ಕುಟುಂಬ ಕಲಹ ಮಗನಿಂದಲೇ ತಂದೆಯ ಬರ್ಬರ ಕೊಲೆ

Public TV
1 Min Read
KLR MURDER

ಕೋಲಾರ: ಕುಟುಂಬದಲ್ಲಿ ಉಂಟಾದ ಕಲಹ ತಾರಕಕ್ಕೆ ಏರಿ ಸ್ವಂತ ಮಗನೇ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ, ಶ್ರೀನಿವಾಸಪುರದ ಅಂಬೇಡ್ಕರ್ ಪಾಳ್ಯದಲ್ಲಿ ತಡ ರಾತ್ರಿ ನಡೆದಿದೆ.

crime scene e1602054934159

ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮೃತ ದುರ್ದೈವಿ. ನವೀನ್ ತಂದೆಯನ್ನು ಕೊಲೆ ಮಾಡಿದ ಆರೋಪಿ. ನವೀನ್ ಮತ್ತು ವೆಂಕಟೇಶ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಬಳಿಕ ಮಾತಿಗೆ ಮಾತು ಬೆಳೆದು ತಡರಾತ್ರಿ ನವೀನ್ ಮನೆಯಲ್ಲಿದ್ದ ರುಬ್ಬುವ ಗುಂಡಿನಿಂದ ತಲೆಗೆ ಹೊಡೆದು ವೆಂಕಟೇಶ್ ಅವರನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ:  ಬೇಟೆಯಾಡಲು ಹೋದವನೇ ಬೇಟೆಯಾದ ? 

Police Jeep 1 1

ತಲೆಗೆ ರುಬ್ಬುವ ಗುಂಡುನಿಂದ ಹೊಡೆದ ಪರಿಣಾಮ ವೆಂಕಟೇಶ್ ತೀವ್ರ ರಕ್ತ ಸ್ರಾವದಿಂದಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಸ್ಥಳೀಯರು ಮನೆ ಮಂದಿಯ ಕಿರುಚಾಟ ಕೇಳಿ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ನವೀನ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ನವೀನ್‍ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *