ಕೊರೊನಾದಿಂದ ವ್ಯಕ್ತಿ ಮೃತ- ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಎಡಿಸಿ

Public TV
0 Min Read
cng adc

ಚಾಮರಾಜನಗರ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಕೊರೊನಾ ವಾರಿಯರ್ಸ್ ಗೆ ನೈತಿಕ ಸ್ಥೈರ್ಯ ತುಂಬಿದರು.

ಬುಧವಾರ ರಾತ್ರಿ ಚಾಮರಾಜನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಕೊಳ್ಳೇಗಾಲ ತಾಲೂಕಿನ ಬಸ್ತೀಪುರ ಗ್ರಾಮದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟರು. ಇವರ ಅಂತ್ಯಕ್ರಿಯೆ ಇಂದು ಚಾಮರಾಜನಗರದ ಹೊರವಲಯದಲ್ಲಿರುವ ಯಡಬೆಟ್ಟ ಸಮೀಪ ಜಿಲ್ಲಾಡಳಿತ ನಿಗದಿಪಡಸಿರುವ ಭೂಮಿಯಲ್ಲಿ ನಡೆಯಿತು.

WhatsApp Image 2020 07 23 at 6.05.18 PM

ಶವಾಗಾರದಿಂದ ಮೃತದೇಹ ಸಾಗಿಸಿ ಯಡಬೆಟ್ಟ ಸಮೀಪ ಅಂತ್ಯಕ್ರಿಯೆ ನೆರವೇರಿಸುವ ತನಕ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಪಿ.ಎಫ್.ಐ ಕಾರ್ಯಕರ್ತರೊಂದಿಗೆ ಸೇರಿಕೊಂಡು ಸಿ.ಎಲ್.ಆನಂದ್ ಮೃತನ ಅಂತ್ಯಕ್ರಿಯೆ ನೆರವೇರಿಸಿದರು.

Share This Article
Leave a Comment

Leave a Reply

Your email address will not be published. Required fields are marked *