Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಸಹೋದರ ಧೋನಿ ದಯವಿಟ್ಟು ನನ್ನನ್ನು ಕ್ಷಮಿಸು- ಕೈಫ್

Public TV
Last updated: May 25, 2020 10:11 pm
Public TV
Share
2 Min Read
Mohammad Kaif Doni
SHARE

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಬಟರ್ ಚಿಕನ್ ಮತ್ತು ಬಿರಿಯಾನಿ ಪ್ರಿಯರು ಎನ್ನುವುದು ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇತ್ತೀಚೆಗೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅವರು ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡಲು ಸಾಧ್ಯವಾಗದ ವಿಚಾರವಾಗಿ ಮಾತನಾಡಿ ಧೋನಿ-ಬಿರಿಯಾನಿ ಕಥೆ ಹೇಳಿದ್ದಾರೆ.

2004ರಲ್ಲಿ ಧೋನಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದಾಗ ಕೈಫ್ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾಗಿದ್ದರು. ಆದಾಗ್ಯೂ ಕೈಫ್ ಅವರು ನಿಧಾನವಾಗಿ ಟೀಂ ಇಂಡಿಯಾದಿಂದ ಹೊರಗುಳಿದರು. ಇತ್ತ ಧೋನಿ 2007ರಲ್ಲಿ ಟಿ20 ತಂಡದ ನಾಯಕತ್ವ ವಹಿಸಿಕೊಂಡರು, ಬಳಿಕ 2008ರಲ್ಲಿ ಎಲ್ಲಾ ಮೂರು ಮಾದರಿ ಟೆಸ್ಟ್, ಏಕದಿನ, ಟಿ20 ನಾಯಕನಾಗಿ ಅನೇಕ ಸಾಧನೆಗೆ ಸಾಕ್ಷಿಯಾದರು.

mohammad kaif

2006ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಕೈಫ್ ಉತ್ತರ ಪ್ರದೇಶ ತಂಡ ಗೆಲುವಿಗೆ ಕಾರಣರಾಗಿದ್ದರು. ಅದರಲ್ಲೂ ಫೈನಲ್ ಪಂದ್ಯದಲ್ಲಿ ಶತಕ ಗಳಿಸಿ ಟೀಂ ಇಂಡಿಯಾಗೆ ಕಮ್‍ಬ್ಯಾಕ್ ಮಾಡುವ ನಿರೀಕ್ಷೆ ಮೂಡಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಈ ವಿಚಾರವನ್ನು ತಮಾಷೆಯಾಗಿ ಹೇಳಿದ ಕೈಫ್, ನಮ್ಮ ಮನೆಯಲ್ಲಿ ಧೋನಿಗೆ ಸರಿಯಾಗಿ ಬಿರಿಯಾನಿ ಬಡಿಸದೇ ಇರುವುದು ಟೀಂ ಇಂಡಿಯಾ ಕಮ್‍ಬ್ಯಾಕ್‍ಗೆ ಅಡ್ಡಿಯಾಯಿತು ಎಂದು ಹೇಳಿದ್ದಾರೆ.

ಕೈಫ್ 2006ರಲ್ಲಿ ಇಡೀ ಭಾರತದ ಕ್ರಿಕೆಟ್ ತಂಡವನ್ನು ತಮ್ಮ ನೋಯ್ಡಾ ಮನೆಗೆ ರಂಜಾನ್ ಹಬ್ಬಕ್ಕಾಗಿ ಆಹ್ವಾನಿಸಿದ್ದರು. ಈ ವೇಳೆ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಅವರಂತಹ ಹಿರಿಯ ಆಟಗಾರರು ಕೂಡ ಹಾಜರಾಗಿದ್ದರು. ಅವರಲ್ಲೆ ಒಂದು ಕೋಣೆಯಲ್ಲಿ ಕುಳಿತಿದ್ದರೆ ಎಂ.ಎಸ್.ಧೋನಿ, ಸುರೇಶ್ ರೈನಾ ಮತ್ತು ಇರ್ಫಾನ್ ಪಠಾಣ್ ಸೇರಿದಂತೆ ಕೆಲ ಆಟಗಾರರು ಮತ್ತೊಂದು ಕೋಣೆಯಲ್ಲಿ ಕುಳಿತಿದ್ದರು. ಆಗ ಕೈಫ್ ಹಿರಿಯ ಆಟಗಾರರ ಬಗ್ಗೆ ಹೆಚ್ಚು ಕಾಳಜಿ ತೋರಿದ್ದರು.

RAINAS BRILLIANT MESSAGE

ಈ ವಿಚಾರವಾಗಿ ಮಾತನಾಡಿರುವ ಕೈಫ್, “2006ರಲ್ಲಿ ನಾನು ರಣಜಿ ಟ್ರೋಫಿ ಟೂರ್ನಿಯ ಫೈನಲ್‍ನಲ್ಲಿ ಶತಕ ಬಾರಿಸಿ ಉತ್ತರ ಪ್ರದೇಶದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದೆ. ಇದರಿಂದಾಗಿ ಎಂಎಸ್ ಧೋನಿ ಬಯಸಿದರೆ ನಾನು ಟೀಂ ಇಂಡಿಯಾಗೆ ಪುನರಾಗಮನ ಮಾಡಬಹುದೆಂದು ಭಾವಿಸಿದ್ದೆ” ಎಂದು ಸಂದರ್ಶನದಲ್ಲಿ ಬಹಿರಂಗ ಪಡಿಸಿದ್ದಾರೆ.

“ಎಂ.ಎಸ್.ಧೋನಿ, ಸುರೇಶ್ ರೈನಾ, ಇರ್ಫಾನ್ ಪಠಾಣ್ ಸೇರಿದಂತೆ ಕೆಲ ಆಟಗಾರರು ಒಂದು ಕೋಣೆಯಲ್ಲಿ ಕುಳಿತಿದ್ದರು. ಹಿರಿಯರಾದ ಸಚಿನ್, ಗಂಗೂಲಿ ಮತ್ತೊಂದು ಕೋಣೆಯಲ್ಲಿ ಕುಳಿತಿದ್ದರು. ಸಚಿನ್ ತೆಂಡೂಲ್ಕರ್ ಅವರಂತಹ ದಿಗ್ಗಜರ ಜೊತೆಗೆ ಕುಳಿತು ಉಪಚರಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಹೆಚ್ಚಿನ ಸಮಯವನ್ನು ಹಿರಿಯರೊಂದಿಗೆ ಕಳೆದುಬಿಟ್ಟೆ. ಆ ಸಮಯದಲ್ಲಿ ಬಹುಶಃ ಧೋನಿ ಮತ್ತು ಇತರ ಕಿರಿಯ ಕ್ರಿಕೆಟಿಗರನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಸಹೋದರ ಧೋನಿ ದಯವಿಟ್ಟು ನನ್ನನ್ನು ಕ್ಷಮಿಸು” ಎಂದು ಕೈಫ್ ಕೇಳಿಕೊಂಡಿದ್ದಾರೆ.

MS Dhoni A

ಕೈಫ್ 2006ರ ನವೆಂಬರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅವರು ಭಾರತ ಪರ 13 ಟೆಸ್ಟ್ ಮತ್ತು 125 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಎರಡು ಮಾದರಿಯಲ್ಲಿ ಕ್ರಮವಾಗಿ 624 ರನ್ ಮತ್ತು 2,753 ರನ್ ಗಳಿಸಿದ್ದಾರೆ. ಕೈಫ್ ತಮ್ಮ ಅದ್ಬುತ ಫೀಲ್ಡಿಂಗ್‍ಗೆ ಹೆಸರಾಗಿದ್ದರು. ಅವರು ಸಾರ್ವಕಾಲಿಕ ಅತ್ಯುತ್ತಮ ಭಾರತೀಯ ಫೀಲ್ಡರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ.

TAGGED:BiryaniComebackMohammad Kaifms dhoniPublic TVTeam indiaಎಂ ಎಸ್ ಧೋನಿಟೀಂ ಇಂಡಿಯಾಪಬ್ಲಿಕ್ ಟಿವಿಬಿರಿಯಾನಿಮೊಹಮ್ಮದ್ ಕೈಫ್
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

03 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-3

Public TV
By Public TV
4 hours ago
02 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-2

Public TV
By Public TV
4 hours ago
01 8
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-1

Public TV
By Public TV
4 hours ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
4 hours ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
4 hours ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?