ಕೊಡಗಿನಲ್ಲಿ ಮತ್ತೆ ವರುಣನ ಅಬ್ಬರ- ಜನರಲ್ಲಿ ಹೆಚ್ಚಿದ ಆತಂಕ

Public TV
1 Min Read
mdk rain

ಮಡಿಕೇರಿ: ಭಾರೀ ಮಳೆಯಿಂದಾಗಿ ತಲಕಾವೇರಿಯಲ್ಲಿ ಭೂಕುಸಿತ ಸಂಭವಿಸಿ ಅರ್ಚಕರ ಕುಟುಂಬ ಮಣ್ಣಲ್ಲಿ ಸಿಲುಕಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಇದರಿಂದಾಗಿ ಜನ ತೀವ್ರ ಆತಂಕಗೊಂಡಿದ್ದಾರೆ.

vlcsnap 2020 10 12 19h06m25s621 e1602510077880

ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಮಡಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇತ್ತೀಚೆಗೆ ಮಳೆ ಕಡಿಮೆ ಆಯಿತೆಂದು ನಿಟ್ಟುಸಿರು ಬಿಟ್ಟ ಜನತೆಗೆ ಇದೀಗ ಮತ್ತೆ ಆರಂಭವಾಗಿರುವುದು ನಡುಕ ಹುಟ್ಟಿಸಿದೆ.

vlcsnap 2020 10 12 19h06m08s215 e1602510134928

ಅಕ್ಟೋಬರ್ 14ರ ವರಗೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯ ಜನರಲ್ಲಿ ಅತಂಕ ಹೆಚ್ಚಾಗಿದೆ. ಅಲ್ಲದೆ ಮತ್ತೆ ಮಳೆ ಮುಂದುವರಿದಿದ್ದರಿಂದ ಗುಡ್ಡಗಾಡು ಪ್ರದೇಶದಲ್ಲಿ ಭೂ ಕುಸಿತ ಸಂಭವಿಸಿದರೆ ಏನು ಗತಿ ಎಂಬ ಭಯದಲ್ಲೇ ಜನ ಜೀವನ ನಡೆಸುವಂತಾಗಿದೆ. ಮಳೆಯಿಂದಾಗಿ ಕೊಡಗು ಜನ ನಿದ್ದೆಗೆಡುವಂತಾಗಿದೆ.

vlcsnap 2020 10 12 19h07m48s992 e1602510198885

ಜಿಲ್ಲೆಯಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು, ಧಾರಾಕಾರವಾಗಿ ಸುರಿಯುತ್ತಿದೆ. ತೀವ್ರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಪರದಾಡುವಂತಾಗಿದೆ. ಕೆಲ ದಿನಗಳಿಂದ ಬೀಡುವು ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸುತ್ತಿದ್ದು, ಇಂದು ಸಂಜೆ 4 ಗಂಟೆಯಿಂದ ಮಳೆ ಬಿರುಸು ಪಡೆದುಕೊಂಡಿದೆ. ಮಡಿಕೇರಿಯಲ್ಲಿ ಜನ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *