ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಧುಮ್ಮುಕಿ ಹರಿಯುತ್ತಿದೆ.
ಕೊಡಗು ಎಂದ ಕೂಡಲೇ ನೆನಪಾಗುವುದು ಹಚ್ಚ ಹಸಿರಿನ ವನರಾಶಿ. ಭೂಮಿಗೆ ಮುತ್ತಿಡುತ್ತಿರುವ ಮಂಜು, ಸದಾ ನೀರಿನಿಂದ ಭೋರ್ಗರೆಯುವ ಜಲಪಾತಗಳು. ಕೊಡಗಿನಲ್ಲಿ ಮಳೆಗಾಲ ಶುರುವಾದರೆ ಸಾಕು, ಗಿರಿಕಾನನದ ನಡುವಿನಿಂದ ಧುಮ್ಮಿಕ್ಕುವ ಜಲಧಾರೆಗಳ ವಯ್ಯಾರವನ್ನು ನೋಡುವುದೇ ಚೆಂದ, ನೈಜ ಸೌಂದರ್ಯದ ಕೊಡಗಿನಲ್ಲಿಗ ಜಲಸುಂದರಿಯರದ್ದೇ ದರ್ಬಾರ್ ಆಗಿದೆ.
ಕೊಡಗಿನಲ್ಲಿ ಕಳೆದ ಎರಡು, ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ ಜಲಪಾತಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಮಡಿಕೇರಿಯ ಚೆಟ್ಟಳ್ಳಿ ರಸ್ತೆ ಬದಿಯಲ್ಲಿ ಎತ್ತರದಿಂದ ದುಮ್ಮಿಕ್ಕುತ್ತಿರುವ ಅಭ್ಯಾಲ ಜಲಪಾತ ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ. ಈ ಮಾರ್ಗವಾಗಿ ತೆರಳುತ್ತಿರುವ ಪ್ರವಾಸಿಗರು ಜಲಧಾರೆಯಲ್ಲಿ ಮಿಂದು ಮುಂದೆ ಸಾಗುತ್ತಿದ್ದಾರೆ.
ಜಿಲ್ಲೆಯ ಇತರ ಭಾಗಗಳ ಜಲಪಾತಗಳು ಕೂಡ ಜಲರಾಶಿಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದು, ಮಾನ್ಸೂನ್ ಕಾಲದ ಪ್ರವಾಸಿಗರಿಗೆ ಇವುಗಳೇ ಆಕರ್ಷಣೀಯ ಕೇಂದ್ರಗಳಾಗಿವೆ. ಪ್ರವಾಸಿಗರು ಸ್ಥಳೀಯರು ಇದೀಗ ಜಲಪಾತದತ್ತ ಮುಖ ಮಾಡುತ್ತಿದ್ದಾರೆ. ಇದನ್ನೂ ಓದಿ:ಮಳೆಯ ನಡುವೆಯೂ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರು