ಕೂಲಿಕಾರ್ಮಿಕ ಜೀವ ಬಲಿಪಡೆದ ಜವರಾಯ – ದುಡಿಯಲು ಹೊರಟವರು ಮಸಣಕ್ಕೆ

Public TV
1 Min Read
FotoJet 4 48

ಯಾದಗಿರಿ: ತುತ್ತು ಅನ್ನಕ್ಕಾಗಿ ಊರಿಂದ ಊರಿಗೆ ದುಡಿಯಲು ಹೋದ ಅಮಾಯಕ ಜೀವಗಳನ್ನು ಜವರಾಯ ಬಲಿ ಪಡೆದುಕೊಂಡಿದ್ದಾನೆ. ಟಂಟಂ ಮತ್ತು ಟ್ಯಾಂಕರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

FotoJet 5 47

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಎಂ ಕೊಳ್ಳೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40), ದೇವಿಂದ್ರಮ್ಮ (70) ಎಂಬವರು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದು, ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

FotoJet 6 30

ಮೃತರೆಲ್ಲರೂ ವಡಗೇರಾ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದು, ಟಂಟಂ ವಾಹನದಲ್ಲಿ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಅಪಘಾತ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *