Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೊರೊನಾ ದೊಡ್ಡ ರೋಗವೇ ಅಲ್ಲ: ಸಚಿವ ರಮೇಶ್ ಜಾರಕಿಹೊಳಿ

Public TV
Last updated: July 1, 2020 4:15 pm
Public TV
Share
2 Min Read
ramesh jarkoholi
SHARE

– ಸಾಮಾಜಿಕ ಅಂತರ ಕಾಪಾಡಿ ಎಂದು, ತಾವೇ ನೂಕುನುಗ್ಗಲಿನಲ್ಲಿ ಭಾಗಿ
– ಜನಜಂಗುಳಿ ಮಧ್ಯೆ ಮಾಸ್ಕ್ ಧರಿಸದೆ ಸನ್ಮಾನ ಮಾಡಿಸಿಕೊಂಡ ರಮೇಶ್ ಜಾರಕಿಹೊಳಿ

ರಾಯಚೂರು: ಕೊರೊನಾ ದೊಡ್ಡ ರೋಗವೇ ಅಲ್ಲ, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿದರೆ ಮಾತ್ರ ಕಡಿಮೆ ಆಗುತ್ತದೆ ಎಂದು ಹೇಳುತ್ತಲೇ, ಸ್ವತಃ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೂಕುನುಗ್ಗಲಿನಲ್ಲಿ ಭರ್ಜರಿ ಸನ್ಮಾನ ಮಾಡಿಸಿಕೊಂಡಿದ್ದಾರೆ.

ರಾಯಚೂರಿನ ಮಸ್ಕಿಯ ಬುದ್ದಿನ್ನಿಯಲ್ಲಿ ನಡೆದ ನಂದವಾಡಗಿ ಏತನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ ಅವರ ಬೆಂಬಲಿಗರು ಸಚಿವರಿಗೆ ಸನ್ಮಾನ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ನಡೆದುಕೊಂಡಿದ್ದಾರೆ.

vlcsnap 2020 07 01 16h08m21s165

ಈ ವೇಳೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ಎಷ್ಟೇ ಲಾಕ್‍ಡೌನ್ ಮಾಡಿದರೂ, ಜನರು ಸಹಕಾರ ನೀಡಿದಾಗ ಮಾತ್ರ ಕೊರೊನಾ ತಡೆಯಲು ಸಾಧ್ಯ. ಜನರು ಸ್ವಯಂ ಪ್ರೇರಿತರಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರಧಾನಿಯವರ ಮಾರ್ಗದರ್ಶನ ಹಾಗೂ ಯಡಿಯೂರಪ್ಪನವರ ಸೂಚನೆ ಪಾಲನೆ ಮಾಡಿದರೆ, ಅಲ್ಲದೆ ವೈದ್ಯರ ಸಲಹೆಗಳನ್ನು ಜನ ಪಾಲಿಸಿದರೆ ಕೊರೊನಾ ದೊಡ್ಡ ರೋಗ ಅಲ್ವೇ ಅಲ್ಲ ಎಂದು ಹೇಳಿದರು.

ಕೊರೊನಾದಿಂದ ಒಬ್ಬ ಸತ್ತರು ಸಾವೇ, ಸಾವಿರ ಸತ್ತರು ಸಾವೇ, ಸಾವು ಕಡಿಮೆ ಆಗಬೇಕು ಎಂಬುವುದು ಎಲ್ಲರ ಭಾವನೆ. ಯೂರೋಪ್ ದೇಶಕ್ಕೆ ಹೋಲಿಸಿದರೆ ನಮ್ಮ ದೇಶದಲ್ಲಿ ಜನರು ಗಟ್ಟಿಯಿದ್ದಾರೆ. ಕೊರೊನಾ ತಡೆಗೆ ದೇವರು ಸಹಕಾರ ನೀಡುತ್ತಾನೆ, ಎಲ್ಲವೂ ಸರಿ ಆಗುತ್ತೆ ಎಂದರು. ಆದರೆ ಇಷ್ಟೆಲ್ಲಾ ಹೇಳಿದ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಮದಲ್ಲಿ ತಾವೇ ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಜನ ಖಂಡಿಸಿದ್ದಾರೆ.

vlcsnap 2020 07 01 16h11m23s179

ಕಾಮಗಾರಿ ಕುರಿತು ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಲು ಯತ್ನಿಸುತ್ತೇವೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಮುಗಿಸಲು ಪ್ರಯತ್ನ ಮಾಡಲಾಗುವುದು. ನಾರಾಯಣಪುರ ಬಲದಂಡೆ ದುರಸ್ಥಿ ಕಾಮಗಾರಿಯಲ್ಲಿ ಕಳಪೆ ಆಗಿರುವುದನ್ನು ಸಹಿಸುವುದಿಲ್ಲ. ಆರೋಪದ ಕುರಿತು ಸಮಗ್ರ ತನಿಖೆ ಮಾಡಿಸಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ನೀರಾವರಿ ಬಗ್ಗೆಯೂ ಸಮಗ್ರ ತನಿಖೆ ಮಾಡಿಸಲಾಗುವುದು ಎಂದರು.

vlcsnap 2020 07 01 16h09m57s97

ರಾಯಚೂರು, ಕೊಪ್ಪಳ, ಯಾದಗಿರಿಯಲ್ಲಿ ಹಲವು ನೀರಾವರಿ ಯೋಜನೆ ಜಾರಿ ಮಾಡಲಾಗುವುದು. ಪ್ರತಾಪ್ ಗೌಡರನ್ನು ಗೆಲ್ಲಿಸಿದರೆ ನಾನು 5ಂ ಕಾಲುವೆ ಮಾಡಿಕೊಡುತ್ತೇನೆ. ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೂ ಪರಿಹಾರ ಮಾಡಲಾಗುವುದು. ಪ್ರತಾಪ್ ಗೌಡ ಗೆದ್ದರೆ ಸಚಿವರೂ ಆಗ್ತಾರೆ. ರಾಯಚೂರು ಉಸ್ತುವಾರಿ ಆಗ್ತಾರೆ. ಬಿಜೆಪಿ ಸರ್ಕಾರ ಬರುವುದಕ್ಕೆ ಪ್ರತಾಪ್ ಗೌಡ ಪಾಟೀಲ್‍ರ ಪಾತ್ರ ಮಹತ್ವದ್ದಾಗಿದೆ. ಈ ಭಾಗದ ಎಲ್ಲ ನೀರಾವರಿ ಯೋಜನೆಗಳನ್ನು ಮಾಡಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

TAGGED:CoronaKrishna Upstairs ProjectLockdown RulesPublic TVraichurramesh jarkiholiಕೃಷ್ಣಾ ಮೇಲ್ದಂಡೆ ಯೋಜನೆಕೊರೊನಾಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿರಾಯಚೂರುಲಾಕ್‍ಡೌನ್ ನಿಯಮಗಳು
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
3 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
3 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
26 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
37 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
43 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?