Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Karnataka

ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

Public TV
Last updated: June 16, 2021 7:31 pm
Public TV
Share
3 Min Read
MDK Rain 2
SHARE

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚು ಸುರಿಯುತ್ತಿದ್ದು, ಮಳೆಗಾಲದ ಹಿನ್ನೆಲೆ ಮುಂದಿನ ದಿನಗಳಲ್ಲಿ ವರುಣನ ಅಬ್ಬರ ಹೆಚ್ಚಾದರೆ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ನಿಷೇಧಿಸಲಾಗಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

mdk rain 2 medium

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಸರಕು ಸಾಗಾಣೆಯ ಭಾರೀ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ಹಾಗೂ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ. ಹೀಗಾಗಿ ಜೂನ್ 23 ರಿಂದ ಆಗಸ್ಟ್ 16ರ ವರೆಗೆ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.

mdk rain web medium

ಸಾರ್ವಜನಿಕರ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

mdk dc order medium

ಹೆಚ್ಚಿನ ಮಳೆಯಾಗುವ ಕುರಿತು ರಾಜ್ಯ ಹವಾಮಾನ ಇಲಾಖೆ 2-3 ದಿನ ಮುಂಚಿತವಾಗಿ ಆಗಿಂದಾಗ್ಗೆ ವರದಿಯನ್ನು ನೀಡುತ್ತಿದೆ. ಇದನ್ನು ಅವಲೋಕಿಸಿ ಮತ್ತು ಕಳೆದ 3 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ. ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರೀ ಸರಕು ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ. ಈ ರಸ್ತೆಗಳಲ್ಲಿ ಲಘು ವಾಹನಗಳು, ಬಸ್‍ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

MDK Rain medium

ಈ ಎಲ್ಲ ಉಲ್ಲೇಖಗಳಲ್ಲಿನ ವರದಿ, ನಡವಳಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ತೀರ್ಮಾನವನ್ನು ಪರಿಶೀಲಿಸಿ, ಕೊಡಗು ಜಿಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವು ಹಾಗೂ ಏರಿಳಿತದಿಂದ ಕೂಡಿವೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ ಎಂದು ಡಿಸಿ ತಿಳಿಸಿದ್ದಾರೆ.

MDK RAIN F medium

ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31, ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005ರ ಕಲಂ 33, ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5), ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ 144ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಇದೇ ಜೂನ್ 23 ರಿಂದ ಆಗಸ್ಟ್ 16 ವರೆಗೆ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

mdk rain 3 e1623599451891

TAGGED:DCHeavy VehiclesKodaguProhibitionPublic TVrainಕೊಡಗುಡಿಸಿನಿಷೇಧಪಬ್ಲಿಕ್ ಟಿವಿಭಾರೀ ವಾಹನಗಳುಮಳೆ
Share This Article
Facebook Whatsapp Whatsapp Telegram

Cinema Updates

Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
4 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
8 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
1 day ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
1 day ago

You Might Also Like

BSF Sub Inspector Mohammed Imteyaz
Crime

ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

Public TV
By Public TV
10 minutes ago
Omar Abdullah drone attack
Latest

ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Public TV
By Public TV
1 hour ago
Ceasefire violation
Latest

ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

Public TV
By Public TV
2 hours ago
kea
Bengaluru City

ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

Public TV
By Public TV
2 hours ago
siddaramaiah 5
Bengaluru City

ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Public TV
By Public TV
2 hours ago
vikram misri 1
Latest

ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?