Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ನಡುವೆ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಕೊರೊನಾ ನಡುವೆ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್

Health

ಕೊರೊನಾ ನಡುವೆ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದೆ ಕ್ಯಾನ್ಸರ್

Public TV
Last updated: August 21, 2020 11:18 am
Public TV
Share
2 Min Read
cancer
SHARE

ನವದೆಹಲಿ: ಕಳೆದ ಏಳು ತಿಂಗಳಿಂದ ದೇಶದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಕೊರೊನಾ ಭೀತಿ ನಡುವೆ ಗೊತ್ತೇ ಆಗದಂತೆ ಮತ್ತಷ್ಟು ಭಯಾನಕ ರೋಗಗಳು ಮನುಕುಲವನ್ನು ಬಾಧಿಸಲು ಆರಂಭಿಸಿವೆ. ಇದಕ್ಕ ಸ್ಪಷ್ಟ ಉದಾಹರಣೆ ಕ್ಯಾನ್ಸರ್.

ಕ್ಯಾನ್ಸರ್ ಸದ್ದಿಲ್ಲದೆ ಹಲವರನ್ನು ಬಲಿ ಪಡೆಯುತ್ತಿದ್ದು, ಈ ಕುರಿತು ಐಸಿಎಂಆರ್ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿ ಭಾರತದ ಯುವಕರು, ಮಹಿಳೆಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಕ್ಯಾನ್ಸರ್ ಕೇವಲ ಮಧ್ಯಮ ವಯಸ್ಕರು ಹಾಗೂ ವೃದ್ಧರಲ್ಲಿ ಮಾತ್ರವಲ್ಲ ಯುವಕರಲ್ಲೂ ಹೆಚ್ಚು ಕಾಣಿಸಿಕೊಳ್ಳುತ್ತಿದೆ.

icmr corona

ವೇಗವಾಗಿ ಹೆಚ್ಚುತ್ತಿವೆ ಕ್ಯಾನ್ಸರ್ ಪ್ರಕರಣಗಳು
ಭಾರತದಲ್ಲಿ ಕೊರೊನಾ ಮಧ್ಯೆ ಕ್ಯಾನ್ಸರ್ ಕೂಡ ವೇಗವಾಗಿ ಹೆಚ್ಚುತ್ತಿದೆ. ಐಸಿಎಂಆರ್ ಬಿಡುಗಡೆ ಮಾಡಿರುವ ವರದಿ ಇಂತಹದ್ದೊಂದು ಆಘಾತದ ಸುದ್ದಿಯನ್ನು ಹೇಳಿದ್ದು, 2025 ರ ವೇಳೆಗೆ ಭಾರತದಲ್ಲಿ 16 ಲಕ್ಷಕ್ಕೂ ಅಧಿಕ ಮಂದಿ ಕ್ಯಾನ್ಸರ್ ಗೆ ತುತ್ತಾಗಲಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಐಸಿಎಂಆರ್ ನೀಡಿರುವ ವರದಿ ಪ್ರಕಾರ ದೆಹಲಿ, ಮುಂಬೈ, ಬೆಂಗಳೂರು, ಅಹ್ಮದಾಬಾದ್ ಹಾಗೂ ಕೊಲ್ಕತ್ತಾದಂತಹ ದೊಡ್ಡ ನಗರಗಳಲ್ಲಿ ಹೆಚ್ಚು ಜನ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದು, ಇದರಲ್ಲಿ ಯುವಕರು ಮತ್ತು ಮಧ್ಯ ವಯಸ್ಕ ಮಹಿಳೆಯರು ಹೆಚ್ಚು ಎಂದು ವರದಿ ಉಲ್ಲೇಖಿಸಿದೆ.

CANCER DEVICE new

ಯಾವ್ಯಾವ ಕ್ಯಾನ್ಸರ್, ಹೇಗೆ ಹರಡುತ್ತಿದೆ?
ಭಾರತದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದ್ದು, ಪೂರ್ವ ರಾಜ್ಯಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್, ಮೆದುಳು, ತಲೆ ಮತ್ತು ಕುತ್ತಿಗೆ ಬಳಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಹೆಚ್ಚಿದೆ. ಅತಿಯಾದ ತಂಬಾಕು ಸೇವನೆ ಮತ್ತು ಸೌದೆ ಒಲೆ ಬಳಕೆ ಇದಕ್ಕೆ ಕಾರಣ. ಮಧ್ಯ ಪ್ರದೇಶದ ಯುವಕರಲ್ಲಿ ಬಾಯಿ ಕ್ಯಾನ್ಸರ್ ಹೆಚ್ಚು ಕಾಣಿಸಿಕೊಂಡಿದ್ದು, ಇದಕ್ಕೆ ತಂಬಾಕು, ಪಾನ್ ಮಸಾಲ ಕಾರಣ ಎಂದು ವರದಿ ಹೇಳಿದೆ.

ಗಂಗಾ ನದಿ ತಟದಲ್ಲಿರುವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಪಿತ್ತ ಕೋಶದ ಕ್ಯಾನ್ಸರ್ ಹೆಚ್ಚಾಗಿದ್ದು, ಇದರ ಜೊತೆಗೆ ತಲೆ ಮತ್ತು ಕುತ್ತಿಗೆ ಸಂಬಂಧಿಸಿದ ಕ್ಯಾನ್ಸರ್ ಬಂದಿದೆ. ಇದಕ್ಕೆ ಜಲ ಮಾಲಿನ್ಯ, ಪ್ರೊಟಿನ್ ರಹಿತ ಆಹಾರ ಪದ್ಧತಿ, ಶುಚಿತ್ವ ಸಮಸ್ಯೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೂತ್ರ ಕೋಶದ ಕ್ಯಾನ್ಸರ್ ಹೆಚ್ಚಿದ್ದು, ಗಾಳಿ ಮತ್ತು ಜಲ ಮಾಲಿನ್ಯ ಕಾರಣವಂತೆ.

CANCER CELLS

ದಕ್ಷಿಣ ಭಾರತದ ರಾಜ್ಯಗಳಲ್ಲಿ ಉದರ ಸಂಬಂಧಿ ಕ್ಯಾನ್ಸರ್ ಪ್ರಮಾಣ ಹೆಚ್ಚಿದ್ದು, ಆಹಾರದಲ್ಲಿ ಮಸಾಲೆ ಪದಾರ್ಥಗಳ ಹೆಚ್ಚು ಸೇವನೆ ಕ್ಯಾನ್ಸರ್‍ಗೆ ಕಾರಣವಾಗಿದೆ. ಪಂಜಾಬ್ ನಲ್ಲಿ ಕಿಡ್ನಿ, ಮೂತ್ರ ಕೋಶ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಿದೆ. ಗುಜರಾತ್, ರಾಜಸ್ಥಾನದಲ್ಲಿ ಕತ್ತು, ತಲೆ ಕ್ಯಾನ್ಸರ್ ಪ್ರಮಾಣ ಅಧಿಕವಾಗಿದ್ದು ಇದಕ್ಕೆ ವಾತಾವರಣದಲ್ಲಿನ ಮಾಲಿನ್ಯ, ಆಹಾರದಲ್ಲಿ ಕೀಟ ನಾಶಕದ ಪ್ರಮಾಣ ಹೆಚ್ಚಿರುವುದು ಕಾರಣ. ದೆಹಲಿ, ಮುಂಬೈನಲ್ಲಿ ಶ್ವಾಸಕೋಶದ ಕ್ಯಾನ್ಸರ್ ಅಧಿಕವಾಗಿದ್ದು, ಇದಕ್ಕೆ ವಾಯು ಮಾಲಿನ್ಯ ಕಾರಣವಾಗಿದೆ ಎನ್ನಲಾಗಿದೆ.

ಸುಮಾರು 20-25 ವರ್ಷದ ಯುವಕರಲ್ಲಿ ಕ್ಯಾನ್ಸರ್ ಹೆಚ್ಚಿದ್ದರೆ, ಒಟ್ಟು ಕ್ಯಾನ್ಸರ್ ಪ್ರಕರಣಗಳ ಪೈಕಿ ಪಾನ್ ಮಸಾಲಗೆ ಸಂಬಂಧಿಸಿದ್ದೇ ಶೇ.40ರಷ್ಟಿದೆ. ಸ್ತನ ಕ್ಯಾನ್ಸರ್ 2025 ರ ವೇಳೆಗೆ 4,27,273 ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಂತೆ ಇದು ಒಟ್ಟು ಕ್ಯಾನ್ಸರ್ ಪ್ರಕರಣಗಳ ಪೈಕಿ ಶೇ.14 ರಷ್ಟಾಗಿದ್ದು, ಉಳಿದ ಶೇ.46ರಷ್ಟು ಕ್ಯಾನ್ಸರ್ ಇತರೆ ಭಾಗಗಳಿಗೆ ಸಂಬಂಧಿಸಿದ್ದು ಎಂದು ವರದಿ ಹೇಳಿದೆ.

cancer

ಕ್ಯಾನ್ಸರ್ ರೋಗಿಗಳ ಪೈಕಿ ಆರಂಭದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಮಾತ್ರ ಜೀವ ಹಾನಿ ತಪ್ಪಿಸಬಹದಿದ್ದು, ಸ್ವಲ್ಪ ಯಾಮಾರಿದರೂ ರೋಗಿಯ ಸಾವು ಖಚಿತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾಗಿಂತ ಕ್ಯಾನ್ಸರ್ ಅಪಾಯ ಎಂದು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

TAGGED:cancerCorona VirusICMRPublic TVreportಐಸಿಎಂಆರ್ಕೊರೊನಾ ವೈರಸ್ಕ್ಯಾನ್ಸರ್ಪಬ್ಲಿಕ್ ಟಿವಿವರದಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
11 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
13 minutes ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
13 minutes ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
15 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
34 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?