ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ – ಹೆಚ್‍ಡಿಡಿ ಕಿಡಿ

Public TV
1 Min Read
HDD HDK

ನವದೆಹಲಿ: ಕುಮಾರಸ್ವಾಮಿ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರ ಪ್ರತಿ ಕೆಲಸದಲ್ಲೂ ತಪ್ಪು ಕಂಡು ಹಿಡದು ಟೀಕಿಸುವ ವ್ಯವಸ್ಥಿತ ಕೆಲಸವಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಪಿಸಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ ಎಂದರು.

hdd

ಹಿಂದೆ ಸರ್ಕಾರ ಇದ್ದ ಸಂದರ್ಭದಲ್ಲಿ ರೇವಣ್ಣ ವಿರುದ್ಧ ಅಪಪ್ರಚಾರ ಮಾಡಲಾಯಿತು. ರೇವಣ್ಣ ಅವರನ್ನು ಸೂಪರ್ ಸಿಎಂ ಎಂದು ಆರೋಪಿಸುತ್ತಿದ್ದರು. ಕುಮಾರಸ್ವಾಮಿ ಯಡಿಯೂರಪ್ಪ ಭೇಟಿ ಮಾಡಿ ಕ್ಷೇತ್ರಕ್ಕೆ ಸಂಬಂಧಿಸಿದ್ದರ ಬಗ್ಗೆ ಮಾತನಾಡಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ ಎಂದರು.

HDD

ಈಗ ಬಿಎಸ್‍ವೈ ಸರ್ಕಾರದಲ್ಲಿ ಬಿ.ವೈ ವಿಜಯೇಂದ್ರ ಅವರ ಹಸ್ತಕ್ಷೇಪದ ಆರೋಪ ಮಾಡಲಾಗುತ್ತಿದೆ. ವಿಪಕ್ಷಗಳಲ್ಲ ಸ್ವಪಕ್ಷೀಯರೇ ಹೈಕಮಾಂಡ್ ದೂರು ನೀಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *