Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷಿ ಕಾಯ್ದೆ ವಿರುದ್ಧ ಮಣ್ಣಿನ ಮಕ್ಕಳ ಆರದ ಕಿಚ್ಚು- ಟ್ರ್ಯಾಕ್ಟರ್ ರ‍್ಯಾಲಿ ಬಳಿಕ ಮತ್ತೊಂದು ಬೃಹತ್ ಹೋರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೃಷಿ ಕಾಯ್ದೆ ವಿರುದ್ಧ ಮಣ್ಣಿನ ಮಕ್ಕಳ ಆರದ ಕಿಚ್ಚು- ಟ್ರ್ಯಾಕ್ಟರ್ ರ‍್ಯಾಲಿ ಬಳಿಕ ಮತ್ತೊಂದು ಬೃಹತ್ ಹೋರಾಟ

Karnataka

ಕೃಷಿ ಕಾಯ್ದೆ ವಿರುದ್ಧ ಮಣ್ಣಿನ ಮಕ್ಕಳ ಆರದ ಕಿಚ್ಚು- ಟ್ರ್ಯಾಕ್ಟರ್ ರ‍್ಯಾಲಿ ಬಳಿಕ ಮತ್ತೊಂದು ಬೃಹತ್ ಹೋರಾಟ

Public TV
Last updated: February 5, 2021 7:23 am
Public TV
Share
2 Min Read
DHL PROTEST 4
SHARE

– ನಾಳೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಗಣರಾಜ್ಯೋತ್ಸವ ದಿನದಂದು ದೊಡ್ಡ ಎಚ್ಚರಿಕೆ ನೀಡಿದ್ದ ಅನ್ನದಾತರ ಪಡೆ, ಈಗ ಪ್ರತಿಭಟನಾ ಸ್ಥಳದಲ್ಲಿ ಮೂಲಸೌಕರ್ಯಗಳನ್ನು ಕಟ್ ಮಾಡಿದ್ದಕ್ಕೆ ಸಿಡಿದಿದ್ದಿದ್ದಾರೆ. ಈ ಮೂಲಕ ಮೋದಿ ಸರ್ಕಾರಕ್ಕೆ ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಿದ್ಧವಾಗಿದ್ದಾರೆ.

DHL PROTEST 3

ಜನವರಿ 26ರ ಗಣದಿನದಂದು ರಾಷ್ಟ್ರ ರಾಜಧಾನಿ ದೆಹಲಿ ಕಂಡು ಕೇಳರಿಯದ ಪ್ರತಿಭಟನೆಗೆ ಸಾಕ್ಷಿ ಆಗಿತ್ತು. ರೈತರ ಟ್ರ್ಯಾಕ್ಟರ್ ರ್ಯಾಲಿ ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿ ದೆಹಲಿ ಕೆಂಪು ಕೋಟೆಗೆ ರೈತರ ಗುಂಪೊಂದು ಮುತ್ತಿಗೆ ಹಾಕಿ ಕಿಸಾನ್ ಧ್ವಜ ಹಾರಿಸ್ತು. ಈ ಘಟನೆ ದೆಹಲಿಯಲ್ಲಿ ಇನ್ನಿಲ್ಲದ ಕಿಚ್ಚು ಹೊತ್ತಿಕೊಳ್ಳಲು ಕಾರಣವಾಯ್ತು. ದೆಹಲಿಯಲ್ಲಿ ದೊಂಬಿ, ಗಲಾಟೆ ಗದ್ದಲದ ಬಳಿಕ ಮೋದಿ ಸರ್ಕಾರ ರೈತರ ಪ್ರತಿಭಟನಾ ಸ್ಥಳಗಳಲ್ಲಿ ಇನ್ನಿಲ್ಲದ ರೀತಿಯಲ್ಲಿ ಭದ್ರತೆಯನ್ನು ಹೆಚ್ಚಳ ಮಾಡ್ತು. ರೈತರ ಹೋರಾಟವನ್ನು ಹತ್ತಿಕ್ಕಲು ಸಿಂಘು, ಟಿಕ್ರಿ, ಗಾಜಿಪುರ ಗಡಿ ಭಾಗದಲ್ಲಿ ಮೊಳೆ, ಮುಳ್ಳಿನ ಬೇಲಿ ನಿರ್ಮಿಸಿತ್ತು 7 ಸುತ್ತಿನ ಪೊಲೀಸ್ ಭದ್ರಕೋಟೆ ನಿಯೋಜಿಸಿತ್ತು.

DHL PROTEST 2

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯುಪಿ ಗಡಿ ಗಾಜೀಪುರ್‍ದಲ್ಲಿ ಮೂಲ ಸೌಕರ್ಯಗಳನ್ನು ಬಂದ್ ಮಾಡಿದ್ರು. ವಿದ್ಯುತ್, ನೀರು ಮತ್ತು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದ್ರು. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದರು. ಕೇಂದ್ರ ಮತ್ತು ಯುಪಿ ರಾಜ್ಯ ಸರ್ಕಾರದ ನಡೆಗೆ ಈಗ ಅನ್ನದಾತರು ಗರಂ ಆಗಿದ್ದಾರೆ. ಸರ್ಕಾರದ ನಿಲುವು ಖಂಡಿಸಿ ಮತ್ತೊಂದು ಬೃಹತ್ ಹೋರಾಟ ನಡೆಸಲು ಸಿದ್ಧವಾಗಿದ್ದಾರೆ.

DHL PROTEST 1

ನಾಳೆ ದೇಶಾದ್ಯಂತ ಮಧ್ಯಾಹ್ನ 12ರಿಂದ ಮಧ್ಯಾಹ್ನ 3 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಮಣ್ಣಿನ ಮಕ್ಕಳು ಬಂದ್ ಮಾಡಲಿದ್ದಾರೆ. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ನಗರದ ಹೊರ ಪ್ರದೇಶಗಳಲ್ಲಿ ಈ ಹೋರಾಟ ನಡೆಸಲು ಭಾರತೀಯ ಕಿಸಾನ್ ಯೂನಿಯನ್ ನಿರ್ಧರಿಸಿದೆ. ಅನ್ನದಾತರು ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ರು. ಸಭೆಯಲ್ಲಿ ಎನ್‍ಎಸ್‍ಜಿ ಅಜಿತ್ ದೋವಲ್, ದೆಹಲಿ ಪೊಲೀಸ್ ಕಮಿಷನರ್ ಎಸ್.ಎಲ್ ಶ್ರೀವಾತ್ಸವ್ ಭಾಗಿಯಾಗಿದ್ರು. ರೈತರ ರಸ್ತೆ ತಡೆ, ಪ್ರತಿಭಟನೆ ಹಾಗೂ ಅದಕ್ಕೆ ಭದ್ರತಾ ನಿಯೋಜನೆ ಕುರಿತು ಚರ್ಚಿಸಲಾಯ್ತು.

DHL PROTEST

ಇಷ್ಟೇ ಅಲ್ಲದೇ ರೈತ ಪ್ರತಿಭಟನೆ ಲಾಭ ಗಳಿಸಲು ಪ್ರಯತ್ನಿಸುತ್ತಿರುವ ಉಗ್ರಗಾಮಿ ಗುಂಪುಗಳನ್ನು ಹತ್ತಿಕ್ಕಲು ಮಾಸ್ಟರ್ ಪ್ಲಾನ್ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ನಡುವೆ ನಿನ್ನೆಯೂ ರೈತ ಪ್ರತಿಭಟನೆಗೆ ಪರ ವಿರೋಧ ಟ್ವೀಟ್ ಸರಣಿ ಮುಂದುವರಿದಿದೆ. ರೈತರು ನಮ್ಮ ದೇಶದ ಅವಿಭಾಜ್ಯ ಅಂಗ. ದೇಶದಲ್ಲಿ ಶಾಂತಿಯನ್ನು ತರಲು ನಾವು ಎಲ್ಲರೂ ಒಟ್ಟಾಗಿ ಮುಂದುವರಿಯಲಿದ್ದೇವೆ ಮತ್ತು ಸೌಹಾರ್ದಯುತ ಪರಿಹಾರವು ಕಂಡುಬರಲಿದೆ ಎಂದು ನನಗೆ ಖಾತ್ರಿಯಿದೆ ಎಂದು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಕೇಂದ್ರ ಸರ್ಕಾರದ ಇಂಡಿಯಾ ಟುಗೆದರ್ ಹ್ಯಾಶ್ ಟ್ಯಾಗ್‍ನಲ್ಲಿ ಟ್ವೀಟ್ ಮಾಡಿದ್ರು. ಅಲ್ಲದೇ ಕ್ರಿಕೆಟಿಗ ಇರ್ಫಾನ್ ಪಟಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

KODIHALLI 1 1

ಗಣರಾಜ್ಯೋತ್ಸವದ ದಿನ ಒಂದು ಹಂತದಲ್ಲಿದ್ದ ಪ್ರತಿಭಟನೆ ಈಗ ದಿನ ಕಳೆದಂತೆ ಸಾಕಷ್ಟು ಮಹತ್ವದ ತಿರುವುಗಳನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ರೈತರ ಕಿಚ್ಚು ಮತ್ತಷ್ಟು ಕಾವೇರಲಿದೆ.

TAGGED:Farmers protestnewdelhiPublic TVನವದೆಹಲಿಪಬ್ಲಿಕ್ ಟಿವಿಪ್ರತಿಘಟನೆರೈತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
14 minutes ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
19 minutes ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
22 minutes ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
26 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
34 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?