– ಸಂಖ್ಯೆ ಹೆಚ್ಚಳವಾಗಿದೆ, ಆತಂಕ ಬೇಡ
ಧಾರವಾಡ: ನಮ್ಮ ವ್ಯವಸ್ಥೆಯಲ್ಲಿ ಹಾಗೂ ಜನ ಸಂದಣಿಯನ್ನು ಹೋಲಿಸಿದರೆ ಇಲ್ಲಿವರೆಗೆ ಕೊರೊನಾ ನಿಯಂತ್ರಣದಲ್ಲಿದೆ, ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕಾರಿಯೇ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಜನರು ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಣ ಮಾಡಬೇಕು ಹಾಗೂ ಜಾಗೃತಿಯನ್ನು ಮೂಡಿಸಬೇಕು. ಮಾಸ್ಕ್ ಹಾಕಿಕೊಳ್ಳುವುದರಿಂದ ಇದನ್ನ ದೊಡ್ಡ ಪ್ರಮಾಣದಲ್ಲಿ ತಡೆಗಟ್ಟಬಹುದು. ಸೋಂಕಿತರ ಸಂಖ್ಯೆ ಜಾಸ್ತಿಯಾದರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರಗಳು ತಮ್ಮ ಕೆಲಸ ಮಾಡುತ್ತಿವೆ ಎಂದರು.
ಸಚಿವ ಮಾಧುಸ್ವಾಮಿ ಕೊರೊನಾ ನಿಯಂತ್ರಣ ತಪ್ಪಿದೆ ಎಂದು ವಿಚಾರವಾಗಿ ಮಾತನಾಡಿ ಅವರ ಹೇಳಿಕೆ ಮಾಧ್ಯಮದಲ್ಲಿ ನೋಡಿದ್ದೇನೆ. ಆದರೆ ಅದು ಸರಿಯಲ್ಲ. ಅವರು ಯಾವ ಅರ್ಥ, ಹಿನ್ನೆಲೆಯಲ್ಲಿ ಹೇಳಿದ್ದಾರೆ ಎಂಬುವುದು ನನಗೆ ತಿಳಿದಿಲ್ಲ ಎಂದರು. ಅಲ್ಲದೇ ಸಚಿವ ರಮೇಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಕಳೆದ ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಕೊಡಿಸಿದ್ದಾಗಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ, ಆ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.