– ಮನೆ ಮನೆಗೆ ತೆರಳಿ ಲಸಿಕೆ ಹಾಕುವಂತೆ ಆಗ್ರಹ
ಶಿವಮೊಗ್ಗ: ಕೊರೊನಾ ತಡೆಗಟ್ಟಲು ಸರ್ಕಾರ ಕೈಗೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ. ಸರ್ಕಾರ ಜನರ ಕಷ್ಟಗಳಿಗೆ ಸರಿಯಾಗಿ ಸ್ಪಂದಿಸಿಲ್ಲ. ರಾಜ್ಯವನ್ನು ಕೊರೊನಾ ಮುಕ್ತವಾಗಿಸುವ ನಿಟ್ಟಿನಲ್ಲಿ ಮನೆ ಮನೆಗೆ ತೆರಳಿ ಲಸಿಕೆ ಹಾಕುವ ಕೆಲಸ ಸರ್ಕಾರದಿಂದ ಆಗಬೇಕು ಎಂದು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಗ್ರಹಿಸಿದ್ದಾರೆ.
ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯಲ್ಲಿ ಬಡವರಿಗೆ ಅಹಾರದ ಕಿಟ್ ವಿತರಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ಸಂಕಷ್ಟದ ಸಮಯದಲ್ಲಿ ಬಡವರಿಗೆ ಸಹಾಯ ಮಾಡುವುದು ಉತ್ತಮ ಕೆಲಸ ಇದನ್ನು ಕಾಂಗ್ರೆಸ್ ಪಕ್ಷದ ಸ್ಥಳೀಯ ಕಾರ್ಯಕರ್ತರು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಯೋಜನೆ ಜನರಿಗೆ ತಲುಪುತ್ತಿಲ್ಲ. ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಪ್ರಿಯತಮೆಯ ಕೊಲೆಗೈದು ಸಹೋದರನ ಸಹಾಯದಿಂದ ಹೂತು ಹಾಕಿದ!
ಕಷ್ಟಕಾಲದಲ್ಲಿ ರಾಜ್ಯದ ಬಡವರಿಗೆ ನ್ಯಾಯ ದೊರಕುತ್ತಿಲ್ಲ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಬಡವರ ಕಷ್ಟವನ್ನು ನೋಡಬೇಕು ಇದನ್ನು ಹೊರತು ಪಡಿಸಿ ಪಕ್ಷ, ರಾಜಕೀಯ ಮಾಡಬಾರದು ಎಂದು ಕಿವಿಮಾತು ನೀಡಿದರು. ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಕುಮಾರಿ, ತಾ.ಪಂ. ಮಾಜಿ ಸದಸ್ಯ ಸೋಮಶೇಖರ್, ಗ್ರಾ.ಪಂ ಸದಸ್ಯ ಗಿರೀಶ್, ಪರಶುರಾಮ, ಮತ್ತಿತರರು ಉಪಸ್ಥಿತರಿದ್ದರು.