Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

Cricket

ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

Public TV
Last updated: January 22, 2021 10:24 pm
Public TV
Share
2 Min Read
D Raghavendra main
SHARE

ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ, ಜಗತ್ತಿನೆಲ್ಲೆಡೆ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯನಿಗೂ ಭಾರತೀಯ ಕ್ರಿಕೆಟ್ ತಂಡಕ್ಕೂ ಇರುವ ನಂಟಿನ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್, ರವಿಶಾಸ್ತ್ರಿ, ಮನೀಶ್ ಪಾಂಡೆ, ಕೆ.ಎಲ್.ರಾಹುಲ್ ಸೇರಿದಂತೆ ಬಹುತೇಕ ಎಲ್ಲಾ ಕ್ರಿಕೆಟಿಗರು ಕುಕ್ಕೆ ಸುಬ್ರಹ್ಮಣ್ಯ ಬಂದು ತಮ್ಮ ಯಶಸ್ಸಿನ ಮೆಟ್ಟಿಲನ್ನು ಗಟ್ಟಿಗೊಳಿಸಿದವರೇ. ಇದೀಗ ಪ್ರಸ್ತುತ ಇರುವ ಕ್ರಿಕೆಟ್ ತಂಡದಲ್ಲೂ ಒಬ್ಬ ಕ್ರೀಡಾಳು ಭಾರತೀಯ ಕ್ರಿಕೆಟ್ ತಂಡ ದೇಶ, ವಿದೇಶ ನೆಲದಲ್ಲಿ ಆಟವಾಡಲು ಹೋಗುವ ಮೊದಲು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಸೇವೆ ಸಲ್ಲಿಸುತ್ತಾರೆ.

D Raghavendra team india 2

ಭಾರತೀಯ ಕ್ರಿಕೆಟ್ ತಂಡದ ಥ್ರೋಡೌನ್ ಸ್ಪೆಷಲಿಸ್ಟ್ ಡಿ.ರಾಘವೇಂದ್ರ ಕಳೆದ ಇಪ್ಪತ್ತು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಪ್ರಾರ್ಥನೆ ಮಾಡಿ, ತಮ್ಮ ಇಷ್ಟಾರ್ಥ ಪೂರೈಸಿಕೊಂಡಿದ್ದಾರೆ. ಕುಮುಟಾದ ತನ್ನ ಮನೆಯಿಂದ ಹೊರಬಂದು ಬೆಂಗಳೂರಿಗೆ ಸೇರಿದ್ದ ರಾಘವೇಂದ್ರ ಒಪ್ಪತ್ತಿನ ಊಟಕ್ಕೂ ಪರದಾಡಿದ ದಿನಗಳು ಸಾಕಷ್ಟಿವೆ. ಎಳವೆಯಲ್ಲೇ ಕ್ರಿಕೆಟ್‍ನ ಹುಚ್ಚು ತಲೆಗೆ ಹಚ್ಚಿಸಿಕೊಂಡಿದ್ದ ರಾಘವೇಂದ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ನೋಡಿಯೇ ತನ್ನ ಪ್ರತಿಭೆಯನ್ನು ಹೆಚ್ಚಿಸಿಕೊಂಡವರು. ಕ್ರೀಡಾಂಗಣದ ಹೊರಗೆ ಬಂದ ಬಾಲನ್ನು ಹೆಕ್ಕಿಕೊಡುತ್ತಿದ್ದ ರಾಘವೇಂದ್ರ ಇದೀಗ ದೇಶ-ವಿದೇಶಗಳ ಕ್ರಿಕೆಟ್ ತಂಡಕ್ಕೆ ಬೇಕಾದ ಕ್ರೀಡಾಳುವಾಗಿದ್ದಾರೆ. ಮೊದಲ ಬಾರಿಗೆ ಕುಕ್ಕೆಗೆ ಬಂದಾಗ ಕುಕ್ಕೆಯ ಛತ್ರದ ಹೊರಗೆ ಚಾಪೆ ಹಾಕಿ ಮಲಗಿದ್ದ ರಾಘವೇಂದ್ರ ಕುಕ್ಕೆ ಸುಬ್ರಹ್ಮಣ್ಯ ಕೃಪೆಗೆ ಪಾತ್ರರಾಗಿ ಇಂದು ಆಕಾಶದೆತ್ತರಕ್ಕೆ ಬೆಳೆದಿದ್ದಾರೆ.

D Raghavendra 6

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಪ್ಪಟ ಭಕ್ತರಾಗಿರುವ ಡಿ.ರಾಘವೇಂದ್ರ, ತಮ್ಮ ತಂಡ ಪ್ರತೀ ಬಾರಿ ಆಡುವ ಆಟಕ್ಕೆ ಮೊದಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಡದ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಾರೆ. ಗೆದ್ದು ಬಂದ ಬಳಿಕ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದು ರಾಘವೇಂದ್ರ ಅವರ ರೂಢಿ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿ ಮೂಲಕ ಭಾರತೀಯ ತಂಡದ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ, ಆಸ್ಟ್ರೇಲಿಯಾ ದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತೀಯ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲುವು ಸಾಧಿಸಿದ ತಕ್ಷಣವೇ ಕುಕ್ಕೆ ಸುಬ್ರಹ್ಮಣ್ಯದ ಪ್ರೋಟೋಕಾಲ್‌ ಸಿಬ್ಬಂದಿ ಪ್ರಮೋದ್‍ಗೆ ದೂರವಾಣಿ ಕರೆಮಾಡಿ ತಂಡದ ಹೆಸರಿನಲ್ಲಿ ಸುಬ್ರಹ್ಮಣ್ಯನಿಗೆ ಸೇವೆ ಸಲ್ಲಿಸಲು ತಿಳಿಸಿದ್ದಾರೆ.

D Raghavendra 4

ಕೇವಲ ಕ್ರಿಕೆಟ್ ಮಾತ್ರವಲ್ಲ, ಇತರ ಕ್ರೀಡಾಳುಗಳು ಕೂಡ ಕುಕ್ಕೆಗೆ ಭೇಟಿ ನೀಡಿ ತಮ್ಮ ಕ್ರೀಡೆಯಲ್ಲಿ ಯಶಸ್ಸು ಗಳಿಸಿದ್ದಾರೆ. ಸುಬ್ರಹ್ಮಣ್ಯ ದೇವರಿಗೂ ಕ್ರೀಡೆಗೂ ಸಾಮ್ಯತೆಯಿದ್ದು, ಸುಬ್ರಹ್ಮಣ್ಯ ಸ್ಚಾಮಿಯ ತಾಯಿ ಪಾರ್ವತಿಯು ತಮ್ಮ ಇಬ್ಬರು ಮಕ್ಕಳಾದ ಗಣಪತಿ ಹಾಗೂ ಸುಬ್ರಹ್ಮಣ್ಯರಿಗೆ ತ್ರಿಲೋಕವನ್ನು ಮೂರು ಬಾರಿ ಸುತ್ತಿ ಬರುವಂತೆ ಸೂಚಿಸಿದ್ದಾರೆ. ಬೇಗ ಸುತ್ತು ಬಂದವರಿಗೆ ಮಾವಿನ ಹಣ್ಣನ್ನು ಬಹುಮಾನವಾಗಿ ನೀಡುವುದಾಗಿಯೂ ಹೇಳಿ ಕ್ರೀಡಾ ಮನೋಭಾವವನ್ನು ಸುಬ್ರಹ್ಮಣ್ಯ ಬಿತ್ತಿದ್ದರು. ಈ ಕಾರಣಕ್ಕಾಗಿಯೇ ಸುಬ್ರಹ್ಮಣ್ಯ ಸನ್ನಿಧಿಗೆ ಬರುವ ಕ್ರೀಡಾಳುಗಳು ಅತ್ಯಂತ ಯಶಸ್ವಿಯಾಗುತ್ತಾರೆ ಎನ್ನುವುದು ಕ್ಷೇತ್ರದ ಹಿರಿಯ ಸಿಬ್ಬಂದಿಯ ನಂಬಿಕೆಯಾಗಿದೆ.

D Raghavendra 45

ತನ್ನ ಅಪಾರ ಚಾಕಚಕ್ಯತೆಯ ಥ್ರೋಡೌನ್ ಬಾಲಿಂಗ್‍ನಿಂದ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತಿರುವ ರಾಘವೇಂದ್ರ ಎಷ್ಟೇ ಎತ್ತರಕ್ಕೆ ಬೆಳೆದರೂ ಕುಕ್ಕೆ ಸುಬ್ರಹ್ಮಣ್ಯದ ನಂಟು ಮರೆತಿಲ್ಲ. ಕುಕ್ಕೆ ಸುಬ್ರಹ್ಮಣ್ಯನ ಆಶೀರ್ವಾದ ಈ ಯುವ ಪ್ರತಿಭಾವಂತ ಆಟಗಾರನ ಮೇಲಿರಲಿ. ಆ ಮೂಲಕ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ದೇವಾಲಯದ ಸಿಬ್ಬಂದಿ ಹಾರೈಸಿದ್ದಾರೆ.

raghvendra 8

 

TAGGED:cricketD Raghvendrakannada newsKukke SubramanyaTeam indiaThrowdownಕುಕ್ಕೆ ಸುಬ್ರಹ್ಮಣ್ಯಕ್ರಿಕೆಟ್ಥ್ರೋಡೌನ್‌ರಾಘವೇಂದ್ರಸುಬ್ರಹ್ಮಣ್ಯ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
3 minutes ago
Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
37 minutes ago
Excise DC Lokayukta Raid
Bengaluru City

ಬಾರ್ ಲೈಸೆನ್ಸ್ ನೀಡಲು 2.25 ಕೋಟಿಗೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ

Public TV
By Public TV
38 minutes ago
Siddaramaiah 7
Latest

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು, ಸೈಬರ್‌ ಕ್ರೈಂ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ ಭರವಸೆ

Public TV
By Public TV
1 hour ago
Madikeri 2 1
Crime

ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ಜಲ ಸಮಾಧಿ!

Public TV
By Public TV
2 hours ago
Shubam gill
Cricket

Indore Crisis | 3 ಲಕ್ಷ ರೂ. ಮೌಲ್ಯದ ನೀರು ಶುದ್ಧೀಕರಣ ಯಂತ್ರ ತಂದ ಕ್ಯಾಪ್ಟನ್‌ ಗಿಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?