ಹೈದರಾಬಾದ್: ಕೆಲಸ ಮುಗಿಸಿ ಮನಗೆ ಹೋಗುತ್ತಿದ್ದ ಕೂಲಿ ಕಾರ್ಮಿಕರಿದ್ದ ಆಟೋ ಕಂಟೇನರ್ ಗೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿ, 13 ಜನರಿಗೆ ಗಾಯವಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಬಳಿ ನಡೆದಿದೆ.
ವಾಹನ ಭೀಕರ ರಸ್ತೆ ಅಪಘಾತಕ್ಕಿಡಾಗಿ ವಾಹನದಲ್ಲಿದ್ದ 7 ಮಹಿಳೆಯರು ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರು ಚಿಂತಾಬಾವಿ ಗ್ರಾಮದ ನಿವಾಸಿಗಳಾಗಿದ್ದಾರೆ. 20 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋ ಕಂಟೇನರ್ಗೆ ಡಿಕ್ಕಿಯಾಗಿ ಸಾವು-ನೋವು ಸಂಭವಿಸಿದೆ.
ಈ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಆಟೋ ಚಾಲಕ ಮಲ್ಲೇಶ್, ಕಲೂಲಿ ಕಾರ್ಮಿಕರಾದ ಪೆದ್ದಮ್ಮ, ನೋಮಲ ಸೈದಮ್ಮ, ಕೊಟ್ಟಂ, ಪೆದ್ದಮ್ಮ ಗೋಡುಗು, ಇದ್ದಮ್ಮ ಮಲ್ಲಮ್ಮ, ಅಂಜನಮ್ಮ ಎಂದು ಗುರುತಿಸಲಾಗಿದೆ. 13 ಜನರು ಗಂಭಿರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಒಟ್ಟು 20 ಮಂದಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.