಾತ್‌ 2ನೇ ಸ್ಥಾನಕ್ಕೆ ಜಂಪ್‌

Public TV
By Public TV
5 hours ago
02 18
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-2

Public TV
By Public TV
5 hours ago
03 15
Big Bulletin

ಬಿಗ್‌ ಬುಲೆಟಿನ್‌ 22 January 2026 ಭಾಗ-3

Public TV
By Public TV
5 hours ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

Public TV
By Public TV
5 hours ago
let recruitment case nia court sentences key accused to 10 years ri
Crime

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣ – ಶಿರಸಿಯ ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?