Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೊರೊನಾ ದೊಡ್ಡ ರೋಗವೇ ಅಲ್ಲ: ಸಚಿವ ರಮೇಶ್ ಜಾರಕಿಹೊಳಿ

Public TV
Last updated: July 1, 2020 4:15 pm
Public TV
Share
2 Min Read
ramesh jarkoholi
SHARE

– ಸಾಮಾಜಿಕ ಅಂತರ ಕಾಪಾಡಿ ಎಂದು, ತಾವೇ ನೂಕುನುಗ್ಗಲಿನಲ್ಲಿ ಭಾಗಿ
– ಜನಜಂಗುಳಿ ಮಧ್ಯೆ ಮಾಸ್ಕ್ ಧರಿಸದೆ ಸನ್ಮಾನ ಮಾಡಿಸಿಕೊಂಡ ರಮೇಶ್ ಜಾರಕಿಹೊಳಿ

ರಾಯಚೂರು: ಕೊರೊನಾ ದೊಡ್ಡ ರೋಗವೇ ಅಲ್ಲ, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿದರೆ ಮಾತ್ರ ಕಡಿಮೆ ಆಗುತ್ತದೆ ಎಂದು ಹೇಳುತ್ತಲೇ, ಸ್ವತಃ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೂಕುನುಗ್ಗಲಿನಲ್ಲಿ ಭರ್ಜರಿ ಸನ್ಮಾನ ಮಾಡಿಸಿಕೊಂಡಿದ್ದಾರೆ.

ರಾಯಚೂರಿನ ಮಸ್ಕಿಯ ಬುದ್ದಿನ್ನಿಯಲ್ಲಿ ನಡೆದ ನಂದವಾಡಗಿ ಏತನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ ಅವರ ಬೆಂಬಲಿಗರು ಸಚಿವರಿಗೆ ಸನ್ಮಾನ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ನಡೆದುಕೊಂಡಿದ್ದಾರೆ.

vlcsnap 2020 07 01 16h08m21s165

ಈ ವೇಳೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲ, ಎಷ್ಟೇ ಲಾಕ್‍ಡೌನ್ ಮಾಡಿದರೂ, ಜನರು ಸಹಕಾರ ನೀಡಿದಾಗ ಮಾತ್ರ ಕೊರೊನಾ ತಡೆಯಲು ಸಾಧ್ಯ. ಜನರು ಸ್ವಯಂ ಪ್ರೇರಿತರಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರಧಾನಿಯವರ ಮಾರ್ಗದರ್ಶನ ಹಾಗೂ ಯಡಿಯೂರಪ್ಪನವರ ಸೂಚನೆ ಪಾಲನೆ ಮಾಡಿದರೆ, ಅಲ್ಲದೆ ವೈದ್ಯರ ಸಲಹೆಗಳನ್ನು ಜನ ಪಾಲಿಸಿದರೆ ಕೊರೊನಾ ದೊಡ್ಡ ರೋಗ ಅಲ್ವೇ ಅಲ್ಲ ಎಂದು ಹೇಳಿದರು.

ಕೊರೊನಾದಿಂದ ಒಬ್ಬ ಸತ್ತರು ಸಾವೇ, ಸಾವಿರ ಸತ್ತರು ಸಾವೇ, ಸಾವು ಕಡಿಮೆ ಆಗಬೇಕು ಎಂಬುವುದು ಎಲ್ಲರ ಭಾವನೆ. ಯೂರೋಪ್ ದೇಶಕ್ಕೆ ಹೋಲಿಸಿದರೆ ನಮ್ಮ ದೇಶದಲ್ಲಿ ಜನರು ಗಟ್ಟಿಯಿದ್ದಾರೆ. ಕೊರೊನಾ ತಡೆಗೆ ದೇವರು ಸಹಕಾರ ನೀಡುತ್ತಾನೆ, ಎಲ್ಲವೂ ಸರಿ ಆಗುತ್ತೆ ಎಂದರು. ಆದರೆ ಇಷ್ಟೆಲ್ಲಾ ಹೇಳಿದ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಮದಲ್ಲಿ ತಾವೇ ನಿಯಮಗಳನ್ನು ಉಲ್ಲಂಘನೆ ಮಾಡಿದ್ದು, ಜನ ಖಂಡಿಸಿದ್ದಾರೆ.

vlcsnap 2020 07 01 16h11m23s179

ಕಾಮಗಾರಿ ಕುರಿತು ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸಲು ಯತ್ನಿಸುತ್ತೇವೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಮುಗಿಸಲು ಪ್ರಯತ್ನ ಮಾಡಲಾಗುವುದು. ನಾರಾಯಣಪುರ ಬಲದಂಡೆ ದುರಸ್ಥಿ ಕಾಮಗಾರಿಯಲ್ಲಿ ಕಳಪೆ ಆಗಿರುವುದನ್ನು ಸಹಿಸುವುದಿಲ್ಲ. ಆರೋಪದ ಕುರಿತು ಸಮಗ್ರ ತನಿಖೆ ಮಾಡಿಸಲಾಗುವುದು. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ನೀರಾವರಿ ಬಗ್ಗೆಯೂ ಸಮಗ್ರ ತನಿಖೆ ಮಾಡಿಸಲಾಗುವುದು ಎಂದರು.

vlcsnap 2020 07 01 16h09m57s97

ರಾಯಚೂರು, ಕೊಪ್ಪಳ, ಯಾದಗಿರಿಯಲ್ಲಿ ಹಲವು ನೀರಾವರಿ ಯೋಜನೆ ಜಾರಿ ಮಾಡಲಾಗುವುದು. ಪ್ರತಾಪ್ ಗೌಡರನ್ನು ಗೆಲ್ಲಿಸಿದರೆ ನಾನು 5ಂ ಕಾಲುವೆ ಮಾಡಿಕೊಡುತ್ತೇನೆ. ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೂ ಪರಿಹಾರ ಮಾಡಲಾಗುವುದು. ಪ್ರತಾಪ್ ಗೌಡ ಗೆದ್ದರೆ ಸಚಿವರೂ ಆಗ್ತಾರೆ. ರಾಯಚೂರು ಉಸ್ತುವಾರಿ ಆಗ್ತಾರೆ. ಬಿಜೆಪಿ ಸರ್ಕಾರ ಬರುವುದಕ್ಕೆ ಪ್ರತಾಪ್ ಗೌಡ ಪಾಟೀಲ್‍ರ ಪಾತ್ರ ಮಹತ್ವದ್ದಾಗಿದೆ. ಈ ಭಾಗದ ಎಲ್ಲ ನೀರಾವರಿ ಯೋಜನೆಗಳನ್ನು ಮಾಡಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

TAGGED:CoronaKrishna Upstairs ProjectLockdown RulesPublic TVraichurramesh jarkiholiಕೃಷ್ಣಾ ಮೇಲ್ದಂಡೆ ಯೋಜನೆಕೊರೊನಾಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿರಾಯಚೂರುಲಾಕ್‍ಡೌನ್ ನಿಯಮಗಳು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
6 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
9 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
2 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
3 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
15 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
45 minutes ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?