ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಸಹ ಮಹಾಮಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕೊಪ್ಪಳ ನಗರದ ಶಿರಸಪ್ಪಯ್ಯನ ಮಠದ ಹತ್ತಿರ ಒಂದನೇ ವಾರ್ಡ್ ನಿವಾಸಿ 40 ವರ್ಷದ ವ್ಯಕ್ತಿ ಕರೊನಾ ವೈರಸ್ನಿಂದಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರವನ್ನು ಸರ್ಕಾರದ ಆದೇಶದ ನಿಯಗಳ ಪ್ರಕಾರ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಸಾವಿನ ಸಂಖ್ಯೆ ಹಾಗೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ ಜನರಲ್ಲಿ ತೀವ್ರ ಆತಂಕವನ್ನು ಉಂಟು ಮಾಡಿದೆ.
- Advertisement 2
- Advertisement 3
ಜಿಲ್ಲೆಯಲ್ಲಿ ಒಟ್ಟು 599 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 347 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 240 ಸಕ್ರಿಯ ಪ್ರಕರಣಗಳಿವೆ. ಹೀಗಾಗಿ ಜಿಲ್ಲೆಯ ಜನ ಭಯದಲ್ಲೇ ಬದುಕುವಂತಾಗಿದೆ.