ತುಮಕೂರು: ಕುಣಿಗಲ್ ಶಾಸಕ ಡಾ. ರಂಗನಾಥ್ಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಶಾಸಕರು ತನಗೆ ಕೊರೊನಾ ಇರುವುದನ್ನು ದೃಢಪಡಿಸಿದ್ದಾರೆ. ಶಾಸಕರು ಕಳೆದ ವಾರ ಕುಣಿಗಲ್ ಪೋಲಿಸರೊಂದಿಗೆ ಸಭೆ ನಡೆಸಿದ್ದರು. ಆ ವೇಳೆ ಸೋಂಕಿತ ಪೇದೆಯಿಂದ ಶಾಸಕರಿಗೆ ಸೋಂಕು ತಗುಲಿರೋ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಶಾಸಕರನ್ನು ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಭಾನುವಾರ ಬೆಂಗಳೂರಿನಲ್ಲೇ ಸ್ಯಾಂಪಲ್ ಕೊಟ್ಟಿದ್ದರು. ಇಂದು ಬೆಳಗ್ಗೆ ರಿಪೋರ್ಟ್ ಬಂದಿದ್ದು ಪಾಸಿಟಿವ್ ದೃಢಪಟ್ಟಿದೆ. ಹಾಗಾಗಿ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ.
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿದ್ದು, ಈ ಮಧ್ಯೆ ಸಚಿವರು, ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರು ಶಾಸಕ ಭರತ್ ಶೆಟ್ಟಿ ಅವರಿಗೂ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಸ್ವಥಃ ಶಾಸಕರೇ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದರು.