ಕೊರೊನಾಗೆ ಬಲಿಯಾದ ವ್ಯಕ್ತಿಯ ಮೃತದೇಹವನ್ನು ಜೆಸಿಬಿಯಲ್ಲಿ ಸಾಗಣೆ

Public TV
1 Min Read
Andhra Pradesh corona

– ಅಮಾನವೀಯವಾಗಿ ನಡೆದುಕೊಂಡ ಪುರಸಭೆ ಅಧಿಕಾರಿಗಳು

ಹೈದರಾಬಾದ್: ಕೊರೊನಾಗೆ ಬಲಿಯಾದ ಸೋಂಕಿತನ ಮೃತದೇಹವನ್ನು ಜೆಸಿಬಿ ಯಂತ್ರದ ಮೂಲಕ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಪಾಲಾಸ ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೊನಾದ ಸಮಯದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಿದ್ದ ಮಾಜಿ ಪುರಸಭೆಯ ಉದ್ಯೋಗಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇವರು ತಮ್ಮ ಪಾಲಾಸ ಪಟ್ಟಣದಲ್ಲಿನ ಮನೆಯಲ್ಲಿ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಜೆಸಿಬಿ ವಾಹನದಲ್ಲಿ ಎತ್ತಿಕೊಂಡು ಹೋಗಿ ಗುಂಡಿ ಒಳಗೆ ಹಾಕಿ ಮುಚ್ಚಿ ಅಂತ್ಯಕ್ರಿಯೆ ಮಾಡಲಾಗಿದೆ.

ಮನೆಯಲ್ಲೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆಗ ನೆರೆಹೊರೆಯವರು ಮೃತದೇಹ ಇಲ್ಲೇ ಇದ್ದರೆ ನಮಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ. ಆಗ ಮೃತನ ಮೊಮ್ಮಗಳು ಮತ್ತು ಸರ್ಕಾರಿ ಸ್ವಯಂ ಸೇವಕರು ಪುರಸಭೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆಗ ಸ್ಥಳಕ್ಕೆ ಬಂದ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿದ್ದರು, ಮೃತದೇಹವನ್ನು ಮಟ್ಟದೇ ಜೆಸಿಬಿ ಯಂತ್ರದಲ್ಲಿ ಮೃತದೇಹವನ್ನು ಸಾಗಿಸಿ ನಂತರ ಅಂತ್ಯಕ್ರಿಯೆ ಮಾಡಿದ್ದಾರೆ.

Jagan Mohan Reddy

ಈ ವಿಚಾರವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದು, ಈ ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಇದು ಅಮಾನವೀಯ ಘಟನೆ. ಈ ರೀತಿಯ ಪ್ರಕರಣಗಳನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಸರ್ಕಾರವೇ ಪ್ರೋಟೋಕಾಲ್ ಅನ್ನು ಹೊರಡಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

coronavirus 4833754 1920

ಈ ಘಟನೆ ಕುರಿತು ಆಂಧ್ರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಾಲಾಸ ಪುರಸಭೆ ಆಯುಕ್ತ ನಾಗೇಂದ್ರ ಕುಮಾರ್ ಮತ್ತು ನೈರ್ಮಲ್ಯ ನಿರೀಕ್ಷಕ ಎನ್ ರಾಜೀವ್ ಅವರನ್ನು ಅಮಾನತುಗೊಳಿ ಶ್ರೀಕಾಕುಲಂ ಜಿಲ್ಲಾಧಿಕಾರಿ ಜೆ.ನಿವಾಸ್ ಆದೇಶಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *