ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ- ಲಾಕ್‍ಡೌನ್ ಎಫೆಕ್ಟ್‌ಗೆ ಸಿಕ್ಕು ನಲುಗಿದ ಶುಂಠಿ, ಕಲ್ಲಂಗಡಿ

Public TV
1 Min Read
Bidar crops

ಬೀದರ್: ಕೊರೊನಾ ಭಯದಲ್ಲಿ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎಲ್ಲ ವ್ಯಾಪಾರ, ವಹಿವಾಟು ಸೇರಿದಂತೆ ಜನಜೀವನ ಅಸ್ಥವ್ಯಸ್ಥವಾಗಿದೆ. ಹೀಗಿರುವಾಗ ಶುಂಠಿ, ಕಲ್ಲಂಗಡಿ ಬೆಳೆದ ರೈತರು ಕಂಗಾಲಾಗಿದ್ದಾರೆ.

Bidar crops2 medium

ರೈತರು ಸಾಲ ಮಾಡಿ ಕಷ್ಟಪಟ್ಟು ಬೆಳೆದ ವಿವಿಧ ರೀತಿಯ ಬೆಳೆಗಳು ಮಾರಾಟ ಮಾಡಲಾಗದೆ ಮತ್ತಷ್ಟು ಸಾಲದ ಸುಳಿಯಲ್ಲಿ ರೈತರು ಸಿಲುಕುವಂತಾಗಿದೆ. ಬೀದರ್ ತಾಲೂಕಿನ ಔರಾದ್ ಎಸ್ ಗ್ರಾಮದ ರೈತ ರಂಗಾರೆಡ್ಡಿ ತಂದೆ ವಿಠಲ್‍ರೆಡ್ಡಿ 2 ಎಕರೆ 17 ಗುಂಟೆಯಲ್ಲಿ 1 ಲಕ್ಷ 40ಸಾವಿರ ಖರ್ಚುಮಾಡಿ ಕಲ್ಲಂಗಡಿ, 2 ಎಕರೆ 30 ಗುಂಟೆಯಲ್ಲಿ 3 ಲಕ್ಷ ಖರ್ಚುಮಾಡಿ ಶುಂಠಿ ಬೆಳೆದು ಉತ್ತಮ ಲಾಭಗಳಿಸಬೇಕು ಎಂದರೆ ಲಾಕ್‍ಡೌನ್ ಎಫೆಕ್ಟ್ ಹಿನ್ನಲೆಯಲ್ಲಿ ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುತ್ತಾ? ಅಲರ್ಜಿ ಹೊಂದಿರುವವರು ಲಸಿಕೆ ಪಡೆಯಬಹುದೇ? – ಅನುಮಾನಗಳಿಗೆ ಇಲ್ಲಿದೆ ಉತ್ತರ

Bidar crops8 medium

ರೈತ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಸ್ಥಿತಿಗೆ ಕೊರೊನಾ ರೂಪದಲ್ಲಿ ಬಂದ ಮಹಾಮಾರಿ ಅಡ್ಡಿಯಾಗಿದೆ. ತಮ್ಮ ಜಮೀನಿನಲ್ಲಿ ಕಲ್ಲಂಗಡಿ ಮತ್ತು ಶುಂಠಿ ಬೆಳೆದ ರೈತ ಎರಡು ಮೂರು ತಿಂಗಳ ಕಾಲ ನೀರುಣಿಸಿ ಪೋಷಣೆ ಮಾಡಿದ್ದು, ಈಗ ಕೊರೊನಾ ಮಹಾಮಾರಿ ದುಡಿದು ತಿನ್ನುವ ಅನ್ನದಾತನ ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಳ್ಳುವಂತೆ ಮಾಡಿದೆ. ಇದನ್ನೂ ಓದಿ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

Bidar crops9 medium

ರೈತರು ಬೆಳೆದ ಬೆಳೆಗಳು ಮಾರಾಟವಾಗದೆ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಹಿಗಾಗೀ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತರು ಆಗ್ರಹ ಮಾಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *