ಮಡಿಕೇರಿ: ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ10 ರಿಂದ 24ರವರೆಗೆ ಲಾಕ್ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು. ಈ ಆದೇಶದಿಂದ ಜಿಲ್ಲೆಯ ಜನರಲ್ಲಿ ಕೊಂಚ ಗೊಂದಲ ಉಂಟಾಗಿತ್ತು. ಈ ನಿಟ್ಟಿನಲ್ಲಿ ಇದೀಗಾ ಜಿಲ್ಲಾಡಳಿತ ಜನ ಸಾಮಾನ್ಯರಿಗೆ ಗೊಂದಲ ಅಗಬರದು ಎಂದು ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.
ಮಂಗಳವಾರ ಮತ್ತು ಶುಕ್ರವಾರ ಜನಜಂಗುಳಿಯಾಗದಂತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದು ಕೊಡಗಿನ ಜನರ ಗೊಂದಲ ಕ್ಕೆ ಜಿಲ್ಲಾಡಳಿತ ತೇರೆ ಎಳೆದಿದೆ.