ಕುಂದಾಪುರ ಆಕ್ಸಿಜನ್ ಪ್ಲ್ಯಾಂಟ್ ಕಾಮಗಾರಿ ವೀಕ್ಷಿಸಿದ ಸಂಸದೆ ಶೋಭಾ ಕರಂದ್ಲಾಜೆ

Public TV
1 Min Read
udp shobha 3

ಉಡುಪಿ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಕಾಮಗಾರಿಯನ್ನು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು.

ಸಿವಿಲ್ ಕಾಮಗಾರಿ ತಾಂತ್ರಿಕ ಅಡಚಣೆಯಿಂದ ವಿಳಂಬವಾಗಿದೆ. ಈ ಕಾರಣಕ್ಕಾಗಿ ಕಾಮಗಾರಿಯ ಉಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿದೆ. ಶೀಘ್ರ ಕಾಮಗಾರಿ ಪೂರ್ಣ ಆಗಬೇಕು ಎಂದು ಪ್ರಾಜೆಕ್ಟ್ ಇಂಜಿನಿಯರ್ ಗಳಿಗೆ ಸಂಸದೆ ಸೂಚನೆ ನೀಡಿದರು.

udp shobha 2

ಒಟ್ಟು 5 ಲಕ್ಷ ರೂ ವೆಚ್ಚದ ಕಾಮಗಾರಿಗೆ ಸಂಸದರ ನಿಧಿಯಿಂದ ಮೂರು ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲು ನಿರ್ದೇಶನ ನೀಡಲಾಗಿದೆ. ಉಳಿದ ಎರಡು ಲಕ್ಷ ರೂಪಾಯಿಗಳನ್ನು ಐಎಂಎಯವರು ನೀಡಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ವಿವರಿಸಿದರು.

udp shobha 1

ಹದಿನೈದು ದಿನಗಳೊಳಗೆ ಘಟಕ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಲಿದೆ ಅಗತ್ಯದ ಯಂತ್ರೋಪಕರಣಗಳು ಡಿ.ಆರ್.ಡಿ.ಓ ಸಂಸ್ಥೆ ಒದಗಿಸಲಿದೆ ಎಂದು ಮಧ್ಯಮಗಳಿಗೆ ಮಾಹಿತಿ ಕೊಟ್ಟರು.

https://twitter.com/ShobhaBJP/status/1397164588622172161

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಪುರಸಭೆ ಸದಸ್ಯ ಮೋಹನ್ ದಾಸ್ ಶೆಣೈ ಉಪಸ್ಥಿತರಿದ್ದರು.

https://twitter.com/ShobhaBJP/status/1397230880381353990

Share This Article
Leave a Comment

Leave a Reply

Your email address will not be published. Required fields are marked *