ಕೊಪ್ಪಳ: ಕೆಆರ್ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
- Advertisement 2
ಕೊಪ್ಪಳದಲ್ಲಿ ಮಾತನಾಡಿದ ಅವರು, ಕೆಆರ್ಎಸ್ ವಿಷಯದಲ್ಲಿ ರಾಜಕೀಯ ನಡೆಯುತ್ತಿದೆ. ಕೆಆರ್ಎಸ್ನಲ್ಲಿ ಬಿರುಕು ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಇಂಜನೀಯರ್ ಹಾಗೂ ಸಚಿವರು ಹೇಳಿದ್ದಾರೆ. ಆದರೂ ಸಹ ಈ ವಿಷಯದಲ್ಲಿ ಇಲ್ಲಿ ರಾಜಕೀಯ ಮಾಡಲಾಗುತ್ತಿದೆ. ಕೆಆರ್ಎಸ್ ವಿಷಯದಲ್ಲಿ ಏನೋ ಆಗಿದೆ ಎಂಬಂತೆ ಬಿಂಬಸಲಾಗುತ್ತಿದೆ. ಯಾರಾದರೂ ಆಗಲಿ ಮಾತಿನ ಮೂಲಕ ರಾಜಕಾರಣ ಮಾಡಬಾರದು. ನಮ್ಮ ಕೆಲಸದ ಮೂಲಕ ರಾಜಕಾರಣ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ
- Advertisement 3
- Advertisement 4
ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಬಾರದು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರ ಬಗ್ಗೆ ಆ ರೀತಿ ಮಾತನಾಡಿದ್ದು ತಪ್ಪು ಎಂದು ಈ ಹಿಂದೆಯೇ ಹೇಳಿದ್ದೇನೆ. ಅಂಬರೀಷ್ ಅವರು ಈಗ ಇಲ್ಲ. ಅವರ ಹೆಸರನ್ನು ಎಳೆದು ತರಬಾರದು ಎಂದಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಕುರಿತು ಆಡಿಯೋ ಪ್ರಕರಣಗಳು ನಡೆಯುತ್ತಿವೆ. ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅಕ್ರಮ ಮರಳದಂಧೆಯಲ್ಲಿ ಭಾಗಿಯಾದವರನ್ನೇ ತನಿಖಾಧಿಕಾರಿಯನ್ನಾಗಿ ಮಾಡಲಾಗಿದೆ ಎಂಬ ಆರೋಪದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾರವಾದ ಮೊಟ್ಟೆ ಚಿಲ್ಲಿ ನೀವೂ ಮಾಡಿ