Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ವಿವಿಧ ಯೋಜನೆಗಳ ಅನುದಾನವನ್ನು ಅಧಿಕಾರಿಗಳು ಎಚ್ಚರಿಕೆಯಿಂದ ವಿನಿಯೋಗಿಸ್ಬೇಕು: ಅನಂತ್‍ಕುಮಾರ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇಂದ್ರದ ವಿವಿಧ ಯೋಜನೆಗಳ ಅನುದಾನವನ್ನು ಅಧಿಕಾರಿಗಳು ಎಚ್ಚರಿಕೆಯಿಂದ ವಿನಿಯೋಗಿಸ್ಬೇಕು: ಅನಂತ್‍ಕುಮಾರ್ ಹೆಗ್ಡೆ

Districts

ಕೇಂದ್ರದ ವಿವಿಧ ಯೋಜನೆಗಳ ಅನುದಾನವನ್ನು ಅಧಿಕಾರಿಗಳು ಎಚ್ಚರಿಕೆಯಿಂದ ವಿನಿಯೋಗಿಸ್ಬೇಕು: ಅನಂತ್‍ಕುಮಾರ್ ಹೆಗ್ಡೆ

Public TV
Last updated: July 3, 2021 6:44 pm
Public TV
Share
3 Min Read
KWR
SHARE

ಕಾರವಾರ: ಜಲ ಜೀವನ ಮಿಷನ್, ನರೇಗಾ, ವಸತಿ, ಆರೋಗ್ಯ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ನೇರವಾಗಿ ನೀಡುತ್ತಿರುವ ವಿಶೇಷ ಅನುದಾನದ ಬಳಕೆ ಬಗ್ಗೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಟ್ಟಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದರು.

ಜಿಲ್ಲಾ ಪಂಚಾಯತ್‍ನ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಂತಹ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕೋಟ್ಯಂತರ ರೂಪಾಯಿ ವಿಶೇಷ ಅನುದಾನ ನೀಡುತ್ತಿದೆ. ಆದರೆ ಜಲ ಜೀವನ ಮಿಷನ್‍ನಡಿ ಜಿಲ್ಲೆಯಾದ್ಯಂತ ಕೈಗೊಂಡಿರುವ ಕಾಮಗಾರಿಯ ಬಗ್ಗೆ ಶಾಸಕರು ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳಿಗೂ ಮಾಹಿತಿಯೇ ಇಲ್ಲ. ಜನಪ್ರತಿನಿಧಿಗಳಿಗೆ ತಿಳಿಸದನೇ ಅಧಿಕಾರಿಗಳು ನೇರವಾಗಿ ತಮಗೆ ತಿಳಿದಂತೆ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದಿರಿ. ಅಧಿಕಾರಿಗಳ ಈ ನಡವಳಿಕೆಯಿಂದ ಮುಂಬರುವ ದಿನಗಳಲ್ಲಿ ಯೋಜನೆ ವಿಫಲವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪದ ಬಗ್ಗೆ ಶಾಸಕಿ ರೂಪಾಲಿ ನಾಯ್ಕ್ ಮಾತನಾಡಿದರು.

ananth kumar hegde

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಹೆಗ್ಡೆ, ಶಾಸಕರು ಹೆಳಿರುವುದು ಸತ್ಯವಾಗಿದೆ. ಮನೆ ಮನೆಗೆ ನೀರನ್ನು ಒದಗಿಸಬೇಕು. ಜನರ ದಾಹವನ್ನು ತಣಿಸಬೇಕು ಎಂಬು ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ ಮಿಷನ್ ಜಾರಿಗೆ ತಂದಿದೆ. ಇಂತಹ ಮಹತ್ವಾಕಾಂಕ್ಷೆ ಯೋಜನೆಯನ್ನು ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆ ತರಬೇಕು. ಆಗ ಯೋಜನೆಯ ಬಗ್ಗೆ ಜನರಿಗೆ ತಿಳಿಯುವುದರ ಜೊತೆಗೆ ಹೆಚ್ಚಿನ ಪ್ರಚಾರವೂ ಸಿಗುತ್ತದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದು, ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತರದೇ ನೇರವಾಗಿ ಅಧಿಕಾರ ಚಲಾಯಿಸಲು ಯಾವುದೇ ಅವಕಾಶವಿಲ್ಲ. ಅಧಿಕಾರಿಗಳು ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು. ಇಂತಹ ಘಟನೆಗೆಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪ್ರಳಯವಾದರೂ ಆ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದು ನಿಜ: ಸಿದ್ದರಾಮಯ್ಯ

ಜನರ ಒಳಿತಿಗಾಗಿ ತಂದಿರುವ ಯೋಜನೆಯ ಬಗ್ಗೆ ಶಾಸಕರು ಸೇರಿದಂತೆ ಸಂಬಂಧಿಸಿದ ಎಲ್ಲ ಜನಪ್ರತಿನಿಧಿಗಳಿಗೆ ತಿಳಿಸಬೇಕು. ನಂತರ ಅವರ ಸಹಭಾಗಿತ್ವದಲ್ಲಿ ಕಾಮಗಾರಿ ಕೈಗೊಂಡು ಜನಪ್ರತಿನಿಧಿಗಳಿಂದ ಉದ್ಘಾಟನೆ ಮಾಡಿಸಬೇಕು. ಜನಪರ ಯೋಜನೆಗಳಿಗೆ ವಿಶೇಷ ಅನುದಾನ ನೀಡುತ್ತಿರುವ ಕೇಂದ್ರ ಸರ್ಕಾರ ಆ ಅನುದಾನದ ಬಳಕೆ ಹೇಗೆಲ್ಲ ಆಗುತ್ತಿದೆ ಎಂಬುವುದನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಇದು ಅಧಿಕಾರಿಗಳ ವರ್ಗದ ಗಮನಕ್ಕಿರಬೇಕು. ಒಂದುವೇಳೆ ಅನುದಾನ ಬಳಕೆಯಲ್ಲಿ ಅಕ್ರಮವೇನಾದರೂ ನಡೆದರೆ ಅದನ್ನು ಸೂಕ್ತ ರೀತಿಯಲ್ಲಿ ತನಿಖೆಗೆ ಒಳಪಡಿಸಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂದೆ ಅಂತವರಿಗೆ ನಿವೃತ್ತಿ ವೇತನವೂ ಸಿಗದಂತ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಧಿಕಾರಿ ವರ್ಗದವರು ತುಂಬಾ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.

b432172a 92a6 4151 80a4 1a594e79ae8e medium

ಜಿಲ್ಲೆಯಲ್ಲಿ ಜೇನು ಕೃಷಿಗೆ ಉತ್ತಮ ಅವಕಾಶಗಳಿದ್ದು, ಜೇನು ಅತೀ ಹೆಚ್ಚು ಗೂಡು ಕಟ್ಟುವಂತ ಮರಗಳನ್ನು ಪಟ್ಟಿ ಮಾಡಿ ವರದಿ ನೀಡುವಂತೆ ತೋಟಗಾರಿಕೆ ಇಲಾಖೆಗೆ ಈ ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಅದರಂತೆ ಇಲಾಖೆ ಅಧಿಕಾರಿಗಳು ಜೇನು ಕೃಷಿಗೆ ಪೂರಕವಾಗುವಂತ ಸುಮಾರು 10 ತಳಿಯ ಮರಗಳ ಪಟ್ಟಿಯನ್ನು ಮಾಡಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಮರಗಳ ಸಸಿಗಳನ್ನು ಬೆಳಸಿ ಅರಣ್ಯ ಪ್ರದೇಶದಲ್ಲಿ ಅವಗಳನ್ನು ನೆಡುವಂತ ಕಾರ್ಯವಾಗಬೇಕು. ಇದರಿಂದ ಪರಿಸರ ವೃದ್ಧಿ ಜೊತೆಗೆ ಜೇನು ಕೃಷಿಕರಿಗೆ ಸಹಕಾರಿಯಾಗಲಿದೆ ಎಂದರು.

ಮುಂಬರುವ 2023-24ರ ಸಮಯಕ್ಕೆ ಜಿಲ್ಲೆಯಲ್ಲಿ ವಿಮಾನ, ಹಡಗು ನಿಲ್ದಾಣ ಸೇರಿದಂತೆ ವಿವಿಧ ಕೈಗಾರಿಕಾ ಉದ್ಯಮಗಳು ಕಾಲಿಡಲಿವೆ. ಹೀಗಾಗಿ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಸ್ಥಳೀಯ ಪ್ರತಿಭೆಗಳಿಗೆ ಮುಂದುವರಿದ ತಂತ್ರಜ್ಞಾನಕ್ಕೆ ಪೂರಕವಾದ ವಿವಿಧ ಕೌಶಲ್ಯಗಳ ಕುರಿತು ತರಬೇತಿ ನೀಡಬೇಕಿದೆ. ಇದರಿಂದ ಜಿಲ್ಲೆಯಲ್ಲಿ ನಿರುದ್ಯೋಗದ ಸಮಸ್ಯೆ ನಿವಾರಣೆ ಸಾಧ್ಯವಿದೆ ಎಂದು ತಿಳಿಸಿದರು.

ananthkumar hegde 3

ಕೃಷಿ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸ್ವಚ್ಛ ಭಾರತ್ ಅಭಿಯಾನ್, ನರೇಗಾ, ಕುಡಿಯುವ ನೀರು, ಅಕ್ಷರದಾಸೋಹ ಸೇರಿದಂತೆ ವಿವಿಧ 21ಕ್ಕೂ ಅಧಿಕ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಸಂಸದರು ಈ ಸಂದರ್ಭದಲ್ಲಿ ನಡೆಸಿದರು.

ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ಬ್ಯಾಗ್ ಬಳಕೆ ನಿಷೇಧ ದಿನಾಚರಣೆ ನಿಮಿತ್ತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹೊರತಂದ ಸ್ವಚ್ಛ ಸಂಕೀರ್ಣ ಕೈಪಿಡಿ, ಕರ್ನಾಟಕ ಗ್ರಾಮೀಣ ಘನ ಮತ್ತು ದ್ರವ ತ್ಯಾಜ್ಯ ಉಪ ವಿಧಿಯ ಪರಿಹಾರ ಹೆಲ್ಪ್‍ಲೈನ್ ನಂಬರ್, ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ‘ಜನಸಂಖ್ಯಾ ಸ್ಥಿರತೆ ನಿಮಿಂದ ಮಾತ್ರ ಸಾಧ್ಯ’ ಎಂಬ ಕರಪತ್ರವನ್ನು ಸಂಸದರು ಬಿಡುಗಡೆ ಮಾಡಿದರು.

ananth kumar hegde

ಸಭೆಯಲ್ಲಿ ಶಾಸಕರಾದ ದಿನಕರ್ ಶೆಟ್ಟಿ, ಸುನಿಲ್ ನಾಯ್ಕ್, ರೂಪಾಲಿ ನಾಯ್ಕ್, ವಿದಾನ ಪರಿಷತ್ ಸದಸ್ಯ ಶಾಂತರಾಮ ಸಿದ್ಧಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್‍ನ ಸಿಇಒ ಪ್ರಿಂಯಾಂಗಾ ಮುಂತಾದವರು ಉಪಸ್ಥಿತರಿದ್ದರು.

TAGGED:ananth kumar hegdeCentral govtkarwarPublic TVಅನಂತ್ ಕುಮಾರ್ ಹೆಗ್ಡೆಕಾರವಾರಕೇಂದ್ರ ಸರ್ಕಾರಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

HD Kumaraswamy 1
Bengaluru City

ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಇದು ಅವರ ಜಾಯಮಾನದಲ್ಲಿ ಬಂದಿದೆ: ಹೆಚ್‌ಡಿಕೆ

Public TV
By Public TV
11 minutes ago
H D Kumaraswamy 4
Bengaluru City

ಯಾರ ನಾಯಕತ್ವ ಬಂದ್ರೆ ಕಮಿಷನ್ ಹೋಗುತ್ತೆ ಅಂತ ಜನ ತೀರ್ಮಾನಿಸಲಿ: ಹೆಚ್‌ಡಿಕೆ

Public TV
By Public TV
50 minutes ago
Chandru Lamani
Bengaluru City

ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು‌ ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

Public TV
By Public TV
1 hour ago
Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
2 hours ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
2 hours ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?