Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಲೆಕ್ಕಿಸಲಿಲ್ಲ, ಸಾಧ್ಯವಾದಷ್ಟು ಜೀವ ಉಳಿಸುವುದೊಂದೇ ನಮ್ಮ ತಲೆಯಲ್ಲಿತ್ತು- ಪ್ರತ್ಯಕ್ಷದರ್ಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾ ಲೆಕ್ಕಿಸಲಿಲ್ಲ, ಸಾಧ್ಯವಾದಷ್ಟು ಜೀವ ಉಳಿಸುವುದೊಂದೇ ನಮ್ಮ ತಲೆಯಲ್ಲಿತ್ತು- ಪ್ರತ್ಯಕ್ಷದರ್ಶಿ

Latest

ಕೊರೊನಾ ಲೆಕ್ಕಿಸಲಿಲ್ಲ, ಸಾಧ್ಯವಾದಷ್ಟು ಜೀವ ಉಳಿಸುವುದೊಂದೇ ನಮ್ಮ ತಲೆಯಲ್ಲಿತ್ತು- ಪ್ರತ್ಯಕ್ಷದರ್ಶಿ

Public TV
Last updated: August 8, 2020 4:12 pm
Public TV
Share
3 Min Read
FLIGHT
SHARE

– ಒಬ್ಬ ಪ್ರಯಾಣಿಕನನ್ನು ನನ್ನ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದೆ
– ಪತ್ನಿ, ಮಗುವಿಗಾಗಿ ಆತ ಅಳುತ್ತಿದ್ದ ದೃಶ್ಯ ಇನ್ನೂ ಕಣ್ಣಮುಂದಿದೆ

ತಿರುವನಂತಪುರಂ: ಕೇರಳದ ಕೋಯಿಕ್ಕೊಡ್ ವಿಮಾನ ನಿಲ್ದಾಣದ ದುರಂತ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದು, ಘಟನೆ ನಡೆದ ನಂತರ ರಕ್ಷಣಾ ಕಾರ್ಯ ಸಹ ಅದೇ ರೀತಿ ಭರದಿಂದ ಸಾಗಿದೆ. ಹೀಗಾಗಿಯೇ ಹಲವರ ಜೀವ ಉಳಿದಿದೆ. ಆದರೆ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರ ಪಾತ್ರ ಮಹತ್ವದ್ದಾಗಿದೆ. ವಿಮಾನ ವಿದೇಶದಿಂದ ಬಂದರೂ ಕೊರೊನಾ ಸೋಂಕು ತಗುಲುವ ಭಯವಿಲ್ಲದೆ ಹಲವರ ಜೀವವನ್ನು ರಕ್ಷಿಸಿದ್ದಾರೆ.

KERALA FLIGHT 4

ಟೇಬಲ್ ಟಾಪ್ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ವರ್ಷಗಟ್ಟಲೇ ಅನುಭವವಿರುತ್ತದೆ. ಆದರೆ ಸಾಮಾನ್ಯ ಜನರಿಗೆ ಇದರ ಬಗ್ಗೆ ಅರಿವಿರುವುದಿಲ್ಲ. ಆದರೂ ಸಹ ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಪೈಕಿ ಸ್ಥಳೀಯರಾದ ಫಝಲ್ ಪುಥಿಯಾಕಥ್ ಅವರ ಕಾರ್ಯ ಶ್ಲಾಘನೀಯವಾಗಿದೆ. ಇದನ್ನೂ ಓದಿ: ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

kerala flight

ಘಟನೆ ನಡೆಯುತ್ತಿದ್ದಂತೆಯೇ 32 ವರ್ಷದ ಬ್ಯುಸಿನೆಸ್ ಮ್ಯಾನ್ ಹಾಗೂ ಸ್ಥಳೀಯರು ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನ ಅವಘಡ ಸಂಭವಿಸಿದ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಒಟ್ಟು 190 ಪ್ರಯಾಣಿಕರ ಪೈಕಿ ದುರ್ಘಟನೆಯಲ್ಲಿ 18 ಜನ ಸಾವನ್ನಪ್ಪಿದ್ದು, 120ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ವಿಮಾನ ಅವಘಡ ಸಂಭವಿಸುತ್ತಿದ್ದಂತೆ ಬ್ಲಾಸ್ಟ್ ಆದ ರೀತಿ ದೊಡ್ಡ ಶಬ್ದ ಕೇಳಿಸಿದ್ದು, ತಕ್ಷಣವೇ ನಾನು ಹಾಗೂ ಇತರರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆವು. ಸ್ಥಳಕ್ಕೆ ಆಗಮಿಸಿದಾಗ ವಿಮಾನದಲ್ಲಿದ್ದವರೆಲ್ಲ ಕಿರುಚಾಡುತ್ತಿದ್ದರು. ಸಾಕಷ್ಟು ಜನ ರಕ್ತದ ಮಡುವಿನಲ್ಲಿದ್ದರು. ಹಲವರಿಗೆ ಗಂಭೀರ ಗಾಯಗಳಾಗಿದ್ದರೆ, ಇನ್ನೂ ಕೆಲವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅಪಘಾತದ ಪರಿಣಾಮ ಎಷ್ಟಿತ್ತೆಂದರೆ ಬೋಯಿಂಗ್ 737 ಮುಂದಿನ ಭಾಗ ಸುಮಾರು 20 ಮೀಟರ್ ನಷ್ಟು ಹಿಂದೆ ಬಿದ್ದಿತ್ತು. ಅಷ್ಟರ ಮಟ್ಟಿಗೆ ವಿಮಾನ ಅಪ್ಪಳಿಸಿತ್ತು ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಪುಥಿಯಾಕಥ್ ಭೀಕರತೆಯನ್ನು ವಿವರಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ದುರಂತದ ಬಳಿಕ ಎಚ್ಚರಿಸಿದ್ದೆ, ಆದ್ರೆ ನಿರ್ಲಕ್ಷಿಸಿದ್ರು – ವಾಯು ಸುರಕ್ಷಾ ತಜ್ಞ

KERAL FLIGHT

ನಾವು ತೆರೆಳಿದಾಗ ಆಗಲೇ ಇಬ್ಬರು ಪೈಲೆಟ್‍ಗಳು ಸಾವನ್ನಪ್ಪಿದ್ದರು. ವಿಮಾನಕ್ಕೆ ಬೆಂಕಿ ತಗುಲಿದ್ದರೆ ಇನ್ನೂ ಹೆಚ್ಚಿನ ಸಾವು ನೋವು ಸಂಭವಿಸುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ವಿಮಾನ ದುರಂತ ಸಂಭವಿಸಿದಾಗ ರಕ್ಷಣಾ ಕಾರ್ಯವನ್ನು ಹೇಗೆ ನಡೆಸಬೇಕು ಎಂಬುದನ್ನು ನಾನು ಈ ಹಿಂದೆ ದೂರದಿಂದ ನೋಡಿದ್ದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಡಮ್ಮಿ ವಿಮಾನದಿಂದ ಇದನ್ನು ಮಾಡುತ್ತಾರೆ. ಆದರೆ ಈ ಪ್ರಯೋಗವೇ ಬೇರೆ ವಾಸ್ತವವೇ ಬೇರೆ ಎಂದು ಈ ಘಟನೆ ನೋಡಿದ ಬಳಿಕ ತಿಳಿಯಿತು. ನಾವು ಹೇಗೆ ಸಿದ್ಧರಿದ್ದೇವೆ ಎಂಬುದು ಮುಖ್ಯವಲ್ಲ, ಸ್ಥಳದಲ್ಲಿ ಸಾವು, ನೋವು ಸಂಭವಿಸಿದಾಗ ಪರಿಸ್ಥಿತಿ ಬೇರೆ ರೀತಿಯೇ ಆಗಿರುತ್ತದೆ. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕಾಗುತ್ತದೆ ಎಂದು ಪುಥಿಯಾಕಥ್ ತಿಳಿಸಿದ್ದಾರೆ.

KERAL FLIGHT 1

ಪ್ರಯಾಣಿಕರಲ್ಲಿ ಯಾರಿಗೆ ಕೊರೊನಾ ಸೋಂಕು ತಗುಲಿರುತ್ತದೆಯೋ ಎಂಬುದರ ಕುರಿತು ನಾವು ತಲೆ ಕೆಡಿಸಿಕೊಳ್ಳಲಿಲ್ಲ. ಸಾಧ್ಯವಾದಷ್ಟು ಜನರನ್ನು ಉಳಿಸಬೇಕೆಂಬುದಷ್ಟೇ ನಮ್ಮ ತಲೆಯಲ್ಲಿತ್ತು ಎಂದು ಪುಥಿಯಾಕಥ್ ತಿಳಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿಯೂ ಒಬ್ಬ ಪ್ರಯಾಣಿನನ್ನು ನನ್ನ ಕಾರಿನಲ್ಲಿಯೇ ಆಸ್ಪತ್ರೆ ಸೇರಿಸಿದೆ. ಈ ವೇಳೆ ವ್ಯಕ್ತಿ ತನ್ನ ಪತ್ನಿ ಹಾಗೂ ಮಗುವಿಗಾಗಿ ಅಳುತ್ತಿದ್ದ. ಇದನ್ನು ನಾನು ಎಂದೂ ಮರೆಯುವುದಿಲ್ಲ. ನಾನು ಕಾರನ್ನು ಪರಿಶೀಲಿಸಿಲ್ಲ, ಖಂಡಿತವಾಗಿಯೂ ಹಿಂದಿನ ಸೀಟ್ ರಕ್ತವಾಗಿರುತ್ತದೆ. ನಾನೊಬ್ಬ ಮಾತ್ರವಲ್ಲ ನನ್ನಂತೆ ಹಲವರು ಚಿಕ್ಕ ಮಕ್ಕಳನ್ನು ತಮ್ಮ ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಿಜಕ್ಕೂ ಈ ದೃಶ್ಯ ಆಘಾತಕಾರಿಯಾಗಿತ್ತು ಎಂದು ವಿವರಿಸಿದ್ದಾರೆ.

flight

ಕೊರೊನಾ ವೈರಸ್ ಹಿನ್ನೆಲೆ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಒಂದೇ ಭಾರತ್ ಮಿಷನ್ ಅಡಿ ಸರ್ಕಾರ ಏರ್ ಇಂಡಿಯಾ ವಿಮಾನಗಳ ಹಾರಾಟ ನಡೆಸುತ್ತಿದೆ. ಇದರ ಭಾಗವಾಗಿ ದುಬೈನಿಂದ ವಿಮಾನ ಕೇರಳದ ಕೋಯಿಕ್ಕೊಡ್‍ಗೆ ಆಗಮಿಸಿದೆ. ವಿಮಾನದಲ್ಲಿ ಒಟ್ಟು 190 ಜನ ಪ್ರಯಾಣಿಕರಿದ್ದರು. ಕೋಯಿಕ್ಕೊಡ್ ಟೇಬಲ್-ಟಾಪ್ ವಿಮಾನ ನಿಲ್ದಾಣವಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

TAGGED:airportflightkeralaKozhikodeLocalsPublic TVrescue operationಕೇರಳಕೋಯಿಕ್ಕೊಡ್ಪಬ್ಲಿಕ್ ಟಿವಿರಕ್ಷಣಾ ಕಾರ್ಯವಿಮಾನವಿಮಾನ ನಿಲ್ದಾಣಸ್ಥಳೀಯರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 minute ago
kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
15 minutes ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
28 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
33 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
1 hour ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?