– ವಿವಿಧ ಮೀನುಗಾರಿಕಾ ಕಾಮಗಾರಿಗೆ ಅನುಮೋದನೆಗೆ ಮನವಿ
ಮಂಗಳೂರು: ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಮಂಗಳೂರಿನ ಬೈಕಂಪಾಡಿ, ಉಡುಪಿ ಜಿಲ್ಲೆಯ ಗಂಗೊಳ್ಳಿ ಹಾಗೂ ಕಾರವಾರದ ಮಾವಾಳಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು. ರಾಜ್ಯ ಕರಾವಳಿಯ 8 ಮೀನುಗಾರಿಕಾ ಹಾರ್ಬರ್ ಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕಾ ಇಳಿದುದಾಣಗಳ ಉನ್ನತೀಕರಣ ಸೇರಿದಂತೆ, ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವಂತೆ ಸೋಮರ್ ಅವರಿಗೆ ಸಚಿವರು ಮನವಿ ಮಾಡಿದರು.
ಯೋಜನಾ ವರದಿಗಳನ್ನು ಪರಿಶೀಲಿಸಿದ ಸಚಿವರು, ಧನಾತ್ಮಕವಾಗಿ ಸ್ಪಂಧಿಸಿದ್ದು, ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನ ಮಾಡುವಂತೆ ಹೇಳಿದ್ದಾರೆ. ಅಲ್ಲದೇ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಆರ್ ಕೆವಿವೈ ಮುಖಾಂತರ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ರಾಮಾಚಾರಿಯವರು ಉಪಸ್ಥಿತರಿದ್ದರು.