Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗ್ರಾಮೀಣ ಕುಡಿಯುವ ನೀರು ಯೋಜನೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ – ಪ್ರಿಯಾಂಕ್‌ ಖರ್ಗೆ ಸೂಚನೆ

Public TV
Last updated: July 18, 2025 7:48 pm
Public TV
Share
2 Min Read
Priyank Kharge 1
SHARE

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ (Rural Drinking Water Project) ಕಾಮಗಾರಿಗಳನ್ನ ಗುತ್ತಿಗೆ ಪಡೆದು ಕೆಲ ವರ್ಷಗಳಾದರೂ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರು, ಗ್ರಾಮೀಣ ನೀರು ಸರಬರಾಜು ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಎಂಜಿನಿಯರುಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಗ್ರಾಮೀಣ ನೀರು ಸರಬರಾಜು ಇಲಾಖೆಯ (Rural Water Supply Department) ಜಿಲ್ಲಾ ಕಾರ್ಯನಿರ್ವಾಹಕ ಎಂಜಿನಿಯರುಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಂಜನಿಯರರು ನಿಧಾನ ಪ್ರವೃತ್ತಿಯನ್ನ ಬಿಟ್ಟು, ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ನಿರ್ದಿಷ್ಟ ಸಮಯದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ಆದ್ಯತೆ ನೀಡಬೇಕೆಂದು ಆದೇಶಿಸಿದರು. ಇದನ್ನೂ ಓದಿ: ಸಿಎಂ ಬದಲಾವಣೆಗೆ ಸಿದ್ದರಾಮಯ್ಯ ಮೈಂಡ್ ಸೆಟ್ ಆಗಿದೆ: ಕೇಂದ್ರ ಸಚಿವ ಸೋಮಣ್ಣ ವ್ಯಂಗ್ಯ

Priyank Kharge 2

ಏಕಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಮುಕ್ತಾಯಗೊಂಡ ನಂತರ ಅಗೆದ ರಸ್ತೆಗಳನ್ನು ಯಥಾಸ್ಥಿತಿಗೆ ತರುತ್ತಿಲ್ಲವೆಂಬ ದೂರುಗಳು ಬಹಳಷ್ಟು ಬರುತ್ತಿದೆ. ಈ ಸಂಬಂಧ ಎಂಜನಿಯರುಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ ಸಚಿವರು, ನೀರು ಸರಬರಾಜು ಕಾಮಗಾರಿ ಮುಗಿದ ನಂತರ ಆದ್ಯತೆಯ ಮೇಲೆ ರಸ್ತೆಗಳನ್ನು ಸರಿಪಡಿಸುವಲ್ಲಿ ಗಮನ ಹರಿಸಲು ಸೂಚಿಸಿದರು. ಜೊತೆಗೆ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡುವ ಮೊದಲು ಅವರಲ್ಲಿನ ಯಂತ್ರೋಪಕರಣಗಳು ಮುಂತಾದ ಸಾಮರ್ಥ್ಯವನ್ನು ಪರೀಕ್ಷಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Siddaramaiah govt hikes drinking water Tax BWSSB

ಏಕಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಗಳಿಗೆ ಮಂಜೂರಾತಿ ಪಡೆದು, ಕಾರ್ಯಗತವಾಗುವ ಸಮಯದಲ್ಲಿ ಎದುರಾಗುವ ಅರಣ್ಯಭೂಮಿ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ, ಯೋಜನೆಗಳನ್ನು ವೀಳಂಬ ಮಾಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಯೋಜನಾವರದಿ ಸಿದ್ಧಪಡಿಸುವಾಗಲೇ ಎದುರಾಗುವ ಅಡ್ಡಿ ಆತಂಕಗಳನ್ನು ಗಮನಿಸಬೇಕೆಂದು ಸಲಹೆ ಮಾಡಿದರು.  ಇದನ್ನೂ ಓದಿ: ಇದು ಸಿಎಂ ಅಳಿವು-ಉಳಿವಿನ ಸಮಾವೇಶ, ಜನರ ಸಾವಿನ ಮೇಲೆ ಮೈಸೂರು ಸಾಧನಾ ಸಮಾವೇಶ – ಆರ್.ಅಶೋಕ್ ಲೇವಡಿ

ಜಿಲ್ಲಾ ಪಂಚಾಯತಿ ಸಿಇಓಗಳು ತಿಂಗಳಲ್ಲಿ ಮೂರು ದಿನ ಪಂಚಾಯತ್‌ ರಾಜ್‌, ಗ್ರಾಮೀಣ ನೀರು ಸರಬರಾಜು ಹಾಗೂ ನರೇಗಾ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಬೇಕು, ಜಿಲ್ಲಾ ಮಟ್ಟದಲ್ಲೇ ಸಿಇಓಗಳು ಸಮಸ್ಯೆಗೆ ಪರಿಹಾರ ಹುಡಕಬೇಕು ಎಂದೂ ಸಚಿವರು ಈ ಸಂದರ್ಭದಲ್ಲಿ ಹೇಳಿದರು.

ಇಡೀ ದಿನ ನಡೆದ ಸಭೆಯಲ್ಲಿ ಸಚಿವರು ಜಿಲ್ಲಾವಾರು ಪ್ರಗತಿಯನ್ನು ಪರಿಶೀಲಿಸಿ, ಕಡಿಮೆ ಪ್ರಗತಿ ಸಾಧಿಸಿದ ಎಂಜನಿಯರುಗಳ ಚಳಿ ಬಿಡಿಸಿದರಲ್ಲದೆ, ಸಾಕಷ್ಟು ಪ್ರಮಾಣದಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸುವಲ್ಲಿ ಆಲಸ್ಯ ತೋರುವ ಎಂಜನಿಯರುಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ನೀರು ಕಲುಷಿತಗೊಂಡು ಗ್ರಾಮಗಳಲ್ಲಿ ಸಮಸ್ಯೆ ತಲೆದೋರಿದಲ್ಲಿ ಎಂಜನಿಯರುಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.  ಇದನ್ನೂ ಓದಿ: ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ

ಸಾರ್ವಜನಿಕರಿಂದ ಬರುವ ದೂರುಗಳನ್ನು ತಮ್ಮ ಮೇಜಿನಿಂದ ಕಳುಹಿಸಿದಲ್ಲಿ ಮಾತ್ರ ಸಮಸ್ಯೆ ಬಗೆಹರಿಯುವದಲ್ಲ, ದೂರನ್ನು ಪೂರ್ಣವಾಗಿ ಪರಿಹರಿಸುವ ಮೂಲಕ ಜನರ ಸಮಸ್ಯೆಗಳನ್ನು ದೂರ ಮಾಡಬೇಕು, ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಬರುವ ದೂರುಗಳನ್ನು ಅಂದೇ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಕ್ರಮ ಕೈಗೊಂಡು ಸೂಕ್ತ ಸ್ಪಷ್ಟನೆ ನೀಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿ ಸಮೀರ್‌ ಶುಕ್ಲಾ, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರಪ್ರಸಾದ್‌ ಹಾಗೂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.  ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಶಾಸಕರಿಗೂ ಅನುದಾನ ಸಿಗುತ್ತೆ, ತಾಳ್ಮೆಯಿಂದ ಇರಬೇಕು: ಡಿಕೆಶಿ

TAGGED:bengalurudrinking waterDrinking Water ProjectPriyank Khargeಕುಡಿಯುವ ನೀರಿನ ಯೋಜನೆಕುಡಿಯುವ ನೀರುಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema Updates

Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest

You Might Also Like

Belagavi DC
Belgaum

ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

Public TV
By Public TV
3 minutes ago
Jairam Ramesh
Latest

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

Public TV
By Public TV
5 minutes ago
Rummycircle
Districts

ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

Public TV
By Public TV
18 minutes ago
GST 1
Bengaluru City

ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

Public TV
By Public TV
39 minutes ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
1 hour ago
Santosh Lad
Districts

ಕೇಂದ್ರ ಬಿಜೆಪಿ ಐಸಿಯುನಲ್ಲಿದೆ, ಮೋದಿ ಏಕೆ ಬದಲಾವಣೆ ಆಗಬಾರದು – ಸಂತೋಷ್‌ ಲಾಡ್‌ ಪ್ರಶ್ನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?