ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರುವ ಸಾಧ್ಯತೆ ಹೆಚ್ಚಿದೆ.ಆರಂಭಿಕ ಎಣಿಕೆಗಳಲ್ಲಿ ಎಲ್ಡಿಎಫ್ ಮೈತ್ರಿಕೂಟ ಮುನ್ನಡೆಯಲ್ಲಿದೆ.
ಎಲ್ಡಿಎಫ್ ಮೈತ್ರಿಕೂಟ 78 ರಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
- Advertisement 2
- Advertisement 3
ಆರಂಭದಲ್ಲಿ ಬಿಜೆಪಿ ಕೋಯಿಕ್ಕೋಡ್ ದಕ್ಷಿಣ ಮತ್ತು ಕಾಸರಗೋಡಿನಲ್ಲಿ ಮುನ್ನಡೆ ಸಾಧಿಸಿತ್ತು. ಸದ್ಯ ಬಿಜೆಪಿಯಿಂದ ಸ್ಪರ್ಧಿಸಿರುವ ಮೆಟ್ರೋ ಮ್ಯಾನ್ ಶ್ರೀಧರನ್ ಅವರು ಪಾಲಕ್ಕಾಡ್ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ತ್ರಿಶ್ಯೂರಿನಲ್ಲಿ ಸುರೇಶ್ ಗೋಪಿ ಮುನ್ನಡೆಯಲ್ಲಿದ್ದಾರೆ.
- Advertisement 4
ನೇಮಂನಲ್ಲಿ ಕುಮ್ಮನಂ ರಾಜಶೇಖರ್ ಮುನ್ನಡೆಯಲ್ಲಿದ್ದಾರೆ. 2016ರ ಚುನಾವಣೆಯಲ್ಲಿ ಮೊದಲ ಬಾರಿಗೆ ಇಲ್ಲಿ ಕಮಲ ಅರಳಿತ್ತು. ಮಾಜಿ ಕೇಂದ್ರ ಸಚಿವ ಒ ರಾಜಗೋಪಾಲ್ ಇಲ್ಲಿ ಗೆಲುವು ಸಾಧಿಸಿದ್ದರು.