ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಇಂದು ರಸ್ತೆಗಿಳಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಸ್ಕ್ ಹಾಕದವರಿಗೆ ದಂಡ ಹಾಕಿದರು.
ಮಡಿಕೇರಿ ನಗರದ ಪೋಸ್ಟ್ ಆಫೀಸ್ ಬಳಿಯಿಂದ ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿಗಳು, ಕಾಲೇಜು ರಸ್ತೆ, ಮಾರ್ಕೆಟ್ ಸುತ್ತಮುತ್ತ ಕಾಲ್ನಡಿಗೆ ಮೂಲಕ ಓಡಾಡಿ ಜನರಿಗೆ ದಂಡ ಹಾಕಿದ್ದಾರೆ. ಸುಮಾರು ಒಂದು ಗಂಟೆಯಲ್ಲಿ ಎಪ್ಪತ್ತು ಜನರಿಗೆ ದಂಡ ಹಾಕಿದ್ದಾರೆ. ನಗರಸಭೆಯಿಂದಲೂ ಮಡಿಕೇರಿ ನಗರದ ಕೊರೊನಾ ನಿಯಮ ಪಾಲಿಸದ ಹೋಟೆಲ್ ಮಾಲೀಕರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಮಡಿಕೇರಿ ನಗರಕ್ಕೆ ಪ್ರವಾಸಿಗರು, ಸಾರ್ವಜನಿಕರು ಹೋಟೆಲ್ ಗಳಿಗೆ ಬರುವುದು ಸರ್ವೇಸಾಮಾನ್ಯವಾಗಿದೆ. ಅದರೆ ಬರುವ ಗ್ರಾಹಕರು ಕೋವಿಡ್ ನಿಯಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ವಿರುದ್ಧ ಶಿಸ್ತು ಕ್ರಮವನ್ನು ನಗರಸಭೆ ಕೈಗೊಂಡಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೆ ಹೊಟೇಲ್, ಅಂಗಡಿ ವ್ಯಾಪಾರ ಪರವಾನಿಗೆ ರದ್ದು ಮಾಡುವಂತೆ ಶಿಸ್ತು ಕ್ರಮ ಕೈಗೊಳ್ಳಲಾಗುವಂತೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ಗ್ರಾಹಕರಿಗೆ ಮಾಸ್ಕ್ ಧರಿಸಿ ಅಂಗಡಿ, ಹೋಟೆಲ್ ರೆಸ್ಟೋರೆಂಟ್ ಗಳಿಗೆ ಬರಬೇಕು ಎಂದು ಅಂಗಡಿಗಳ ಮುಂದೆ ಬೋರ್ಡ್ ಹಾಕುವುದು ಕಡ್ಡಾಯ. ಅಂಗಡಿ ಮುಂದೆ ಸ್ಯಾನಿಟೈಸರ್ ಇಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ವ್ಯಾಪಾರ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಎಂದು ತಿಳಿಸಿದರು.