ಕೇರಳ ಪ್ರಯಾಣಿಕರ ಸಂಖ್ಯೆ ಇಳಿಮುಖ- KSRTC ಬಸ್ ಸಂಚಾರ ಸ್ಥಗಿತ

Public TV
1 Min Read
cng ksrtc bustop 3

ಚಾಮರಾಜನಗರ: ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಜಿಲ್ಲೆಯ ಗಡಿ ಮೂಲಕ ಎರಡೂ ರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖಗೊಂಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ಕೆಎಸ್‍ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

cng ksrtc bustop 1

ನಿತ್ಯ ಗುಂಡ್ಲುಪೇಟೆಯಿಂದ ಕೇರಳದ ಸುಲ್ತಾನ್ ಬತೇರಿ, ಕಲ್ಪೆಟ್ಟ, ಕ್ಯಾಲಿಕಟ್, ತ್ರಿಶೂರು ಮೊದಲಾದ ಕಡೆ ಕೆಎಸ್‍ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಪ್ರಯಾಣಿಕರೇ ಬಾರದ ಕಾರಣ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್‍ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಕೇರಳದ ಬಸ್ ಗಳು ಸಹ ಕರ್ನಾಟಕಕ್ಕೆ ಸಂಚಾರ ನಿಲ್ಲಿಸಿವೆ. ಇದನ್ನೂ ಓದಿ: ಕೊರೊನಾ ಪ್ರಕರಣಗಳು ಹೆಚ್ಚಳ, ವೀಕೆಂಡ್ ಲಾಕ್‍ಡೌನ್ ಸೂಕ್ತ: ಕೆ.ಜಿ.ಬೋಪಯ್ಯ

cng ksrtc bustop 2

ಕೇರಳದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ, ಇಲ್ಲವೇ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಕಡ್ಡಾಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *