Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈ ತಪ್ಪಿದ ಪ್ರಧಾನಿ ಹುದ್ದೆಯಿಂದ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಆಗಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೈ ತಪ್ಪಿದ ಪ್ರಧಾನಿ ಹುದ್ದೆಯಿಂದ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಆಗಿದ್ದು ಹೇಗೆ?

Latest

ಕೈ ತಪ್ಪಿದ ಪ್ರಧಾನಿ ಹುದ್ದೆಯಿಂದ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಆಗಿದ್ದು ಹೇಗೆ?

Public TV
Last updated: August 31, 2020 9:55 pm
Public TV
Share
3 Min Read
pranab
SHARE

ಅದು ಅಕ್ಟೋಬರ್ 31, 1984. ಕೋಲ್ಕತ್ತಾದಿಂದ ದೆಹಲಿಗೆ ಇಂಡಿಯನ್ ಏರ್ ಲೈನ್ಸ್ ಬೋಯಿಂಗ್ 737 ವಿಮಾನ ಹೊರಟಿತು. ರಾಜೀವ್ ಗಾಂಧಿ, ಪ್ರಣಬ್ ಮುಖರ್ಜಿ, ಶೀಲಾ ದೀಕ್ಷಿತ್, ಉಮಾಶಂಕರ್ ದೀಕ್ಷಿತ್, ಬಲರಾಮ್ ಜಖರ್, ಲೋಕಸಭಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಎ.ಬಿ ಅಗ್ನಿ ಖಾನ್ ಚೌಧರಿ ವಿಮಾನದಲ್ಲಿದ್ದರು‌.

ಅರ್ಧ ಘಂಟೆಯ ಹೊತ್ತಿಗೆ ರಾಜೀವ್ ಗಾಂಧಿ ಇಂದಿರಾ ಗಾಂಧಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಆರಂಭಿಕ ಆಘಾತದ ಸ್ವಲ್ಪ ಸಮಯದ ನಂತರ, ಮುಂದೆ ಏನು ಮಾಡಬೇಕೆಂಬುದರ ಬಗ್ಗೆ ಚರ್ಚೆ ನಡೆಯಿತು.

Pranab Mukherjee 1

ಪ್ರಣಬ್ ಮುಖರ್ಜಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸುವಾಗ, ನೆಹರೂ ಕಾಲದಿಂದಲೂ, ಇಂತಹ ಪರಿಸ್ಥಿತಿಯಲ್ಲಿ ಮಧ್ಯಂತರ ಪ್ರಧಾನ ಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಂಪ್ರದಾಯವಿದೆ ಎಂದು ಹೇಳಿದರು. ನೆಹರೂ ಅವರ ನಿಧನದ ನಂತರ, ಸಂಪುಟದಲ್ಲಿ ಅತ್ಯಂತ ಹಿರಿಯ ಮಂತ್ರಿ ಗುಲ್ಜಾರಿ ಲಾಲ್ ನಂದಾ ಅವರನ್ನು ಹಂಗಾಮಿ ಪ್ರಧಾನಿಯಾಗಿ ಆಯ್ಕೆ ಮಾಡಲಾಯಿತು ಎಂದು ವಿವರಿಸಿದರು.

ಖ್ಯಾತ ಪತ್ರಕರ್ತ ರಶೀದ್ ಕಿಡ್ವಾಯ್ ಅವರು ತಮ್ಮ ಬರೆದ ’24 ಅಕ್ಬರ್ ರಸ್ತೆ ‘ಎಂಬ ಪುಸ್ತಕದಲ್ಲಿ ಉಲ್ಲೇಖಿಸಿದಂತೆ, ಪ್ರಣಬ್ ಮುಖರ್ಜಿ ವಿಮಾನದ ಶೌಚಾಲಯದಲ್ಲಿ ಅಳಲು ಪ್ರಾರಂಭಿಸಿದರು. ಇಂದಿರಾ ಗಾಂಧಿಯವರ ಸಾವಿನಿಂದ ದುಃಖಿತರಾಗಿದ್ದರು. ಅವರ ಕಣ್ಣುಗಳು ಕೆಂಪಾಗಿದ್ದವು, ಆದ್ದರಿಂದ ಅವರು ವಿಮಾನದ ಹಿಂಭಾಗದಲ್ಲಿ ಕುಳಿತರು. ಇದಕ್ಕೂ ಮುನ್ನ ತಮ್ಮ ಅಭಿಪ್ರಾಯದಲ್ಲಿ ಪ್ರಣಬ್ ತಮ್ಮ ಹಿರಿತನವನ್ನು ರಾಜೀವ್‌ಗಾಂಧಿ ಅವರಿಗೆ ಒತ್ತಿ ಹೇಳಿದರು. ಈ ಮೂಲಕ ಪ್ರಧಾನಿಯಾಗುವ ಇಂಗಿತ ವ್ಯಕ್ತಪಡಿಸಿದರು.

B R Balakrishnan President Pranab Mukherjee

ಆದರೆ, ಇಂದಿರಾ ಗಾಂಧಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಪಿ.ಸಿ ಅಲೆಕ್ಸಾಂಡರ್ ತಮ್ಮ ಆತ್ಮಚರಿತ್ರೆಯಲ್ಲಿ ‘ಥ್ರೂ ದಿ ಕಾರಿಡಾರ್ಸ್ ಆಫ್ ಪವರ್: ಆನ್ ಇನ್ಸೈಡರ್ಸ್ ಸ್ಟೋರಿ’ ಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದ್ದು ರಾಜೀವ್ ಗಾಂಧಿಯನ್ನು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಂತೆ ಪ್ರಸ್ತಾಪವಾದ ಕೂಡಲೇ ಅವರನ್ನು ಬಲವಾಗಿ ಬೆಂಬಲಿಸಿದ ಮೊದಲ ವ್ಯಕ್ತಿ ಪ್ರಣಬ್ ಮುಖರ್ಜಿ.

ರಾಜೀವ್ ಗಾಂಧಿ ಚುನಾವಣೆಯಲ್ಲಿ ಜಯಗಳಿಸಿದ ನಂತರ ತಮ್ಮ ಸಂಪುಟವನ್ನು ರಚಿಸಿದಾಗ, ಪ್ರಣಬ್ ಮುಖರ್ಜಿ ಅವರಿಗೆ ಅಥವಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಯಾವುದೇ ಸ್ಥಾನವನ್ನು ನೀಡಲಾಗಲಿಲ್ಲ. ಅವರು ಪ್ರತ್ಯೇಕ ಪಕ್ಷವಾದ ರಾಷ್ಟ್ರೀಯ ಸಮಾಜವಾದಿ ಕಾಂಗ್ರೆಸ್ ರಚಿಸಲು 1986 ರಲ್ಲಿ ಪಕ್ಷದಿಂದ ಹೊರಹೋಗಬೇಕಾಯಿತು. ಕಾಲಾಂತರದಲ್ಲಿ ಇದು ಕಾಂಗ್ರೆಸ್‌ನೊಂದಿಗೆ ವೀಲಿನವಾಯಿತು.

atal bihari vajpayee with pranab mukherjee 023

ಮೊದಲ ಬಾರಿ ರಾಜೀವ್ ಗಾಂಧಿ ಅವರಿಂದ ಪ್ರಧಾನಿ ಹುದ್ದೆಯಿಂದ ವಂಚಿತಗೊಂಡಿದ್ದ ಪ್ರಣಬ್ ಮುಖರ್ಜಿ ಎರಡನೇ ಬಾರಿ ಸೋನಿಯಗಾಂಧಿ ಅವರಿಂದ ವಂಚಿತರಾದರು. ಎರಡನೇ ಬಾರಿ ಬಹುತೇಕ ಪ್ರಣಬ್ ಮುಖರ್ಜಿ ಪ್ರಧಾನಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು ಆದರೆ, ಮನಮೋಹನ್ ಸಿಂಗ್ ಅವರನ್ನು ಸೋನಿಯಾ ಆಯ್ಕೆ‌ ಮಾಡಿದ್ದರು. ಇಂದಿರಾಗಾಂಧಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಪ್ರಣಬ್ ಮುಖರ್ಜಿ, ಡಾ.ಮನಮೋಹನ್ ಸಿಂಗ್ ಅವರನ್ನು ಆರ್‌ಬಿಐ ಗವರ್ನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದರು.

ಪ್ರಣಬ್ ಮುಖರ್ಜಿ ತಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡಿದ್ದರು. ರಾಜಕೀಯ ಜೀವನದ ಬಹುದೊಡ್ಡ ಭಾಗವನ್ನು ರಾಜ್ಯ ಸಭೆಯಲ್ಲಿ ಕಳೆದಿದ್ದೇ‌ನೆ, ಹಿಂದಿ ಮಾತನಾಡುವಾಗ ಉಂಟಾಗುತ್ತಿದ್ದ ತೊಡಕುಗಳು ತಮ್ಮ ತವರು ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿಲ್ಲ ಎನ್ನುವ ಬಗ್ಗೆ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು‌. ಪ್ರಧಾನಿ ಹುದ್ದೆಗೆ ಇವರು ಹೆಸರು ಕೇಳಿ ಬಂದು ಮತ್ತೊಬ್ಬರು ಪ್ರಧಾನಿಯಾದಗ, ‘ ಪ್ರಧಾನಿಗಳು ಬಂದು ಹೋಗುತ್ತಾರೆ ನಾನು ಯಾವಗಲೀ ಪ್ರಧಾನಿ ಎಂದು ಎಂದು ಆಪ್ತರ ಮುಂದೆ ತಮ್ಮನ್ನು ತಾವು ಗೇಲಿ‌ ಮಾಡಿಕೊಂಡಿದರಂತೆ. ಸುಮಾರು 50 ವರ್ಷಗಳ ರಾಜಕೀಯ ಜೀವನದಲ್ಲಿ, ಪ್ರಧಾನ ಮಂತ್ರಿಯನ್ನು ಹೊರತುಪಡಿಸಿ ಪ್ರತಿಯೊಂದು ಪ್ರಮುಖ ಹುದ್ದೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ‌.

pranab mukherjee 1517363629

ರಾಷ್ಟ್ರಪತಿಯಾಗುವುದು ಸೋನಿಯಾ ಗಾಂಧಿಗೆ ಇಷ್ಟವಿರಲಿಲ್ಲ
2012 ರಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಬ್ ಮುಖರ್ಜಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಮಾಡಿತು. ಆದಾಗ್ಯೂ, ರಾಜಕೀಯ ವ್ಯಾಖ್ಯಾನಕಾರರು ಹೇಳುವಂತೆ ಆರಂಭದಲ್ಲಿ ಸೋನಿಯಾ ಗಾಂಧಿ ರಾಷ್ಟ್ರಪತಿ ಹುದ್ದೆಗೆ ಉಪಾಧ್ಯಕ್ಷರಾಗಿದ್ದ ಹಮೀದ್ ಅನ್ಸಾರಿ ಆಯ್ಕೆ ಮಾಡುವ ಇರಾದೆಯಲ್ಲಿದ್ದರು.

ಪ್ರಣಬ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಪರಿಗಣಿಸದಿರಲು ಎರಡು ಕಾರಣಗಳಿವೆ. ಒಂದು, ಸರ್ಕಾರದಲ್ಲಿ ಪ್ರಣಬ್ ಮುಖರ್ಜಿ ಪಾತ್ರ ಅನಿವಾರ್ಯವಾಗಿತ್ತು. ಮತ್ತೊಂದು ಕಾರಣ ಸೋನಿಯಾ ಗಾಂಧಿಗೆ ಅವರ ನಿಷ್ಠೆಯ ಬಗ್ಗೆ ಇನ್ನೂ ನಂಬಿಕೆಯಿಲ್ಲ ಇರಲಿಲ್ಲ ಎನ್ನಲಾಗಿದೆ.

pranab sonia gandhi

ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದಂತೆ “ರಾಷ್ಟ್ರಪತಿ ಹುದ್ದೆಗೆ ನೀವು ಹೆಚ್ಚು ಅರ್ಹ ವ್ಯಕ್ತಿ ಎಂದು ಸೋನಿಯಾ ಹೇಳಿದ್ದರು. ಆದರೆ ಸರ್ಕಾರವನ್ನು ನಡೆಸುವಲ್ಲಿ ನಿಮಗೂ ಪ್ರಮುಖ ಪಾತ್ರವಿದೆ ಎಂಬುದನ್ನು ನೀವು ಮರೆಯಬಾರದು. ನಿಮ್ಮ ಯಾವುದೇ ಆಯ್ಕೆಗಳನ್ನು ನೀವು ಸೂಚಿಸಬಹುದೇ” ಎಂದು ಸೋನಿಯಗಾಂಧಿ ಕೇಳಿದರಂತೆ. ಇದನ್ನು ಕೇಳಿದ ಪ್ರಣಬ್ ಮುಖರ್ಜಿ ಮನಮೋಹನ್ ಸಿಂಗ್ ಅವರನ್ನು ರಾಷ್ಟ್ರಪತಿಯನ್ನಾಗಿ ತಮ್ಮನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಬಹುದು ಎಂದು ಯೋಚಿಸಿದರಂತೆ. ಆದರೆ ಮರುದಿನ ಮನಮೋಹನ್‌ ಸಿಂಗ್‌, ಕಾಂಗ್ರೆಸ್ ಕೋರ್ ಸಮಿತಿ ಸಭೆ ನಿಮ್ಮನ್ನು ಪಕ್ಷದಿಂದ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಪ್ರಣಬ್‌ ಅವರಿಗೆ ತಿಳಿಸಿದರಂತೆ.

TAGGED:pranab mukherjeepresidentprime ministerSonia Gandhiಕಾಂಗ್ರೆಸ್ಪ್ರಣಬ್ ಮುಖರ್ಜಿಪ್ರಧಾನ ಮಂತ್ರಿರಾಷ್ಟ್ರಪತಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
3 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
43 minutes ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
1 hour ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
1 hour ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?