Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

Bengaluru City

ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

Public TV
Last updated: June 9, 2021 2:26 pm
Public TV
Share
2 Min Read
jagadesh shettar
SHARE

– ಮೂರನೇ ಅಲೆಗೆ ಸಿದ್ಧಗೊಳ್ಳಲು ಅಧಿಕಾರಿಗಳಿಗೆ ಸೂಚನೆ
– ಆಸ್ಪತ್ರೆಗಳು ಆಮ್ಲಜನಕದ ಇಂಡೆಂಟ್ ನೀಡಲು ನೂತನ ತಂತ್ರಜ್ಞಾನ

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಆಫೀಸರ್ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

JAGADESH SHETTAR 3 medium

ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ ಜಿಲ್ಲೆಗಳಲ್ಲಿ ಬಫರ್ ಸ್ಟಾಕ್ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ: ರಾಜಾಹುಲಿ ಮನತುಂಬಿದ ನಗುವಿನ ಹಿಂದೆ ಅವರು..!

JAGADESH SHETTAR 4 medium

ಎನ್‍ಐಸಿ ಮೂಲಕ ಒಂದು ತಂತ್ರಜ್ಞಾನವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇದು ಇನ್ನು 3 ದಿನಗಳಲ್ಲಿ ಸಿದ್ಧವಾಗಲಿದ್ದು ಅದನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್ ಅಧಿಕಾರಿಗಳು ಆಸ್ಪತ್ರೆಗೆ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದರು. ಇದನ್ನೂ ಓದಿ: ಗುರುವಾರದ ನಂತರ ಅನ್‍ಲಾಕ್ ಆಗುತ್ತಾ? ಮೊದಲ ಹಂತದಲ್ಲಿ ಯಾವುದಕ್ಕೆಲ್ಲ ವಿನಾಯ್ತಿ?

JAGADESH SHETTAR 2 medium

3ನೇ ಕೋವಿಡ್ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ಧವಾಗಿರಬೇಕಾಗಿರುವುದು ಬಹಳ ಅತ್ಯವಶ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಸಂಧರ್ಭದಲ್ಲಿ ಅಭಿನಂದಿಸಿದರು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಮೌನಿಶ್ ಮೌದ್ಗಿಲ್, ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:CoronaCoronavirusCovid 19governmenthospitalJagadish Shettarkarnatakaಆಮ್ಲಜನಕಆಸ್ಪತ್ರೆಕರ್ನಾಟಕಕೇಂದ್ರ ಸರ್ಕಾರಕೊರೊನಾಕೊರೊನಾವೈರಸ್ಕೋವಿಡ್ 19ಜಗದೀಶ್ ಶೆಟ್ಟರ್ಸರ್ಕಾರ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
4 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
17 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
47 minutes ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
1 hour ago
Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?