Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೊರೊನಾ ಆತಂಕ- ಮೀನುಗಾರಿಕೆ ಆರಂಭದ ದಿನವೇ ಬಿಕೋ ಎನ್ನುತ್ತಿದೆ ಬಂದರು

Public TV
Last updated: August 1, 2020 8:12 pm
Public TV
Share
3 Min Read
kwr fishing fish
SHARE

ಕಾರವಾರ: ರಾಜ್ಯದ ಕರಾವಳಿಯಲ್ಲಿ ಅಗಸ್ಟ್ ತಿಂಗಳ ಮೊದಲ ದಿನ ಮೀನುಗಾರಿಕೆ ಪ್ರಾರಂಭಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತದೆ. ಮಳೆಗಾಲದ ಎರಡು ತಿಂಗಳು ಬಂದ್ ಆಗುವ ಮೀನುಗಾರಿಕೆ, ಸರ್ಕಾರದ ಆದೇಶದಂತೆ ಇಂದಿನಿಂದ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪ್ರತಿ ವರ್ಷ ಅಗಸ್ಟ್ ನಲ್ಲಿ ಮೀನುಗಾರಿಕೆಯನ್ನು ಹಬ್ಬದಂತೆ ಆಚರಿಸುತ್ತಿದ್ದ ಉತ್ತರ ಕನ್ನಡ ಮೀನುಗಾರರ ಸಂಭ್ರಮ ಕಳೆಗುಂದಿದೆ.

ಸರ್ಕಾರದ ಆದೇಶದಂತೆ ಜೂನ್, ಜುಲೈ ತಿಂಗಳ ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಿದ ಬಳಿಕ ಅಗಸ್ಟ್ 1 ರಿಂದ ಪುನಃ ಪ್ರಾರಂಭ ಮಾಡಲಾಗುತ್ತದೆ. 61 ದಿನಗಳ ಬಳಿಕ ಮೀನುಗಾರಿಕೆ ಪ್ರಾರಂಭವನ್ನು ಮೀನುಗಾರರು ಹಬ್ಬದಂತೆ ಆಚರಣೆ ಮಾಡೋದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆ. ಅದರಂತೆ ಇಂದು ಕರಾವಳಿಯಲ್ಲಿ ಮೀನುಗಾರಿಕೆ ಮತ್ತೆ ಪ್ರಾರಂಭಗೊಂಡಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಲ್ಲಿ ಯಾವುದೇ ಸಂಭ್ರಮಾಚರಣೆ ಕಂಡುಬಂದಿಲ್ಲ. ಬೋಟುಗಳಿಗೆ ಮಾವಿನ ತೋರಣ, ಹೂವಿನ ಹಾರ ಹಾಕಿ ಸಿಂಗರಿಸಿ ಪೂಜೆ ಮಾಡಿ ಖುಷಿಯಿಂದ ಸಮುದ್ರಕ್ಕಿಳಿಯುತ್ತಿದ್ದ ಮೀನುಗಾರರ ಸಂಭ್ರಮವನ್ನು ಕೊರೊನಾ ಕಸಿದುಕೊಂಡಿದೆ.

KWR FISHING FISH 2 5

ಕಾರವಾರ ತಾಲೂಕಿನ ಬೈತಖೋಲ ಬಂದರಿನಲ್ಲಿ ಮೀನುಗಾರಿಕೆ ಪ್ರಾರಂಭದ ದಿನ ಕಾಣುತ್ತಿದ್ದ ಹಬ್ಬದ ಸಂಭ್ರಮ ಈ ಬಾರಿ ಕಾಣೆಯಾಗಿದೆ. ಕೆಲವೇ ಬೋಟುಗಳು ಮಾತ್ರ ಮೀನುಗಾರಿಕೆಗೆ ತೆರಳುತ್ತಿದ್ದು, ಸಾಕಷ್ಟು ಬೋಟುಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿವೆ. ಕೊರೊನಾ ಅಟ್ಟಹಾಸ ಹಿನ್ನೆಲೆ ಮೀನುಗಾರಿಕಾ ಬೋಟುಗಳಲ್ಲಿ ಕೆಲಸ ಮಾಡುತ್ತಿದ್ದ ಹೊರರಾಜ್ಯದ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದು, ಇನ್ನೂ ಮರಳಿಲ್ಲ. ಹೀಗಾಗಿ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಬೋಟುಗಳಲ್ಲಿ ಕಾರ್ಮಿಕರೇ ಇಲ್ಲದಂತಾಗಿದ್ದು, ಸ್ಥಳೀಯರು ಕೆಲವೇ ಬೋಟುಗಳನ್ನು ಮೀನುಗಾರಿಕೆಗೆ ಕೊಂಡೊಯ್ದಿದ್ದಾರೆ.

KWR FISHING FISH 2 4

ಸಮುದ್ರಕ್ಕಿಳಿದ ಬೋಟುಗಳು ಮರಳಿ ದಡಕ್ಕೆ
ಕಾರವಾರ ನಗರದ ಬೈತಖೋಲ್ ಮೀನುಗಾರಿಕಾ ಬಂದರಿನಿಂದ ಇಂದು ಬೆಳಗ್ಗೆ ಸುಮಾರು 50 ದೋಣಿಗಳು ಮೀನುಗಾರಿಕೆಗೆ ತೆರಳಿದ್ದವು. ಆದರೆ ಇಡೀ ದಿನ ಸಮುದ್ರದಲ್ಲಿ ಶ್ರಮಿಸಿದರೂ ಕೆಲವು ದೋಣಿಗಳಿಗೆ ಮಾತ್ರ ಒಂದೆರಡು ಬುಟ್ಟಿಗಳಷ್ಟೇ ಸೆಟ್ಲೆ (ಸೀಗಡಿ) ಮೀನುಗಳು ಸಿಕ್ಕಿವೆ. ಮುದಗಾ ಬಂದರಿನಿಂದಲೂ ಸುಮಾರು 60 ದೋಣಿಗಳು ಸಮುದ್ರಕ್ಕೆ ತೆರಳಿದ್ದವು. ಅವೂ ಖಾಲಿಯಾಗಿಯೇ ಬಂದರಿಗೆ ಮರಳಿವೆ.

ಇಂದು ಅಂದಾಜು ಒಂದು ಕ್ವಿಂಟಲ್ ಮಾತ್ರ ಮೀನು ಸಿಕ್ಕಿವೆ. ದೋಣಿಗಳಿಗೆ ದಿನವೊಂದಕ್ಕೆ 70ರಿಂದ 80 ಲೀಟರ್‍ಗಳಷ್ಟು ಡೀಸೆಲ್ ಬೇಕು. ಮೀನು ವ್ಯಾಪಾರಿಗಳು ಸೆಟ್ಲೆಯನ್ನು ಕೆ.ಜಿ.ಗೆ 105ರೂ.ಗೆ ಖರೀದಿಸುವುದಾಗಿ ಹೇಳಿದ್ದಾರೆ. ಕಾರ್ಮಿಕರ ವೇತನ, ನಿತ್ಯದ ಆದಾಯವನ್ನೆಲ್ಲ ಒಟ್ಟುಗೂಡಿಸಿದರೆ ಮೊದಲ ದಿನ ನಷ್ಟವೇ ಆಗಿದೆ. ಈ ಅಂದಾಜಿನ ಪ್ರಕಾರ ದೋಣಿಗಳ ಡೀಸೆಲ್ ಖರ್ಚೂ ಸಿಗುವುದಿಲ್ಲ ಎಂದು ಮೀನುಗಾರರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

KWR FISHING FISH 2 1

ಕೊರೊನಾ ಭಯ, ಬಂದರು ಖಾಲಿ ಖಾಲಿ
ಕರಾವಳಿ ಭಾಗದ ಮಂಗಳೂರಿನ ಬಂದರು, ಮಹರಾಷ್ಟ್ರದ ಬಂದರುಗಳಲ್ಲಿ ಮೀನುಗಾರರಿಗೆ ಕೊರೊನಾ ವಕ್ಕರಿಸಿದೆ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ ಭಾಗದಲ್ಲಿ ಸಹ ಹಲವು ಮೀನುಗಾರರಿಗೆ ಕೊರೊನಾ ತಗುಲಿದೆ. ಹೀಗಾಗಿ ಹಲವು ಮೀನುಗಾರರು ಸಮುದ್ರಕ್ಕೆ ಇಳಿಯಲು ಹೆದರುತಿದ್ದಾರೆ. ಇದರಿಂದಾಗಿ ಬೋಟ್ ಮಾಲೀಕರು ಕೆಲಸಗಾರರಿಲ್ಲದೆ ಬೋಟುಗಳನ್ನು ಲಂಗುರು ಹಾಕುವಂತಾಗಿದೆ.

ಕಳೆದ ಬಾರಿ ಅಗಸ್ಟ್ ಮೊದಲವಾರದಲ್ಲಿ ನೆರೆ ಪರಿಸ್ಥಿತಿ ಉಂಟಾದ ಬಳಿಕ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದರಿಂದ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಅದಾದ ಬಳಿಕ ಎರಡು ತಿಂಗಳು ನಡೆದ ಮೀನುಗಾರಿಕೆ, ಬಳಿಕ ಈ ವರ್ಷದ ಪ್ರಾರಂಭದಲ್ಲಿ ಮತ್ಸ್ಯಕ್ಷಾಮ ಹಿನ್ನೆಲೆ ಹಂತ ಹಂತವಾಗಿ ಸ್ಥಗಿತಗೊಳ್ಳುವಂತಾಗಿದ್ದು, ಅಷ್ಟರಲ್ಲೇ ಕೊರೊನಾ ವಕ್ಕರಿಸಿದ ಪರಿಣಾಮ ಮೀನುಗಾರಿಕೆ ಸಂಪೂರ್ಣ ನಿಂತುಹೋಗಿತ್ತು. ಸುಮಾರು ನಾಲ್ಕು ತಿಂಗಳ ಬಳಿಕ ಇಂದಿನಿಂದ ಪ್ರಾರಂಭವಾಗಬೇಕಿತ್ತು. ಕೊರೊನಾ ಅವಾಂತರದಿಂದಾಗಿ ಅದಕ್ಕೂ ಅಡ್ಡಿಯಾಗಿದೆ.

KWR FISHING FISH 2 7

ಸದ್ಯ ಹೊರರಾಜ್ಯದ ಮೀನುಗಾರರು ಬರುವುದು ಸಾಧ್ಯವಿಲ್ಲದ ಹಿನ್ನೆಲೆ ಸ್ಥಳೀಯ ಕಾರ್ಮಿಕರನ್ನೇ ಬಳಸಿಕೊಂಡು ಮೀನುಗಾರಿಕೆ ಪ್ರಾರಂಭಿಸಲು ಪರ್ಸಿನ್ ಬೋಟು ಮೀನುಗಾರರು ನಿರ್ಧರಿಸಿದ್ದಾರೆ. ಸದ್ಯ ಮೀನುಗಾರಿಕೆ ಪ್ರಾರಂಭಿಸಿರುವವರಿಗೆ ಮೀನಿನ ಲಭ್ಯತೆಯನ್ನು ಪರಿಶೀಲಿಸಿದ ಬಳಿಕ ಮೀನುಗಾರಿಕೆಗೆ ಇಳಿಯಲು ಪರ್ಸಿನ್ ಬೋಟು ಮೀನುಗಾರರು ನಿರ್ಧರಿಸಿದ್ದು , ಇದೇ ತಿಂಗಳ 5ನೇ ತಾರೀಖಿನಿಂದ ಪ್ರಾರಂಭಿಸುವ ಸಾಧ್ಯತೆಗಳಿವೆ.

TAGGED:coastalCorona VirusFisheriesfishermenkarnatakaPublic TVಕರಾವಳಿಕರ್ನಾಟಕಕೊರೊನಾ ವೈರಸ್ಪಬ್ಲಿಕ್ ಟಿವಿಮೀನುಗಾರರುಮೀನುಗಾರಿಕೆ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
13 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
14 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
14 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
16 hours ago

You Might Also Like

Kamal Haasan
Bengaluru City

ಚಿತ್ರ ಬಿಡುಗಡೆಯಾದರಷ್ಟೇ ಪ್ರದರ್ಶನ: ವಿಕ್ಟರಿ ಥಿಯೇಟರ್ ಯೂ ಟರ್ನ್

Public TV
By Public TV
21 minutes ago
Punjab Kings
Cricket

ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

Public TV
By Public TV
27 minutes ago
Hasan Murder Arrest
Crime

ಚಿನ್ನಾಭರಣಕ್ಕಾಗಿ ಕಂಟ್ರಾಕ್ಟರ್ ಹತ್ಯೆ ಕೇಸ್ – ಓರ್ವ ಅಪ್ರಾಪ್ತ ಸೇರಿ ಇಬ್ಬರ ಬಂಧನ

Public TV
By Public TV
51 minutes ago
Mandya
Crime

ಮಂಡ್ಯದಲ್ಲಿ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕಿ ಸಾವು ಆರೋಪ – ಮಿಮ್ಸ್ ವೈದ್ಯರ ವಿರುದ್ಧ ಕುಟುಂಬ ಆಕ್ರೋಶ

Public TV
By Public TV
58 minutes ago
Auto Driver Lokesh Bellandur Hindi Woman Attacked By Slipper
Bengaluru City

ತಪ್ಪಿಲ್ಲದಿದ್ರೂ ನನ್ನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ: ಆಟೋ ಚಾಲಕ

Public TV
By Public TV
1 hour ago
Kanakapura Chirathe Bone
Bengaluru Rural

ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಬೋನ್ ಅಳವಡಿಸಿ ಪತ್ತೆ ಕಾರ್ಯಾಚರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?